ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ : ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

Date:

Advertisements
  • ಮೂರು ಟಿ20, ಮೂರು ಏಕದಿನ ಪಂದ್ಯ, ಎರಡು ಟೆಸ್ಟ್ ಸರಣಿ
  • ಗಾಂಧಿ-ಮಂಡೇಲಾ ಹೆಸರಿನಲ್ಲಿ ಫ್ರೀಡಮ್ ಸರಣಿ ಟೆಸ್ಟ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ)ವು 2023ರ ಡಿಸೆಂಬರ್ ಮತ್ತು 2024ರ ಜನವರಿಯಲ್ಲಿ ಟೀಮ್ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿರುವ ಎಲ್ಲ ಮಾದರಿಯ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ.

“ಟೀಮ್ ಇಂಡಿಯಾದ ಈ ಪ್ರವಾಸವು ಮೂರು ಪಂದ್ಯಗಳ T20 ಸರಣಿಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಟೆಸ್ಟ್‌ ಪಂದ್ಯವು ಗಾಂಧಿ-ಮಂಡೇಲಾ ಟ್ರೋಫಿಗಾಗಿ ಫ್ರೀಡಮ್ ಸರಣಿಯೊಂದಿಗೆ ಮುಕ್ತಾಯಗೊಳ್ಳುತ್ತದೆ” ಎಂದು ಬಿಸಿಸಿಐ ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

“ಫ್ರೀಡಂ ಸರಣಿಯು ಎರಡು ಅತ್ಯುತ್ತಮ ಟೆಸ್ಟ್ ತಂಡಗಳನ್ನು ಒಳಗೊಂಡಿರುವುದು ಮಾತ್ರವಲ್ಲ, ನಮ್ಮ ರಾಷ್ಟ್ರಗಳನ್ನು ಮತ್ತು ಸುತ್ತಮುತ್ತಲಿನ ಜಗತ್ತನ್ನು ರೂಪಿಸಿದ ಇಬ್ಬರು ಮಹಾನ್ ನಾಯಕರಾದ ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರನ್ನು ಗೌರವಿಸುವುದರಿಂದಲೂ ಮಹತ್ವದ್ದಾಗಿದೆ” ಎಂದು ಬಿಸಿಸಿಐನ ಗೌರವ ಕಾರ್ಯದರ್ಶಿ ಜಯ್ ಷಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisements

ಮೂರು T20 ಪಂದ್ಯಗಳು ಡಿ.10ರಂದು ಡರ್ಬನ್‌ನಲ್ಲಿ, ಡಿ. 12ರಂದು ಗೆಬರ್ಹಾದಲ್ಲಿ ಮತ್ತು ಡಿ. 14ರಂದು ಜೋಹಾನ್ಸ್‌ಬರ್ಗ್ ನಲ್ಲಿ ನಡೆಯಲಿವೆ.

ಮೂರು ಏಕದಿನ ಪಂದ್ಯದ ಸರಣಿ ಕೂಡ ನಡೆಯಲಿದೆ. ಮೊದಲ ಏಕದಿನ ಪಂದ್ಯವು ಡಿ.17ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದ್ದು, ಎರಡನೇ ಪಂದ್ಯವು ಡಿ. 19ರಂದು ಗೆಬರ್ಹಾದಲ್ಲಿ ಮತ್ತು ಡಿ.21ರಂದು ಪಾರ್ಲ್‌ನಲ್ಲಿ ನಡೆಯಲಿದೆ.

ಎರಡು ಪಂದ್ಯಗಳ ಗಾಂಧಿ-ಮಂಡೇಲಾ ಟೆಸ್ಟ್ ಸರಣಿಯ ಪೈಕಿ ಮೊದಲ ಟೆಸ್ಟ್‌ ಡಿ.26ರಿಂದ 30ರವರೆಗೆ ಸೆಂಚುರಿಯನ್‌ನಲ್ಲಿ ಹಾಗೂ ಎರಡನೇ ಟೆಸ್ಟ್‌ 2024ರ ಜನವರಿ ಮೂರರಿಂದ ಏಳರವರೆಗೆ ಕೇಪ್ ಟೌನ್‌ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X