ಫ್ರೆಂಚ್ ಓಪನ್ | ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ನೊವಾಕ್ ಜೊಕೊವಿಕ್

Date:

Advertisements

ನೊವಾಕ್ ಜೊಕೊವಿಕ್ ಟೆನಿಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಗೆಲ್ಲುವ ಮೂಲಕ, 23ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಟೆನಿಸ್‌ ಇತಿಹಾಸದಲ್ಲಿ ಅತಿಹೆಚ್ಚು ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ದಾಖಲೆ (22), ಇದುವರೆಗೂ ಸ್ಪೇನ್‌ನ ರಾಫೆಲ್ ನಡಾಲ್ ಹೆಸರಿನಲ್ಲಿತ್ತು. ಇದೀಗ  35 ವರ್ಷ ವಯಸ್ಸಿನ ಸರ್ಬಿಯಾದ ದಿಗ್ಗಜ ಆಟಗಾರ  ಜೊಕೊವಿಕ್, ನಡಾಲ್‌ರನ್ನು ಹಿಂದಿಕ್ಕಿದ್ದಾರೆ.

ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ನಾರ್ವೆಯ 4ನೇ ಶ್ರೇಯಾಂಕದ ಕ್ಯಾಸ್ಪರ್ ರುಡ್ ಅವರನ್ನು ಜೊಕೊವಿಕ್ ನೇರ ಸೆಟ್‌ಗಳ (7-6, 6-3, 7-5) ಅಂತರದಲ್ಲಿ ಮಣಿಸಿದರು.  

Advertisements

3 ಗಂಟೆ 13 ನಿಮಿಷಗಳ ಕಾಲ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಕ್ಯಾಸ್ಪರ್ ರುಡ್, ಜೊಕೊವಿಕ್‌ಗೆ ಪ್ರಬಲ ಸವಾಲೊಡ್ಡಿದ್ದರು. ಮೊದಲ ಸೆಟ್‌ ಟೈ ಬ್ರೇಕರ್‌ಗೆ ಸಾಗಿತ್ತು. ಎರಡನೇ ಸೆಟ್‌ನಲ್ಲಿ ಜೊಕೊವಿಕ್‌ ಸ್ಪಷ್ಟ ಮೇಲೂಗೈ ಸಾಧಿಸಿದ್ದರು. ಅಂತಿಮ ಮತ್ತು ನಿರ್ಣಾಯಕ ಸೆಟ್‌ನಲ್ಲೂ ಜೊಕೊವಿಕ್‌ ಕೈ ಮೇಲಾಯಿತು.

 14 ಬಾರಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿರುವ, ʻಆವೆ ಮಣ್ಣಿನ ಅಂಗಳದ ಒಡೆಯʼ ಖ್ಯಾತಿಯ ರಾಫೆಲ್ ನಡಾಲ್, ಗಾಯದ ಕಾರಣದಿಂದ ಇದೇ ಮೊದಲ ಬಾರಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದು ಜೊಕೊವಿಕ್‌ ದಾಖಲೆಯ ಹಾದಿಯನ್ನು ಸುಗಮಗೊಳಿಸಿತ್ತು.

3ನೇ ಫ್ರೆಂಚ್ ಓಪನ್ ಕಿರೀಟ ಗೆಲ್ಲುವ ಮೂಲಕ ಜೊಕೊವಿಕ್,  ಎಲ್ಲಾ 4 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಕನಿಷ್ಠ ಮೂರು ಬಾರಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆಯನ್ನೂ ತನ್ನದಾಗಿಸಿಕೊಂಡರು. ತಮ್ಮ ಕೊನೆಯ 7 ಗ್ರ್ಯಾಂಡ್ ಸ್ಲ್ಯಾಮ್ ಫೈನಲ್‌ಗಳ ಪೈಕಿ ಆರರಲ್ಲೂ ದಿಗ್ವಿಜಯ ಸಾಧಿಸಿರುವ ಜೊಕೊವಿಕ್, ಕನಿಷ್ಠ 25 ಗ್ರ್ಯಾಂಡ್ ಸ್ಲ್ಯಾಮ್ ಗೆಲ್ಲುವುದು ಬಹುತೇಕ ಖಚಿತವಾಗಿದೆ.

 ಮಹಿಳಾ ಸಿಂಗಲ್ಸ್‌ನಲ್ಲಿ 23 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳೊಂದಿಗೆ ನಿವೃತ್ತಿ ಘೋಷಿಸಿದ್ದ ಟೆನಿಸ್‌ ದಂತಕಥೆ ಸೆರೆನಾ ವಿಲಿಯಮ್ಸ್‌ ಸಾಧನೆಯನ್ನು ಜೊಕೊವಿಕ್ ಸರಿಗಟ್ಟಿದ್ದಾರೆ.

ರೋಜರ್‌ ಫೆಡರರ್ 2010 ರಲ್ಲಿ 16 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಾಗ, ನಡಾಲ್ 9 ಮತ್ತು ಜೊಕೊವಿಕ್ ಕೇವಲ 1 ಗ್ರ್ಯಾಂಡ್ ಸ್ಲಾಮ್ ಕಿರೀಟವನ್ನು ಹೊಂದಿದ್ದರು. ಇದೀಗ 13 ವರ್ಷಗಳ ಬಳಿಕ ಜೊಕೊವಿಕ್, 25 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆಲ್ಲುವ ಅವಕಾಶ ಹೊಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X