ಭಾರತಕ್ಕೆ ಬಂದರೆ ಸದೆ ಬಡಿಯುತ್ತೇವೆ; ಪಾಕ್‌ಗೆ ವಿಶ್ವಕಪ್‌ ವಿಜೇತ ತಂಡದ ಸದಸ್ಯನ ಎಚ್ಚರಿಕೆ

Date:

ಮುಂಬರುವ 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಕುರಿತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅನಿಶ್ಚಿತತೆ ವ್ಯಕ್ತಪಡಿಸಿರುವ ಬೆನ್ನಲ್ಲೇ, ಭಾರತದ ಮಾಜಿ ಕ್ರಿಕೆಟಿಗ ಕೆ ಶ್ರೀಕಾಂತ್ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -

“ನೀವು ಭಾರತಕ್ಕೆ ಬಾರದೇ ಇರುವುದೇ ಒಳ್ಳೆಯದು, ಒಂದು ವೇಳೆ ಬಂದರೆ ಸದೆ ಬಡಿಯುತ್ತೇವೆ,” ಎಂದು ಶ್ರೀಕಾಂತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

​ಇತ್ತೀಚೆಗೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು, ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆ ಅಥವಾ ಇನ್ನಿತರ ಕಾರಣಗಳನ್ನು ಮುಂದಿಟ್ಟುಕೊಂಡು, ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್‌ ಟೂರ್ನಿಯಿಂದ ಪಾಕಿಸ್ತಾನ ಹಿಂದೆ ಸರಿಯುವ ಮುನ್ಸೂಚನೆ ನೀಡಿದ್ದರು. ಇದಕ್ಕೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿರುವ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಶ್ರೀಕಾಂತ್, ಪಾಕಿಸ್ತಾನ ತಂಡದ ಪ್ರಸ್ತುತ ಸ್ಥಿತಿ ಹಾಗೂ ಟೀಮ್ ಇಂಡಿಯಾದ ಅಬ್ಬರದ ಫಾರ್ಮ್ ಅನ್ನು ಉಲ್ಲೇಖಿಸಿ ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಗೌತಮ್‌ ಗಂಭೀರ್; ತಂಡವನ್ನು ಗೆಲ್ಲಿಸುತ್ತಿಲ್ಲ, ತಾವೂ ಬದಲಾಗುತ್ತಿಲ್ಲ

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟ್‌ ಆಟಗಾರ ಶ್ರೀಕಾಂತ್, “ಹೇ ಪಾಕಿಸ್ತಾನ್, ನೀವು ಬಾರದಿರುವುದೇ ಲೇಸು. ನಿಮ್ಮ ಸಾಹೇಬರಾದ ಮೊಹ್ಸಿನ್ ನಖ್ವಿ ಅವರು ಟೂರ್ನಿಗೆ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಅದು ನಿಜಕ್ಕೂ ಒಳ್ಳೆಯ ನಿರ್ಧಾರ. ಯಾವುದಾದರೂ ನೆಪ ಹೇಳಿ ಟೂರ್ನಿಯಿಂದ ದೂರವಿರಿ. ಏಕೆಂದರೆ, ಭಾರತೀಯ ಆಟಗಾರರು ಈಗ ಆಡುತ್ತಿರುವ ರೀತಿಯನ್ನು ನೋಡಿದರೆ, ನೀವು ಬಂದರೆ ನಿಮ್ಮನ್ನು ಅವರು ಹೀನಾಯವಾಗಿ ಸೋಲಿಸುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

