ಆಸೀಸ್ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಆಸ್ಪತ್ರೆಗೆ ದಾಖಲು; ತಡರಾತ್ರಿ ಪಾರ್ಟಿ ನಂತರ ನಡೆದದ್ದೇನು?

Date:

Advertisements

ಆಸ್ಟ್ರೇಲಿಯಾದ ಕ್ರಿಕೆಟಿಗ, ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಡರಾತ್ರಿಯ ಪಾರ್ಟಿಯಲ್ಲಿ ಪಾಲ್ಗೊಂಡ ನಂತರ ಅನಾರೋಗ್ಯದಿಂದಾಗಿ ಅಡಿಲೇಡ್‌ನ ಆಸ್ಪತ್ರೆಗೆ ದಾಖಲಾಗಿದ್ದರು.

2023ರ ಏಕದಿನ ವಿಶ್ವಕಪ್‌ ಸ್ಟಾರ್ ಮ್ಯಾಕ್ಸ್‌ವೆಲ್ ಫೆ.9 ರಿಂದ ವೆಸ್ಟ್‌ಇಂಡೀಸ್ ವಿರುದ್ಧದ ಟಿ20 ಸರಣಿಯ ತರಬೇತಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾತ್ರಿಯೇ ಚಿಕಿತ್ಸೆ ಪಡೆದು ಮನೆಗೆ ತೆರಳಿದರು.

ಸಂಗೀತ ಕಚೇರಿಯ ಕೂಟದಲ್ಲಿ ಪಾಲ್ಗೊಂಡಿದ್ದ ಮ್ಯಾಕ್ಸ್‌ವೆಲ್ ಅತಿಯಾಗಿ ಮದ್ಯಪಾನ ಮಾಡಿ ಅನಾರೋಗ್ಯ ಉಂಟಾದ ಕಾರಣ ಆಂಬ್ಯುಲೆನ್ಸ್‌ನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅನಾರೋಗ್ಯದ ನಿಖರ ಕಾರಣ ಕುರಿತು ಪತ್ತೆ ಹಚ್ಚಲಾಗಲಿಲ್ಲ.ಅಡಿಲೇಡ್ ಓವಲ್‌ನಲ್ಲಿ ಕಳೆದ ವಾರ ವೆಸ್ಟ್‌ ಇಂಡೀಸ್ ವಿರುದ್ಧ ಟೆಸ್ಟ್‌ ಪಂದ್ಯ ನಡೆದು ಆಸೀಸ್ ಗೆಲುವು ಸಾಧಿಸಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಫೆ.2ರಿಂದ ವೆಸ್ಟ್‌ ಇಂಡೀಸ್ ವಿರುದ್ಧ ನಡೆಯುವ ಏಕದಿನ ಸರಣಿಯಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಫೆ.9 ರಂದು ನಡೆಯುವ ಟಿ20 ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ.

2023ರ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಮುನ್ನ ಮ್ಯಾಕ್ಸ್‌ವೆಲ್ ಮಂಡಿ, ಬೆನ್ನು ಸೇರಿದಂತೆ ಹಲವು ಗಾಯದ ಸಮಸ್ಯೆಗಳನ್ನು ಎದುರಿಸಿದ್ದರು. ವಿಶ್ವಕಪ್ ಆರಂಭವಾಗುವ ವೇಳೆ ಗಾಯದಿಂದ ಚೇತರಿಸಿಕೊಂಡಿದ್ದರು. ವಿಶ್ವಕಪ್‌ ಟೂರ್ನಿಯ ಆರಂಭದಲ್ಲಿ ಆಸೀಸ್ ಹಿನ್ನಡೆ ಅನುಭವಿಸಿತ್ತು. ಟೂರ್ನಿಯಲ್ಲಿ ಗ್ಲೆನ್ ಆಫ್ಘಾನಿಸ್ತಾನದ ವಿರುದ್ಧ ಸಿಡಿಸಿದ ಅಜೇಯ ಸ್ಫೋಟಕ 201 ರನ್‌ಗಳಿಂದ ಆಸೀಸ್ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X