ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ; ಕೊಹ್ಲಿ ಕಾಲೆಳೆದ ಗೌತಮ್‌ ಗಂಭೀರ್

Date:

ಐಪಿಎಲ್‌ 16ನೇ ಆವೃತ್ತಿಗೆ ತೆರೆ ಬಿದ್ದರೂ ಸಹ ಲಖನೌ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್‌ ಅವರಿಗೆ ವಿರಾಟ್‌ ಕೊಹ್ಲಿ ಮೇಲಿನ ಕೋಪ ಇನ್ನೂ ಕಡಿಮೆಯಾದಂತೆ ಅನಿಸುತ್ತಿಲ್ಲ.

ಅಹಮದಾಬಾದ್‌ನಲ್ಲಿ ಸೋಮವಾರ ತಡರಾತ್ರಿ ನಡೆದ ರೋಮಾಂಚನಕಾರಿ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 5ನೇ ಬಾರಿಗೆ ಚಾಂಪಿಯನ್‌ ಪಟ್ಟವನ್ನೇರಿತ್ತು. ಆ ಮೂಲಕ ಐಪಿಎಲ್‌ನಲ್ಲಿ ಅತಿಹೆಚ್ಚು ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನು ಸಿಎಸ್‌ಕೆ ಸರಿಗಟ್ಟಿತ್ತು.

ಪಂದ್ಯದ ಬಳಿಕ ಟ್ವೀಟ್‌ ಮಾಡಿದ ಲಖನೌ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್ ಗಂಭೀರ್‌, “ಸಿಎಸ್‌ಕೆ ತಂಡಕ್ಕೆ ಅಭಿನಂದನೆಗಳು. ಐಪಿಎಲ್‌ನಲ್ಲಿ ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ. ಐದು ಬಾರಿ ಪ್ರಶಸ್ತಿ ಗೆಲ್ಲುವುದು ನಂಬಲಾಗದ ಸಾಧನೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಒಂದು ಕಡೆ ಧೋನಿ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸಿದ ಗಂಭೀರ್‌ ಮತ್ತೊಂದೆಡೆ ಕಳೆದ 16 ಆವೃತ್ತಿಯಲ್ಲೂ ಒಮ್ಮೆಯೂ ಐಪಿಎಲ್‌ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ವಿರಾಟ್‌ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ಗಂಭೀರ್‌-ಕೊಹ್ಲಿ ಚಕಮಕಿ

ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಲಖನೌ ತಂಡ ತನ್ನ ತವರು ಮೈದಾನದಲ್ಲಿ ಆರ್‌ಸಿಬಿ ತಂಡಕ್ಕೆ 18 ರನ್‌ಗಳಿಂದ ಶರಣಾಗಿತ್ತು. ಪಂದ್ಯದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ನೀಡುತ್ತಿದ್ದ ವೇಳೆ, ವಿರಾಟ್‌ ಕೊಹ್ಲಿ ಮತ್ತು ಗೌತಮ್‌ ಗಂಭೀರ್ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...