K Srikanth

ಭಾರತೀಯ ಬ್ಯಾಟರ್‌ಗಳ ಇತ್ತೀಚಿನ ಪ್ರದರ್ಶನವನ್ನು ಕೊಂಡಾಡಿದ ಶ್ರೀಕಾಂತ್, “ಕಳೆದ ಪಂದ್ಯದಲ್ಲಿ ಭಾರತ 15 ಓವರ್‌ಗಳಲ್ಲಿ 209 ರನ್ ಗಳಿಸಿತ್ತು. ಮತ್ತೊಂದು ಪಂದ್ಯದಲ್ಲಿ ಕೇವಲ 10 ಓವರ್‌ಗಳಲ್ಲಿ 150 ರನ್ ಬಾರಿಸಿದ್ದಾರೆ. ಕೊಲಂಬೊದಲ್ಲಿ ಸಿಕ್ಸರ್ ಹೊಡೆದರೆ ಅದು ಮದ್ರಾಸ್ (ಚೆನ್ನೈ) ತಲುಪುವಷ್ಟು ಶಕ್ತಿಯುತವಾಗಿದೆ. ಟಿ20 ಕ್ರಿಕೆಟ್‌ನಲ್ಲಿ ಇಂತಹ ಬ್ಯಾಟಿಂಗ್ ಅಬ್ಬರವನ್ನು ನಾನು ಹಿಂದೆಂದೂ ನೋಡಿಲ್ಲ. ಇದನ್ನು ನೋಡಿದರೆ ಎದುರಾಳಿ ತಂಡಗಳು ಕಪ್ ನೀವೇ ಇಟ್ಟುಕೊಳ್ಳಿ ಎಂದು ಹೇಳಿ ಓಡಿಹೋಗಬಹುದು,” ಎಂದು ಅಭಿಪ್ರಾಯಪಟ್ಟಿದ್ದಾರೆ.

2025ರ ಚಾಂಪಿಯನ್ಸ್ ಟ್ರೋಫಿ ಆಯೋಜನೆ ವಿಚಾರದಲ್ಲಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ, ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳ ನಡುವೆ ಶೀತಲ ಸಮರ ಮುಂದುವರಿದಿದೆ. ಇದೇ ವೇಳೆ, ಬಾಂಗ್ಲಾದೇಶದ ಪಂದ್ಯಗಳನ್ನು ತಟಸ್ಥ ಸ್ಥಳಕ್ಕೆ ಬದಲಾಯಿಸದ ಐಸಿಸಿ ನಿರ್ಧಾರವನ್ನು ವಿರೋಧಿಸಿ, ಪಾಕಿಸ್ತಾನವು 2026ರ ಟಿ20 ವಿಶ್ವಕಪ್‌ಗೆ ಬಹಿಷ್ಕಾರ ಹಾಕುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ನಖ್ವಿ ಸುಳಿವು ನೀಡಿದ್ದರು. ಸದ್ಯ ಪಾಕಿಸ್ತಾನ ಸರ್ಕಾರವು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು, ಸರ್ಕಾರದ ಸಲಹೆಯಂತೆ ಮುಂದುವರಿಯುವುದಾಗಿ ಪಿಸಿಬಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...

ನೂರಾರು ವಿವಾದ, ಅದಕ್ಕೂ ಮೀರಿದ ಮನುಷ್ಯತ್ವ: ಮೆಸ್ಸಿಯ 21 ವರ್ಷದ ಪಯಣದತ್ತ ಒಂದು ಹಿನ್ನೋಟ

ಲಿಯೋನೆಲ್ ಮೆಸ್ಸಿ ಎಂಬ ದಂತಕಥೆಯನ್ನು ನಾವು ಅತ್ಯಂತ ಸಮತೋಲಿತ ದೃಷ್ಟಿಕೋನದಿಂದ ನೋಡಬೇಕಾಗಿದೆ....

ಟೆನಿಸ್ ತಾರೆ ಜೋಕೋವಿಕ್‌ಗೆ US ಓಪನ್ ಆಘಾತ: ಆರಂಭಿಕ ಸುತ್ತಿನಲ್ಲೇ ಹೊರಕ್ಕೆ

ದಾಖಲೆಯ 25ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದ ಸರ್ಬಿಯಾದ ಟೆನಿಸ್...