ನಾನಿನ್ನೂ ಜೀವಂತವಿದ್ದೇನೆ : ನಿಧನ ವದಂತಿಗೆ ಜಿಂಬಾಬ್ವೆ ಮಾಜಿ ಕ್ರಿಕೆಟಿಗ ಹೀತ್‌ ಸ್ಟ್ರೀಕ್‌ ತೆರೆ

Date:

Advertisements
  • ‘ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟ್‌ ದಿಗ್ಗಜ ಹೀತ್‌ ಸ್ಟ್ರೀಕ್‌ ನಿಧನ’ ಎಂದು ಸುದ್ದಿ
  • ‘ಥರ್ಡ್ ಅಂಪೈರ್‌ ಅವರನ್ನು ಮರಳಿ ಕರೆತಂದಿದ್ದಾರೆ’ ಎಂದ ಗೆಳೆಯ ಹೆನ್ರಿ ಒಲಾಂಗ

ತನ್ನ ನಿಧನ ವದಂತಿಗೆ ಸ್ಪಷ್ಟೀಕರಣ ನೀಡಿರುವ ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೀತ್‌ ಸ್ಟ್ರೀಕ್‌, ‘ನಾನಿನ್ನೂ ಜೀವಂತವಿದ್ದೇನೆ. ದಯವಿಟ್ಟು ಈ ಕೂಡಲೇ ರನೌಟ್ ತೀರ್ಪನ್ನು ಹಿಂಪಡೆಯಿರಿ’ ಎಂದು ತಿಳಿಸಿದ್ದಾರೆ.

ಜಿಂಬಾಬ್ವೆ ಕ್ರಿಕೆಟ್‌ ದಿಗ್ಗಜ ಹೀತ್‌ ಸ್ಟ್ರೀಕ್‌ (49) ಕೊನೆಯುಸಿರೆಳೆದಿದ್ದಾರೆ. ಮಾಜಿ ಆಲ್‌ರೌಂಡರ್‌ ಕ್ಯಾನ್ಸರ್‌ನಿಂದ ಬಳಲಿದ್ದರು. ಕ್ಯಾನ್ಸರ್‌ ವಿರುದ್ಧ ಹೋರಾಡಿ ಚೇತರಿಸುವ ಪ್ರಯತ್ನ ಮಾಡಿದ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ ಎಂದು ಹೀತ್‌ ಸ್ಟ್ರೀಕ್‌ ಅವರ ಮಾಜಿ ಸಹೋದ್ಯೋಗಿಗಳು ಮಾಹಿತಿ ಹಂಚಿಕೊಂಡಿರುವುದಾಗಿ ವರದಿಯಾಗಿತ್ತು. ಇದು ಸೋಷಿಯಲ್ ಮೀಡಿಯಾ ಸೇರಿದಂತೆ ಮಾಧ್ಯಮಗಳಲ್ಲೂ ಬಿತ್ತರಗೊಂಡಿತ್ತು.

ಈ ಬಗ್ಗೆ ‘ಮಿಡ್-ಡೇ’ ಮಾಧ್ಯಮದೊಂದಿಗೆ ಮಾತನಾಡಿರುವ ಹೀತ್‌ ಸ್ಟ್ರೀಕ್‌, ‘ಇದು ಸಂಪೂರ್ಣ ಸುಳ್ಳು ವದಂತಿ. ನಾನು ಜೀವಂತವಾಗಿದ್ದೇನೆ ಮತ್ತು ಚೆನ್ನಾಗಿಯೇ ಇದ್ದೇನೆ. ಸಾಮಾಜಿಕ ಮಾಧ್ಯಮ ಇರುವ ಈ ಯುಗದಲ್ಲಿಯೂ ಕೂಡ ಇಂತಹ ಸುದ್ದಿಗಳನ್ನು ದೃಢಪಡಿಸದೆ ಹಂಚಿರುವುದು ನಿಜಕ್ಕೂ ಬೇಸರ ತರಿಸಿದೆ. ಇದರಿಂದ ನಾನು ತುಂಬಾ ಅಸಮಾಧಾನಗೊಂಡಿದ್ದೇನೆ. ಇದನ್ನು ಹರಡಿದವರು ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದ್ದಾರೆ.

Advertisements

‘ಹೀತ್‌ಸ್ಟ್ರೀಕ್‌ ನಿಧನ ಹೊಂದಿದ್ದಾರೆ’ ಎಂದು ಟ್ವಿಟರ್‌ನಲ್ಲಿ ಅವರ ಮಾಜಿ ಸಹೋದ್ಯೋಗಿ ಹಾಗೂ ಆಪ್ತ ಗೆಳೆಯ ಹೆನ್ರಿ ಒಲಾಂಗ ಕೂಡ ಹಂಚಿಕೊಂಡಿದ್ದರು. ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿತ್ತು.

‘ಅವರು ನಿಧನರಾಗಿಲ್ಲ’ ಎಂದು ದೃಢವಾದ ನಂತರ ಮೊದಲ ಟ್ವೀಟ್ ಅನ್ನು ಡಿಲೀಟ್ ಮಾಡಿರುವ ಹೆನ್ರಿ ಒಲಾಂಗ, ಹೀತ್‌ ಸ್ಟ್ರೀಕ್‌ ಜೊತೆಗಿನ ವಾಟ್ಸ್‌ಆಪ್‌ ಸಂಭಾಷಣೆಯ ಸ್ಕ್ರೀನ್‌ ಶಾಟ್‌ ಅನ್ನು ಹಂಚಿಕೊಂಡಿದ್ದಾರೆ.

“ಹೀತ್‌ ಸ್ಟ್ರೀಕ್‌ ಸತ್ತಿದ್ದಾರೆ ಎಂಬ ಸುದ್ದಿ ತಪ್ಪಾಗಿ ಹಬ್ಬಿದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಇದರ ವೈಭವೀಕರಣವೂ ನಡೆದಿದೆ. ಅವರಿಂದಲೇ ಈಗ ಮಾಹಿತಿ ಲಭ್ಯವಾಗಿದ್ದು, ಥರ್ಡ್ ಅಂಪೈರ್‌ ಅವರನ್ನು ಮರಳಿ ಕರೆತಂದಿದ್ದಾರೆ. ಪ್ರೀತಿಯ ಜನರೇ, ಅವರಿನ್ನೂ ಬದುಕಿದ್ದಾರೆ,” ಎಂದು ಹೆನ್ರಿ ಒಲಾಂಗ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X