ಟೀಮ್ ಇಂಡಿಯಾವನ್ನು ಆಲೌಟ್ ಮಾಡಿ ಏಪ್ಯಾ ಕಪ್‌ನಲ್ಲಿ ಹೊಸ ದಾಖಲೆ ಬರೆದ ಪಾಕ್ ವೇಗಿಗಳು

Date:

Advertisements
  • ಎಲ್ಲ 10 ವಿಕೆಟ್‌ಗಳು ಪಾಕಿಸ್ತಾನದ ವೇಗಿಗಳ ಪಾಲು; ವಿಶಿಷ್ಟ ದಾಖಲೆ
  • ಮಳೆಯಿಂದಾಗಿ ರದ್ದಾದ ಪಂದ್ಯದಲ್ಲಿ ಭಾರತ 48.5 ಓವರ್‌ಗಳಲ್ಲಿ 266 ರನ್

ಏಷ್ಯಾಕಪ್ 2023ರಲ್ಲಿ ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಪೂರ್ಣಗೊಳ್ಳದೆ ಮಳೆಯಿಂದಾಗಿ ರದ್ದಾಯಿತು.

ಟೀಮ್ ಇಂಡಿಯಾದ ಬ್ಯಾಟಿಂಗ್ ಇನ್ನಿಂಗ್ಸ್ ಮುಕ್ತಾಯದ ಬಳಿಕ ಶುರುವಾದ ಮಳೆ ನಿಲ್ಲಲೇ ಇಲ್ಲ. ಕೆಲ ಹೊತ್ತು ಕಾದರೂ ಪಾಕಿಸ್ತಾನಕ್ಕೆ ಟಾರ್ಗೆಟ್ ಬೆನ್ನಟ್ಟಲು ಮಳೆ ಅವಕಾಶ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಪಂದ್ಯವನ್ನು ರದ್ದು ಮಾಡಲಾಯಿತು.

ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಹೀಗಾಗಿ ಭಾರತ ಒಂದು ಅಂಕ ಸಂಪಾದಿಸಿದ್ದರೆ, ಉದ್ಘಾಟನಾ ಪಂದ್ಯದಲ್ಲಿ ನೇಪಾಳದ ವಿರುದ್ಧ ಗೆದ್ದಿದ್ದ ಕಾರಣಕ್ಕೆ ಪಾಕಿಸ್ತಾನ ಒಟ್ಟು ಮೂರು ಪಾಯಿಂಟ್ ಸಂಪಾದಿಸಿದೆ. ಈ ಮೂಲಕ ಬಾಬರ್ ಆಝಂ ಪಡೆ ಸೂಪರ್-4 ಹಂತಕ್ಕೂ ತೇರ್ಗಡೆ ಆಗಿದೆ.

Advertisements

ಇದೀಗ ಕೇವಲ ಒಂದು ಅಂಕ ಹೊಂದಿರುವ ಭಾರತ, ಸೂಪರ್ ಫೋರ್ ಹಂತಕ್ಕೆ ತೇರ್ಗಡೆಯಾಗಲು ಸೆ.4 ರಂದು ತನ್ನ ಮುಂದಿನ ಪಂದ್ಯದಲ್ಲಿ ನೇಪಾಳವನ್ನು ಸೋಲಿಸಬೇಕಿದೆ.

ಈ ನಡುವೆ ಇದೇ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಆಲೌಟ್ ಮಾಡಿದ್ದ ಪಾಕಿಸ್ತಾನ ಬೌಲರ್‌ಗಳು ಹೊಸ ದಾಖಲೆ ಬರೆದಿದ್ದಾರೆ.

ಶನಿವಾರದ ಏಷ್ಯಾಕಪ್ ಮುಖಾಮುಖಿಯಲ್ಲಿ ಪಾಕಿಸ್ತಾನದ ವೇಗಿಗಳಾದ ಶಾಹೀನ್ ಶಾ ಅಫ್ರಿದಿ, ಹಾರಿಸ್ ರವೂಫ್ ಮತ್ತು ನಸೀಮ್ ಶಾ ಅವರು ಎಲ್ಲ 10 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ ಪಂದ್ಯಾವಳಿಯಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.

ರೋಹಿತ್ ಪಡೆಯನ್ನು 266 ಕ್ಕೆ ನಿರ್ಬಂಧಿಸಿದ್ದ ಈ ಮೂವರು ವೇಗಿಗಳು, ಏಷ್ಯಾ ಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಇನ್ನಿಂಗ್ಸ್‌ನ ಎಲ್ಲ 10 ವಿಕೆಟ್‌ಗಳು ಕೇವಲ ವೇಗಿಗಳ ಪಾಲಾಗಿದೆ. ಕೇವಲ ವೇಗಿಗಳೇ ಮಾತ್ರ ಎಲ್ಲ ವಿಕೆಟ್ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಪಾಕ್‌ನ ಮೂವರು ಸ್ಪಿನ್ನರ್‌ಗಳು ಬೌಲಿಂಗ್ ನಡೆಸಿದ್ದಾರಾದರೂ, ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು.

ನಿನ್ನೆಯ ಪಂದ್ಯದಲ್ಲಿ ಪಾಕ್ ಪರ ಬೌಲಿಂಗ್‌ನಲ್ಲಿ ವೇಗಿಗಳಾದ ಶಾಹೀನ್ ಅಫ್ರಿದಿ 35 ರನ್ ನೀಡಿ 4 ವಿಕೆಟ್ ಗಳಿಸಿ ಯಶಸ್ವಿಯಾದರೆ, ಹಾರಿಸ್ ರವೂಫ್ ನಸೀಂ ಶಾ ತಲಾ ಮೂರು ವಿಕೆಟ್‌ಗಳನ್ನು ಪಡೆಯುವಲ್ಲಿ ಸಫಲರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X