ಪ್ರಥಮ ಟೆಸ್ಟ್‌ ಕ್ರಿಕೆಟ್ | ಅಶ್ವಿನ್ ಸ್ಪಿನ್ ಮೋಡಿ, ಜೈಸ್ವಾಲ್ ಯಶಸ್ವಿ ಬ್ಯಾಟಿಂಗ್ ಬಲದಿಂದ ಗೆದ್ದ ಭಾರತ

Date:

Advertisements

ವೆಸ್ಟ್‌ ಇಂಡೀಸ್‌ನ ಡಾಮಿನಿಕಾ ಕ್ರೀಡಾಂಗಣದಲ್ಲಿ ಆರಂಭವಾದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್ ವಿರುದ್ಧ ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಬೌಲರ್ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಎದುರಾಳಿ ತಂಡದ ಬೆನ್ನೆಲುಬು ಮುರಿದಿದ್ದು, ಕೇವಲ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ ಏಳು ವಿಕೆಟ್‌ ಪತನ ಮಾಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಬುಧವಾರ ಆರಂಭವಾದ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವೆಸ್ಟ್‌ ಇಂಡೀಸ್‌ ತಂಡ 150 ರನ್‌ಗಳಿಗೆ ಆಲೌಟ್‌ ಆಗಿತ್ತು. 150 ರನ್‌ಗಳ ಎದುರು ಬ್ಯಾಂಟಿಂಗ್‌ ನಡೆಸಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

Advertisements

ಎರಡನೇ ಇನ್ನಿಂಗ್ಸ್‌ನಲ್ಲಿ ಕೆರೀಬಿಯನ್ ಬ್ಯಾಟ್ಸ್‌ಮ್ಯಾನ್‌ಗಳಿಂದ ಉತ್ತಮ ಸಾಧನೆಯ ನಿರೀಕ್ಷೆ ಇಟ್ಟುಕೊಂಡಿತ್ತು. ಕೇವಲ 50.3 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆತಿಥೇಯ ತಂಡ ಮೂರನೇ ದಿನವೇ ಪಂದ್ಯ ಕೊನೆಯಾಗಿಸಿತು.

ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್ ಕೊಹ್ಲಿ 76 ರನ್ ಕಲೆಹಾಕಿ ಭಾರತ ತಂಡಕ್ಕೆ ಇನಿಂಗ್ಸ್ ಗೆ ಬಲ ತುಂಬಿದ್ದರು.

ಈ ಸುದ್ದಿ ಓದಿದ್ದೀರಾ? ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ : ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಈ ಬಾರಿ ಪಂದ್ಯದಲ್ಲಿ ಗೆದ್ದ ಭಾರತ ತಂಡಕ್ಕೆ ಬೆನ್ನೆಲುಬು ಆಗಿದ್ದವರು ಆರ್ ಅಶ್ವಿನ್. ಅವರ ವೃತ್ತಿ ಜೀವನದಲ್ಲಿಯೇ ಅತ್ಯುತ್ತಮ ಸಾಧನೆಯಾಗಿ ದಾಖಲೆಯಾಗಿದೆ. ಕೇವಲ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ ಏಳು ವಿಕೆಟ್‌ ಕಿತ್ತು ಅಶ್ವಿನ್ ಟೆಸ್ಟ್‌ ಕ್ರಿಕೆಟ್‌ನಲ್ಲಿ 33ನೇ ಬಾರಿ ಐದು ವಿಕೆಟ್‌ಗಳನ್ನು ಪಡೆದರು.

ಎರಡನೇ ಪಂದ್ಯ ಟ್ರಿನಿಡಾಡ್ ನ ಕ್ವೀನ್ಸ್ ಪಾರ್ಕ್ ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X