ಐಪಿಎಲ್ 2023 | ಸಾಯಿ ಸುದರ್ಶನ್‌ ತಾಳ್ಮೆಯ ಆಟ; ಗುಜರಾತ್‌ಗೆ ಸತತ ಎರಡನೇ ಗೆಲುವು

Date:

ಯುವ ಆಟಗಾರ ಸಾಯಿ ಸುದರ್ಶನ್‌ ಅವರ ತಾಳ್ಮೆಯ ಆಟ ಹಾಗೂ ರಶೀದ್, ಶಮಿ ಅವರ ಬೌಲಿಂಗ್‌ ದಾಳಿಯ ಪರಿಣಾಮ ಗುಜರಾತ್‌ ಟೈಟಾನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ ಗೆಲುವು ಸಾಧಿಸಿತು. ಟೂರ್ನಿಯಲ್ಲಿ ಹಾರ್ದಿಕ್‌ ಪಡೆಯ ಸತತ ಎರಡನೆಯ ಗೆಲುವಾಗಿದೆ.

- Advertisement -

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ 4 ವಿಕೆಟ್‌ ನಷ್ಟದೊಂದಿಗೆ 18.2 ಓವರ್‌ನಲ್ಲಿ ಜಯಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಪ್ರಮುಖ ಆಟಗಾರರಾದ ವೃದ್ಧಿಮಾನ್ ಸಾಹ, ಶುಭಮನ್ ಗಿಲ್, ನಾಯಕ ಹಾರ್ದಿಕ್ ಪಾಂಡ್ಯ ವಿಕೆಟ್ ಕಳೆದುಕೊಂಡರೂ ಸಾಯಿ ಸುದರ್ಶನ್‌ ತಾಳ್ಮೆಯ ಅರ್ಧ ಶತಕ (62),ವಿಜಯ್‌ ಶಂಕರ್‌ (29) ಹಾಗೂ ಡೇವಿಡ್‌ ಮಿಲ್ಲರ್ (31) ಸಮಯೋಚಿತ ಆಟದಿಂದ ತಂಡವು ಗೆಲುವಿನ ಗುರಿ ಮುಟ್ಟಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಗುಜರಾತ್‌ ಟೈಟಾನ್ಸ್ ಬೌಲರ್‌ಗಳಾದ ರಶೀದ್ ಖಾನ್‌, ಮೊಹಮ್ಮದ್ ಶಮಿ ಹಾಗೂ ಅಲ್ಜಾರಿ ಜೆಸೋಫ್ ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್‌ ಸಾಧಾರಣ ಮೊತ್ತ ದಾಖಲಿಸಿತ್ತು.

ನಾಯಕ ಡೇವಿಡ್ ವಾರ್ನರ್ 37 (32 ಎಸೆತ, 7 ಬೌಂಡರಿ), ಸರ್ಫರಾಜ್ ಖಾನ್ 30 (34 ಎಸೆತ, 2 ಬೌಂಡರಿ), 11 ಎಸೆತಗಳಲ್ಲಿ 2 ಸಿಕ್ಸರ್‌ನೊಂದಿಗೆ 20 ರನ್‌ ಸಿಡಿಸಿದ ಅಭಿಷೇಕ್ ಪೊರೆಲ್, ಸ್ಪಿನ್ನರ್ ಅಕ್ಷರ್ ಪಟೇಲ್ 22 ಚಂಡುಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ನೊಂದಿಗೆ 36 ರನ್‌ ಬಾರಿಸಿದ್ದು, ಗೌರವಾನ್ವಿತ ಮೊತ್ತ ಕಲೆ ಹಾಕಲು ಕಾರಣವಾಯಿತು.

ಸ್ಪಿನ್ನರ್ ರಶೀದ್‌ ಖಾನ್ 31/3, ಮೊಹಮ್ಮದ್ ಶಮಿ 41/3 ಹಾಗೂ ಅಲ್ಜಾರಿ ಜೆಸೋಫ್ 29/2 ವಿಕೆಟ್ ಪಡೆದು ಉತ್ತಮ ಬೌಲರ್‌ಗಳೆನಿಸಿದರು.

ಪಂತ್ ಅನಿರೀಕ್ಷಿತ ಆಗಮನ; ಪ್ರೇಕ್ಷಕರಗೆ ಅಚ್ಚರಿ

ಕಳೆದ ವರ್ಷ ಡಿಸೆಂಬರ್‌ 30 ರಂದು ಭೀಕರ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತದ ಯುವ ಸ್ಟಾರ್ ಕ್ರಿಕೆಟಿಗ ರಿಷಭ್ ಪಂತ್ ತವರು ಕ್ರೀಡಾಂಗಣಕ್ಕೆ ಆಗಮಿಸಿ ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಿದರು. ರಿಷಭ್ ಪಂತ್ ಕ್ರೀಡಾಂಗಣಕ್ಕೆ ಮರಳುತ್ತಿದ್ದಂತೆ, ಅಭಿಮಾನಿಗಳು ಅವರನ್ನು ನೋಡಿತ್ತಿದ್ದಂತೆ ಹರ್ಷೋದ್ಘಾರ ಕೂಗಿದರು.

ಅಪಘಾತದಲ್ಲಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡ ಬಳಿಕ ಅವರ ಕಾಲಿಗೆ 2 ಸರ್ಜರಿ ಕೂಡ ಮಾಡಲಾಗಿತ್ತು. ಈ ಹಿಂದೆ ದೆಹಲಿ ಕ್ಯಾಪಿಟಲ್ಸ್‌ ತಂಡ ರಿಷಭ್ ಅನುಪಸ್ಥಿತಿಯ ಮೊದಲ ಪಂದ್ಯದಲ್ಲಿ, ಅವರ ಜರ್ಸಿಯನ್ನು ಡಗೌಟ್‌ನಲ್ಲಿ ಇರಿಸಿದ್ದರು. ಆಗ ಡೆಲ್ಲಿ ತಂಡದ ಈ ಕ್ರಮ ಎಲ್ಲರ ಮನಗೆದ್ದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...