ಜಮೀನಿನಲ್ಲಿ ಬೃಹತ್ ‘ವಿಂಬಲ್ಡನ್ ಲೋಗೋ’ ನಿರ್ಮಿಸಿದ ಮಹಾರಾಷ್ಟ್ರದ ಕಲಾವಿದರು

Date:

Advertisements

ಸುಮಾರು ಒಂದು ಲಕ್ಷ ಚದರ ಅಡಿ ಪ್ರದೇಶದಲ್ಲಿ ಅತಿದೊಡ್ಡ ವಿಂಬಲ್ಡನ್ ಲೋಗೋವನ್ನು ಮಹಾರಾಷ್ಟ್ರದ ಕಲಾವಿದರು ರಚಿಸಿ, ಗಮನ ಸೆಳೆದಿದ್ದಾರೆ.

ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ಪ್ರತಿಷ್ಠಿತ ವಿಂಬಲ್ಡನ್, “ಎರಡು ವಾರಗಳ ಕಾಲ ಶ್ರಮಪಟ್ಟು ಮಹಾರಾಷ್ಟ್ರದ ಹುಲ್ಲಿನ ಕಲಾವಿದರು 1,00,000 ಚದರ ಅಡಿ ಪ್ರದೇಶದಲ್ಲಿ ಅತಿದೊಡ್ಡ ವಿಂಬಲ್ಡನ್ ಲೋಗೋವನ್ನು ರಚಿಸಿದ್ದಾರೆ” ಎಂದು ತಿಳಿಸುವ ಮೂಲಕ ಕಲಾವಿದರ ಶ್ರಮವನ್ನು ಗುರುತಿಸಿದೆ.

ಈ 57 ಸೆಕೆಂಡುಗಳ ವಿಡಿಯೋವೊಂದಲ್ಲಿ ಕಲಾವಿದರು ಯಾರು? ಮಹಾರಾಷ್ಟ್ರದಲ್ಲಿ ಎಲ್ಲಿ ಇದನ್ನು ರಚಿಸಲಾಗಿದೆ ಎಂಬ ವಿವರವನ್ನು ನೀಡಲಾಗಿಲ್ಲ. ಈಗಾಗಲೇ ಈ ವಿಡಿಯೋವನ್ನು ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ.

Advertisements

ಈ ವಿಡಿಯೋಗೆ ಕಮೆಂಟ್ ಮಾಡಿರುವ ಕೆಲವು ನೆಟ್ಟಿಗರು, ‘ಇದೊಂದು ಖುಷಿಯ ವಿಚಾರ’ ಎಂದರೆ, ಮತ್ತೆ ಕೆಲವರು ಕೇವಲ ಲೋಗೋ ರಚಿಸಲು ಇಷ್ಟೊಂದು ಶ್ರಮ ಹಾಕುವ ಬದಲು ಒಂದು ಟೆನಿಸ್ ಅಂಗಳವನ್ನು ರಚಿಸಿದ್ದಿದ್ದರೆ ಪ್ರಯೋಜನವಾದರೂ ಆಗುತ್ತಿತ್ತು ಎಂದು ಅಭಿಪ್ರಾಯಿಸಿದ್ದಾರೆ.

ಇತ್ತೀಚೆಗೆ ವಿಂಬಲ್ಡನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕ ಮೂಲದ ಭಾರತೀಯ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದ ವೇಳೆ ಅಭಿನಂದನೆ ಸಲ್ಲಿಸುವ ಸಲುವಾಗಿ ಕನ್ನಡದಲ್ಲೇ, ʼಭಾರತದ ಸೂಪರ್ ಸ್ಟಾರ್ʼ ಎಂದು ಟ್ವೀಟ್ ಮಾಡುವ ಮೂಲಕ ಗೌರವಿಸಿತ್ತು. ಇದು ಕನ್ನಡಿಗರ ಗಮನವನ್ನು ಕೂಡ ಸೆಳೆದಿತ್ತು.

ಈ ಟ್ವೀಟ್‌ಗೆ ರೋಹನ್‌ ಬೋಪಣ್ಣ ಕೂಡ, ಕನ್ನಡದಲ್ಲೇ ‘ಧನ್ಯವಾದ’ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X