ಮೊದಲ ಟೆಸ್ಟ್‌ 3ನೇ ದಿನ | ‘ಪೋಪ್‌’ ಶತಕದಾಟದಿಂದ ‘ಹೋಪ್’ ಪಡೆದುಕೊಂಡ ಇಂಗ್ಲೆಂಡ್: 126 ರನ್‌ ಮುನ್ನಡೆ

Date:

Advertisements

ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವೆ ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನದಾಟ ಮುಕ್ತಾಯ ಕಂಡಿದ್ದು, ಟೀಮ್ ಇಂಡಿಯಾದ ಬಲಿಷ್ಠ ಸ್ಪಿನ್ ದಾಳಿಯ ನಡುವೆಯೂ ಕೂಡ ಶತಕ ಗಳಿಸುವ ಮೂಲಕ ಓಲಿ ಪೋಪ್, ಆಂಗ್ಲನ್ನರ ಹೋಪ್(ನಂಬಿಕೆ) ಅನ್ನು ಇನ್ನೂ ಜೀವಂತವಿಟ್ಟಿದ್ದಾರೆ.

ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್ ಕಳೆದುಕೊಂಡು 316 ರನ್‌ಗಳಿಸಿದೆ. ಆ ಮೂಲಕ 126 ರನ್‌ಗಳ ಮುನ್ನಡೆ ಸಾಧಿಸಿದೆ.

ಮುತ್ತಿನಗರಿಯಲ್ಲಿ ಶನಿವಾರ ಉತ್ತಮ ಇನ್ನಿಂಗ್ಸ್ ಆಡಿರುವ ಇಂಗ್ಲೆಂಡ್‌ನ ಬಲಗೈ ಬ್ಯಾಟರ್ ಓಲಿ ಪೋಪ್ 208 ಎಸೆತಗಳನ್ನು ಎದುರಿಸಿ, 17 ಬೌಂಡರಿಗಳ ನೆರವಿನಿಂದ ಔಟಾಗದೆ 148 ರನ್‌ ಗಳಿಸಿದ್ದಾರೆ. ಔಟಾಗದೆ 16 ರನ್ ಗಳಿಸಿರುವ ರೆಹಾನ್ ಅಹ್ಮದ್ ಜೊತೆಗೆ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Advertisements

ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಪೋಪ್ ಅವರನ್ನು ಔಟ್ ಮಾಡಲು ಟೀಮ್ ಇಂಡಿಯಾ ಸ್ಪಿನ್ ಬೌಲರ್‌ಗಳು ಸತತ ಪ್ರಯತ್ನ ನಡೆಸಿದರಾದರೂ, ಕೊನೆಯವರೆಗೂ ಸಫಲರಾಗಲಿಲ್ಲ. ಇವರನ್ನು ಔಟ್ ಮಾಡುವುದು ನಿಜಕ್ಕೂ ಟೀಮ್ ಇಂಡಿಯಾದ ಸ್ಟಾರ್ ಬೌಲರ್‌ಗಳಿಗೆ ಸವಾಲಾಯಿತು. ಟೀಮ್ ಇಂಡಿಯಾದ ಎಲ್ಲ ಬೌಲಿಂಗ್ ತಂತ್ರವನ್ನು ಮೆಟ್ಟಿನಿಂತು ಪೋಪ್ ಶತಕ ದಾಖಲಿಸಿಕೊಂಡರು.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನವು ಟೀಮ್ ಇಂಡಿಯಾದ ಬ್ಯಾಟಿಂಗ್‌ನೊಂದಿಗೆ ಪ್ರಾರಂಭವಾಯಿತು. ಎರಡನೇ ದಿನದಾಟ ಮುಗಿದಾಗ 7 ವಿಕೆಟ್ ಕಳೆದುಕೊಂಡು 421 ರನ್‌ ಗಳಿಸಿತ್ತು. ರವೀಂದ್ರ ಜಡೇಜಾ 81 ಮತ್ತು ಅಕ್ಷರ್ ಪಟೇಲ್ 35 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು.

ಮೂರನೇ ದಿನದಾಟ ಪ್ರಾರಂಭಿಸಿದ ಟೀಮ್ ಇಂಡಿಯಾದ ಈ ಜೋಡಿ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲು ಸಾಧ್ಯವಾಗದೆ ಆತಿಥೇಯ ತಂಡದ ಇನ್ನಿಂಗ್ಸ್ 436 ರನ್ ಗಳಿಗೆ ಆಲೌಟಾದರು. ಇದರೊಂದಿಗೆ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್‌ಗಳ ಮುನ್ನಡೆ ಸಾಧಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 246 ರನ್ ಗಳಿಸಿ ಆಲೌಟಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರವಾಗಿ ಕ್ರಾಲಿ 20, ಬೆನ್ ಡಕೆಟ್ 47, ಬೆನ್ ಫೋಕ್ಸ್ 34 ರನ್ ಗಳಿಸಿದರು. ಆದರೆ ಜೋ ರೂಟ್(2 ರನ್), ಬೆನ್ ಸ್ಟೋಕ್ಸ್(6 ರನ್), ಜಾನಿ ಬೈರ್‌ಸ್ಟೋವ್(10 ರನ್) ಬ್ಯಾಟ್‌ನಿಂದ ಉತ್ತಮ ರನ್ ಬರಲೇ ಇಲ್ಲ.

ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಇಂಗ್ಲೆಂಡ್, ಒಲಿ ಪೋಪ್ ಅವರ ಶತಕದ ನೆರವಿನಿಂದ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 316 ರನ್ ಸೇರಿಸಿದ್ದು, 126 ರನ್‌ಗಳ ಮುನ್ನಡೆ ಸಾಧಿಸಿದೆ.

ಮೂರನೇ ದಿನದ ಬೌಲಿಂಗ್‌ನಲ್ಲಿ ಟೀಮ್ ಇಂಡಿಯಾದ ಪರವಾಗಿ ರವೀಂದ್ರ ಜಡೇಜಾ ಹಾಗೂ ಬುಮ್ರಾ ತಲಾ 2 ವಿಕೆಟ್ ಪಡೆದುಕೊಂಡರೆ, ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X