ಐಪಿಎಲ್ | ಮಳೆಯಿಂದ ರದ್ದಾದ ಕೆಕೆಆರ್-ಗುಜರಾತ್‌ ಪಂದ್ಯ: ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಶುಭ್‌ಮನ್ ಬಳಗ

Date:

Advertisements

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯೆ ನಿಗದಿಪಡಿಸಲಾಗಿದ್ದ 63ನೇ ಐಪಿಎಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ಗುಜರಾತ್‌ನ ಹಲವು ಕಡೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಅಹ್ಮದಾಬಾದ್‌ನಲ್ಲೂ ಉತ್ತಮ ಮಳೆಯಾಗುತ್ತಿದ್ದು, 10.45ರ ಸುಮಾರಿಗೂ ಮಳೆ ನಿಲ್ಲದ ಕಾರಣ ಇಂದಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಐಪಿಎಲ್ ನಿಯಮದಂತೆ ಎರಡೂ ತಂಡಗಳಿಗೂ ತಲಾ ಎರಡು ಅಂಕಗಳನ್ನು ನೀಡಲಾಯಿತು.

ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್‌ಗೆ ಪ್ರಯಾಣಿಸುವಾಗ ತಮ್ಮ ಅಗ್ರ ಎರಡು ಸ್ಥಾನಗಳನ್ನು ಖಚಿತಪಡಿಸಿಕೊಂಡಿದೆ. ಕೆಕೆಆರ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೇ 19ರಂದು ಲೀಗ್‌ನ ಕೊನೆಯ ಹಾಗೂ 74ನೇ ಪಂದ್ಯವನ್ನಾಡಲಿದೆ.

Advertisements

ಇಂದಿನ ಪಂದ್ಯ ರದ್ದುಗೊಂಡ ಪರಿಣಾಮ ಪ್ಲೇ-ಆಫ್ ರೇಸ್‌ನಿಂದ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ಅಧಿಕೃತವಾಗಿ ಹೊರಬಿದ್ದಿದೆ. ಗುಜರಾತ್ ಟೈಟನ್ಸ್ ತಂಡವು 2022ರಲ್ಲಿ ಐಪಿಎಲ್ ಚಾಂಪಿಯನ್ ಆಗಿದ್ದರೆ, 2023ರಲ್ಲಿ ಚೆನ್ನೈ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು. 2024ರ ಸಾಲಿನಲ್ಲಿ ಈವರೆಗೆ 13 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಐದು ಗೆಲುವು ಹಾಗೂ 7 ಸೋಲು, ಒಂದು ರದ್ದುನೊಂದಿಗೆ 11 ಅಂಕ ಗಳಿಸಿದ್ದು, ಲೀಗ್‌ ಹಂತದಲ್ಲೇ ಹೊರಬಿದ್ದಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಮೇ 16ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯವನ್ನು ಆಡಲಿದೆ. ಹೈದರಾಬಾದ್‌ ವಿರುದ್ಧ ಗೆದ್ದರೆ ಪ್ಲೇ ಆಫ್‌ ರೇಸ್‌ನಲ್ಲಿ ಇನ್ನೂ ಉಳಿದುಕೊಂಡಿರುವ ಆರ್‌ಸಿಬಿಗೆ ಲಾಭವಾಗುವ ಸಾಧ್ಯತೆ ಇದೆ. ಮೇ 18ರಂದು ಆರ್‌ಸಿಬಿ ಹಾಗೂ ಚೆನ್ನೈ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯವು ರೋಚಕವಾಗಿರಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X