ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗಿಯಾದ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ

Date:

  • ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನಾ ನಿರತರೊಂದಿಗೆ ಭಾಗಿಯಾದ ಭೂಪಿಂದರ್ ಸಿಂಗ್ ಹೂಡಾ
  • ಬ್ರಿಜ್ ಭೂಷಣ್ ವಿರುದ್ಧ ದೂರು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ಪ್ರತಿಭಟನಾ ನಿರತರ ಆರೋಪ

ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸೇರಿದಂತೆ ಹಲವು ಪ್ರಮುಖರು ಮಂಗಳವಾರ ದೆಹಲಿಯ ಜಂತರ್ ಮಂತರ್‌ಗೆ ಭೇಟಿ ನೀಡಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡಿದರು.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಸೋಮವಾರ(ಏಪ್ರಿಲ್ 24) ಟ್ವೀಟ್ ಮಾಡಿರುವ ಭೂಪಿಂದರ್ ಸಿಂಗ್ ಹೂಡಾ, “ದೇಶಕ್ಕೆ ಕೀರ್ತಿ ತಂದ ಅಂತರರಾಷ್ಟ್ರೀಯ ಮಟ್ಟದ ಆಟಗಾರರು ಧರಣಿ ಕುಳಿತಿರುವುದು ವಿಷಾದದ ಸಂಗತಿ. ಅವರಿಗೆ ನ್ಯಾಯ ಸಿಗಬೇಕು. ನಾನು ಕೂಡ ದೆಹಲಿಯ ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತೇನೆ” ಎಂದು ತಿಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುದ್ದಿ ಸಂಸ್ಥೆಯೊಂದು ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಹೂಡಾ ಸೇರಿದಂತೆ ಹಲವು ಕುಸ್ತಿಪಟುಗಳನ್ನು ಕಾಣಬಹುದು.

ಮಂಗಳವಾರ (ಏಪ್ರಿಲ್ 25) ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಣ್ಣೀರು ಹಾಕುತ್ತಿರುವ ಕುಸ್ತಿಪಟು ಸಾಕ್ಷಿ ಮಲಿಕ್ ಅವರೊಂದಿಗೆ ಮಾತನಾಡಿರುವ ದೃಶ್ಯಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸೋಜಾ, “ದೇಶದ ಕೀರ್ತಿಯನ್ನು ಎತ್ತಿ ಹಿಡಿದ ಈ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ. ಮಹಿಳಾ ಸುರಕ್ಷತೆಯ ಬಗ್ಗೆ ದೊಡ್ಡ ಕಥೆಗಳನ್ನು ಹೇಳುವ ಪ್ರಧಾನಿ ಮತ್ತು ಅವರ ಕೂಟ ಲೈಂಗಿಕ ದೌರ್ಜನ್ಯವೆಸಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಉಳಿಸಲು ಮೌನವಾಗಿ ಕುಳಿತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಅಥವಾ ಇನ್ನಾವುದೇ ಪಕ್ಷವಿರಲಿ ಎಲ್ಲ ಪಕ್ಷಗಳಿಗೂ ಸ್ವಾಗತವಿದೆ. ನಾವು ಪದಕವನ್ನು ಗೆದ್ದಾಗ, ನಾವು ಯಾವುದೇ ಪಕ್ಷದ ಧ್ವಜವನ್ನು ಹಿಡಿಯದೆ ಭಾರತೀಯ ಧ್ವಜವನ್ನು ಮಾತ್ರ ಹಿಡಿಯುತ್ತೇವೆ. ನಾವು ಕೇವಲ ಒಂದು ಪಕ್ಷದೊಂದಿಗೆ ಮಾತ್ರ ಸಂಬಂಧ ಹೊಂದಿಲ್ಲ. ನಾವು ದೇಶದ ಮಹಿಳೆಯರಿಗಾಗಿ ಹೋರಾಡದಿದ್ದರೆ, ಮತ್ಯಾವುದರ ವಿರುದ್ಧವೂ ಹೋರಾಡಲು ಸಾಧ್ಯವಿಲ್ಲ” ಎಂದು ಬಜರಂಗ್ ಪೂನಿಯಾ ಸೋಮವಾರ ಜಂತರ್ ಮಂತರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

“ಬ್ರಿಜ್ ಭೂಷಣ್ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಏಳು ಮಹಿಳೆಯರಿಗೆ ತಮ್ಮ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ. ಡಬ್ಲ್ಯುಎಫ್‌ಐನ ಹಲವಾರು ಸದಸ್ಯರು ದೂರುದಾರ ಕುಸ್ತಿಪಟುಗಳನ್ನು ಸಂಪರ್ಕಿಸಲಾಗಿದೆ” ಎಂದು ಪುನಿಯಾ ಆರೋಪಿಸಿದ್ದಾರೆ.

ಜನವರಿಯಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರು ಮತ್ತು ಇತರ ತರಬೇತುದಾರರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ ಮೂರು ತಿಂಗಳ ನಂತರ ಪುನಃ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ...

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ...

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ...