ಐಪಿಎಲ್‌ 2023 | ಗುಜರಾತ್‌ vs ಡೆಲ್ಲಿ; ಒತ್ತಡದಲ್ಲಿ ವಾರ್ನರ್‌ ಪಡೆ, ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

Date:

Advertisements
  • ಗೆಲ್ಲಲೇ ಬೇಕಾದ ಒತ್ತಡದಲ್ಲಿ ವಾರ್ನರ್‌ ನೇತೃತ್ವದ ಡೆಲ್ಲಿ
  • ಎಂಟು ಪಂದ್ಯಗಳಲ್ಲಿ 2 ಗೆಲುವು ಕಂಡಿರುವ ವಾರ್ನರ್‌ ಪಡೆ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ಪಂದ್ಯದಲ್ಲಿ ʻಟೇಬಲ್‌ ಟಾಪರ್‌ʼ ಗುಜರಾತ್‌ ಟೈಟನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ 8 ಪಂದ್ಯಗಳನ್ನಾಡಿರುವ ಡೇವಿಡ್‌ ವಾರ್ನರ್‌ ಸಾರಥ್ಯದ ಡೆಲ್ಲಿ ಕೇವಲ 2 ಪಂದ್ಯಗಳಲ್ಲಷ್ಟೇ ಗೆಲುವಿನ ಸವಿಯುಂಡಿದೆ. ಮತ್ತೊಂದೆಡೆ ಗುಜರಾತ್‌ ಟೈಟನ್ಸ್‌ ಕೇವಲ 2 ಪಂದ್ಯಗಳಲ್ಲಷ್ಟೇ ಸೋಲು ಕಂಡಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ, ಕ್ವಾಲಿಫೈಯರ್‌ ಆಸೆಯನ್ನು ಜೀವಂತವಾಗಿರಿಸಬೇಕಾದರೆ ಇನ್ನುಳಿದ ಎಲ್ಲಾ 6 ಪಂದ್ಯಗಳಲ್ಲಿ ಗೆಲುವು ಅನಿವಾರ್ಯ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಚೆನ್ನೈ vs ಪಂಜಾಬ್;‌ ವಿಶಿಷ್ಠ ದಾಖಲೆ ಬರೆದ ಎಂಎಸ್‌ ಧೋನಿ

Advertisements

ಅಹ್ಮದಾಬಾದ್‌ನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದಿನ ಪಂದ್ಯ ನಡೆಯುವುದು ಬಹುತೇಕ ಅನುಮಾನ ಎನಿಸಿದೆ. ಪಂದ್ಯ ರದ್ದಾದರೆ ಗುಜರಾತ್‌ ಅಗ್ರಸ್ಥಾನದಲ್ಲೇ ಮುಂದುವರಿಯಲಿದೆ. ಆದರೆ ಡೆಲ್ಲಿಯ ನಾಕೌಟ್‌ ಪಯಣದ ಕನಸು ಬಹುತೇಕ ಭಗ್ನವಾಗಲಿದೆ.  

ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಫಿಲ್ ಸಾಲ್ಟ್, ಡೇವಿಡ್ ವಾರ್ನರ್‌ ಹಾಗೂ ಮಿಚೆಲ್ ಮಾರ್ಷ್ ಅವರನ್ನೇ  ಬಹುವಾಗಿ ನೆಚ್ಚಿಕೊಂಡಿದೆ. ಉಳಿದಂತೆ ಭಾರತೀಯ ಬ್ಯಾಟರ್‌ಗಳಾದ ಪೃಥ್ವಿ ಶಾ, ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಯಶ್ ಧುಲ್, ಅಮನ್ ಖಾನ್, ರಿಪಾಲ್ ಪಟೇಲ್, ಅಭಿಷೇಕ್ ಪೊರೆಲ್, ಪ್ರಿಯಮ್ ಗಾರ್ಗ್ ತಂಡದ ಗೆಲುವಿನತ್ತ ಕೊಂಡೊಯ್ಯುವ ಇನ್ನಿಂಗ್ಸ್‌ ಆಡುವಲ್ಲಿ ವಿಫಲರಾಗಿದ್ದಾರೆ.

ರೋವ್ಮನ್ ಪೊವೆಲ್ ಅಲಭ್ಯತೆ ಗಾಯದ ಮೇಲೆ ಬರೆ ಎಂಬಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X