ಕಾಂಗ್ರೆಸ್‌ನ ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಐಪಿಎಲ್‌ಗೆ ಹೋಲಿಸಿದ ಕ್ರಿಕೆಟಿಗ ವೆಂಕಿ: ನೆಟ್ಟಿಗರ ಆಕ್ರೋಶ

Date:

Advertisements

ಭಾರತ ತಂಡದ ಮಾಜಿ ಕ್ರಿಕೆಟಿಗ ಕರ್ನಾಟಕದ ಬಿ ಎಸ್ ವೆಂಕಟೇಶ್ ಪ್ರಸಾದ್ ಕಾಂಗ್ರೆಸ್‌ನ ಚುನಾವಣೆ ಪ್ರಣಾಳಿಕೆಯಾದ ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಈ ಯೋಜನೆಯನ್ನು ‘ಕರುಣಾಜನಕ’ ಎಂದು ಕರೆದಿದ್ದಾರೆ.

ವೆಂಕಟೇಶ್ ಪ್ರಸಾದ್ ಅವರು ಕಾಂಗ್ರೆಸ್ ಹೆಸರನ್ನು ಬಳಸದೆ ಪರೋಕ್ಷವಾಗಿ ಟೀಕಿಸಿದ್ದು, ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಐಪಿಎಲ್ ತಂಡಗಳಿಗೆ ಹೋಲಿಸಿದ್ದಾರೆ.

“ರಾಜಕೀಯ ಪಕ್ಷವೊಂದರ ಚುನಾವಣಾ ಪ್ರಣಾಳಿಕೆಯು ಬಡವರಿಗೆ ಶ್ರೀಮಂತರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿದೆ. ನಿಜವಾಗಿಯು ಬಡವರನ್ನು ಮೇಲೆತ್ತಬೇಕಿದೆ, ಆದರೆ ಈ ಯೋಜನಾ ಪ್ರಕ್ರಿಯೆಯು ಕರುಣಾಜನಕವಾಗಿದೆ. ರಾಜಸ್ಥಾನ ರಾಯಲ್ಸ್, ಕೆಕೆಆರ್ ಹಾಗೂ ಹೈದರಾಬಾದ್ ತಂಡಗಳು ಗಳಿಸಿದ ತಲಾ 4 ಅಂಕಗಳನ್ನು ಕೆಳಗಿರುವ ಮೂರು ತಂಡಗಳಿಗೆ ಮರು ಹಂಚಿಕೆ ಮಾಡಿದರೆ ಅವರು ಪ್ಲೇಆಫ್‌ಗೆ ಹೋಗುತ್ತಾರೆ” ಎಂದು ಅಣಕಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕ್ರಿಕೆಟಿಗನ ನಡೆಯನ್ನು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಿಯಾಜ್ ಎಂಬ ನೆಟ್ಟಿಗರು ಮಣಿಪುರ ಹಿಂಸಾಚಾರ, ಚುನಾವಣಾ ಬಾಂಡ್ ಹಗರಣ, ಕುಸ್ತಿಪಟುಗಳ ಪ್ರತಿಭಟನೆ ಹಾಗೂ ರೈತರ ಪ್ರತಿಭಟನೆ ನಿಮಗೆ ತಿಳಿದಿದೆಯೆ? ಎಂದು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ನೆಟ್ಟಿಗರು, ಮುಂದಿನ ಪೀಳಿಗೆ ಉತ್ತಮ ಅನುಕೂಲಗಳನ್ನು ಪಡೆದು ಸಂತಸದಿಂದಿರುವುದು ನಿಮಗೆ ಇಷ್ಟವಿಲ್ಲದ ಕಾರಣ ನೀವು ಆರ್ಥಿಕ ಹಾಗೂ ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದೀರಿ ಎಂದು ಟೀಕಿಸಿದ್ದಾರೆ.

ಬೆಲೆ ಏರಿಕೆ, ಪೆಟ್ರೋಲ್ ಏರಿಕೆ, ಹಣದುಬ್ಬರ, ಕಪ್ಪು ಹಣ, ನೋಟು ರದ್ದತಿ, ಮನೆಗಳ ನೆಲಸಮ, ನರಮೇಧ, ರೈತರ ಪ್ರತಿಭಟನೆ, ಜೆಎನ್‌ಯು ಗಲಭೆಗಳ ಬಗ್ಗೆ ನೀವು ಬಾಯಿ ಬಿಡುತ್ತಿಲ್ಲ. ಇದಕ್ಕೆಲ್ಲ ಉತ್ತರ ಸಂಪತ್ತಿನ ಮರುಹಂಚಿಕೆಯಾಗಿದೆ. ಬಿಸಿಸಿಐನ ಪ್ರಭಾವಿ ಹುದ್ದೆ ಹಾಗೂ ರಾಜ್ಯಸಭೆ ಸೀಟಿಗಾಗಿ ಈ ರೀತಿ ಮಾತನಾಡುತ್ತಿದ್ದೀರಿ ಎಂದು ಮತ್ತೊಬ್ಬ ನೆಟ್ಟಿಗರು ಕುಟುಕಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತೆಲ್ಲವನ್ನು ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ನೀಡುತ್ತಾರೆ ಎಂದು ರಾಜಸ್ಥಾನದ ಚುನಾವಣಾ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ ಒಂದು ದಿನದ ನಂತರ ವೆಂಕಟೇಶ್ ಪ್ರಸಾದ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಏಪ್ರಿಲ್‌ 6 ರಂದು ಹೈದರಾಬಾದ್‌ನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ರಾಹುಲ್ ಗಾಂಧಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಂಡು ಅವರ ಸಂಪತ್ತನ್ನು ದೇಶದ ಕಡು ಬಡವರಿಗೆ ನೀಡಲಾಗುವುದು ಎಂದು ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X