ಐಪಿಎಲ್ 16ನೇ ಆವೃತ್ತಿಗೆ ತೆರೆ ಬಿದ್ದರೂ ಸಹ ಲಖನೌ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್ ಅವರಿಗೆ ವಿರಾಟ್ ಕೊಹ್ಲಿ ಮೇಲಿನ ಕೋಪ ಇನ್ನೂ ಕಡಿಮೆಯಾದಂತೆ ಅನಿಸುತ್ತಿಲ್ಲ.
ಅಹಮದಾಬಾದ್ನಲ್ಲಿ ಸೋಮವಾರ ತಡರಾತ್ರಿ ನಡೆದ ರೋಮಾಂಚನಕಾರಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿ ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ 5ನೇ ಬಾರಿಗೆ ಚಾಂಪಿಯನ್ ಪಟ್ಟವನ್ನೇರಿತ್ತು. ಆ ಮೂಲಕ ಐಪಿಎಲ್ನಲ್ಲಿ ಅತಿಹೆಚ್ಚು ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್ ದಾಖಲೆಯನ್ನು ಸಿಎಸ್ಕೆ ಸರಿಗಟ್ಟಿತ್ತು.
ಪಂದ್ಯದ ಬಳಿಕ ಟ್ವೀಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್, “ಸಿಎಸ್ಕೆ ತಂಡಕ್ಕೆ ಅಭಿನಂದನೆಗಳು. ಐಪಿಎಲ್ನಲ್ಲಿ ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ. ಐದು ಬಾರಿ ಪ್ರಶಸ್ತಿ ಗೆಲ್ಲುವುದು ನಂಬಲಾಗದ ಸಾಧನೆ” ಎಂದಿದ್ದಾರೆ.
ಒಂದು ಕಡೆ ಧೋನಿ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸಿದ ಗಂಭೀರ್ ಮತ್ತೊಂದೆಡೆ ಕಳೆದ 16 ಆವೃತ್ತಿಯಲ್ಲೂ ಒಮ್ಮೆಯೂ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್ಸಿಬಿ ತಂಡಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.
ಗಂಭೀರ್-ಕೊಹ್ಲಿ ಚಕಮಕಿ
ಈ ಬಾರಿಯ ಐಪಿಎಲ್ನ ಲೀಗ್ ಹಂತದಲ್ಲಿ ಲಖನೌ ತಂಡ ತನ್ನ ತವರು ಮೈದಾನದಲ್ಲಿ ಆರ್ಸಿಬಿ ತಂಡಕ್ಕೆ 18 ರನ್ಗಳಿಂದ ಶರಣಾಗಿತ್ತು. ಪಂದ್ಯದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ನೀಡುತ್ತಿದ್ದ ವೇಳೆ, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು.