ಐಪಿಎಲ್ 2025 | ಸೋಲಿಗೆ ರಿಷಬ್‌ರನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಲಖನೌ ಮಾಲೀಕ ಸಂಜೀವ್‌ ಗೋಯೆಂಕಾ

Date:

Advertisements

ಐಪಿಎಲ್‌ 18ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡು ತಂಡದ ಮಾಲೀಕ ರಿಷಬ್‌ ಪಂತ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುತ್ತಿದ್ದಂತೆ ಮೈದಾನಕ್ಕೆ ಆಗಮಿಸಿದ್ದ ಸಂಜೀವ್ ಗೊಯೆಂಕಾ ಅವರು ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧದ ಸೋಲಿನ ಬಳಿಕ ಗೊಯೆಂಕಾ ನಾಯಕನಿಗೆ ತರಾಟೆ ತೆಗೆದುಕೊಳ್ಳುತ್ತಿರುವಂತೆ ಕಾಣುತ್ತಿದೆ.

ಈ ಬಾರಿ ರಿಷಭ್ ಪಂತ್ ಅವರೊಂದಿಗೆ ತುಸು ಗಂಭೀರವಾಗಿ ಚರ್ಚಿಸುವಂತೆ ಕಂಡು ಬಂದಿದ್ದು, ಅಲ್ಲರೆ ಬೆರಳು ತೋರಿಸುವ ಮೂಲಕ ಖಡಕ್ ಸೂಚನೆ ನೀಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಂದರೆ ತವರು ಮೈದಾನದಲ್ಲಿ ಎಲ್​ಎಸ್​ಜಿ ತಂಡವು ಎರಡು ಪಂದ್ಯಗಳನ್ನು ಸೋತಿರುವುದನ್ನು ಸಂಜೀವ್ ಗೊಯೆಂಕಾ ಗಂಭೀರವಾಗಿ ಪರಿಗಣಿಸಿರುವ ಸಾಧ್ಯತೆಯಿದೆ.

Advertisements

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಂದು ಪುಟ್ಟ ಹುಡುಗ; ಇಂದು ಗುರುವನ್ನೇ ಮೀರಿಸಿದ ಶಿಷ್ಯ

ಸಂಜೀವ್ ಗೊಯೆಂಕಾ ಹಾಗೂ ರಿಷಭ್ ಪಂತ್ ಅವರ ನಡುವಣ ಈ ಬಿಸಿ ಚರ್ಚೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಕೆ ಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಬರಲಿದೆಯೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶಗಳಿಂದಲೇ ಸ್ಪಷ್ಟ ಉತ್ತರವಂತು ಸಿಗಲಿದೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆ ಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣದಿಂದಾಗಿ ರಾಹುಲ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆದಿದ್ದರು. ಇದೀಗ ಅವರ ಸ್ಥಾನದಲ್ಲಿ ರಿಷಭ್ ಪಂತ್ ಇದ್ದಾರೆ.

ಮಗಾ ಹರಾಜಿನಲ್ಲಿ ಲಖನೌ ತಂಡ ರಿಷಭ್ ಪಂತ್ ಅವರನ್ನು ದಾಖಲೆಯ 27 ಕೋಟಿ ರೂಪಾಯಿಗಳಿಗೆ ಖರೀದಿಸಿದೆ. ಅಲ್ಲದೆ, ಅವರನ್ನು ನಾಯಕನನ್ನಾಗಿ ನೇಮಿಸಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ಪಂತ್ ನಿರೀಕ್ಷೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ. ಬ್ಯಾಟಿಂಗ್ ಮಾಡುವಾಗ ಅವರು ಶೂನ್ಯಕ್ಕೆ ಔಟ್ ಆದರು ಅಲ್ಲದೆ, ವಿಕೆಟ್ ಕೀಪರ್ ಆಗಿ, ಕೊನೆಯ ಓವರ್‌ನಲ್ಲಿ ಮೋಹಿತ್ ಶರ್ಮ ಅವರನ್ನು ಸ್ಟಂಪ್‌ ಮಾಡುವ ಅವಕಾಶವನ್ನು ಕಳೆದುಕೊಂಡರು. ಪಂತ್ ಮೋಹಿತ್‌ ಅವರನ್ನು ಸ್ಟಂಪ್‌ ಮಾಡಿದ್ದರೆ, ಲಖನೌ ಗೆಲ್ಲುತ್ತಿತ್ತು. ಏಕೆಂದರೆ ಅದು ದೆಹಲಿ ತಂಡದ ಕೊನೆಯ ವಿಕೆಟ್ ಆಗಿತ್ತು. ಈಗ ತಂಡ 2ನೇ ಸೋಲು ಅನುಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X