4ನೇ ಟೆಸ್ಟ್ | ಅಶ್ವಿನ್, ಕುಲ್ದೀಪ್ ದಾಳಿಗೆ ಆಂಗ್ಲರು 145 ಕ್ಕೆ ಆಲೌಟ್; ಭಾರತದ ಜಯಕ್ಕೆ ಬೇಕಿದೆ 152 ರನ್

Date:

Advertisements

ಆರ್‌ ಅಶ್ವಿನ್ ಹಾಗೂ ಕುಲ್‌ದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಪ್ರವಾಸಿ ಇಂಗ್ಲೆಂಡ್ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ 145 ರನ್‌ಗಳಿಗೆ ಆಲೌಟ್‌ ಆಗಿ ಭಾರತಕ್ಕೆ 192 ರನ್‌ ಗುರಿ ನೀಡಿತು. ಗೆಲುವಿಗಾಗಿ ಎರಡನೇ ಇನಿಂಗ್ಸ್ ಆರಂಭಿಸಿರುವ ಟಿಂ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 40 ರನ್‌ ಗಳಿಸಿದೆ.

ರಾಂಚಿಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಮೊದಲ ಇನಿಂಗ್ಸ್‌ನಲ್ಲಿ ಧ್ರವ ಜೆರೆಲ್ ಅವರ 90 ರನ್‌ಗಳ ನೆರವಿನಿಂದ 307 ರನ್‌ಗಳಿಗೆ ಆಲೌಟ್ ಆಯಿತು.

ಇದಕ್ಕೆ ಉತ್ತರವಾಗಿ ಎರಡನೇ ಇನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್ ತಂಡ ಆರ್‌ ಅಶ್ವಿನ್ ಹಾಗೂ ಕುಲ್‌ದೀಪ್ ಅವರ ಸ್ಪಿನ್ ದಾಳಿಗೆ ಸಿಲುಕಿ 53.2 ಓವರ್‌ಗಳಲ್ಲಿ 145 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಆಂಗ್ಲರ ಪರ ಜಾಕ್‌ ಕ್ರಾಲಿ (60) ಹಾಗೂ ಜಾನಿ ಬೈರ್‌ಸ್ಟೋ (30) ಹೊರತುಪಡಿಸಿದರೆ ಉಳಿದ ಆಟಗಾರರು 20ರ ಗಡಿ ದಾಟಲಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಆರ್‌ ಅಶ್ವಿನ್ 24/5, ಕುಲ್‌ದೀಪ್ ಯಾದವ್ 22/4 ಹಾಗೂ ರವೀಂದ್ರ ಜಡೇಜಾ 56/1 ವಿಕೆಟ್ ಪಡೆದು ಇಂಗ್ಲೆಂಡ್ ತಂಡದ ಪತನಕ್ಕೆ ಕಾರಣರಾದರು.

ಅಶ್ವಿನ್ ಮಗದೊಂದು ದಾಖಲೆ

ಐದು ವಿಕೆಟ್ ಪಡೆದ ಆರ್‌ ಅಶ್ವಿನ್ ಅನಿಲ್‌ ಕುಂಬ್ಳೆ ಅವರ ದಾಖಲೆ ಸರಿಗಟ್ಟಿದ್ದಾರೆ.  ಅತಿ ಹೆಚ್ಚು ಬಾರಿ 5 ವಿಕೆಟ್ ಪಡೆದವರಲ್ಲಿ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. ಈಗ ಅವರ ಸ್ಥಾನಕ್ಕೆ ಅಶ್ವಿನ್ ಕೂಡ ಸೇರ್ಪಡೆಯಾಗಿದ್ದಾರೆ. ಕುಂಬ್ಳೆ 132 ಟೆಸ್ಟ್‌ಗಳಲ್ಲಿ 35 ಬಾರಿ 5 ವಿಕೆಟ್ ಪಡೆದಿದ್ದರೆ, ಆರ್ ಅಶ್ವಿನ್ 99 ಟೆಸ್ಟ್‌ಗಳಲ್ಲಿ 35 ಬಾರಿ 5 ವಿಕೆಟ್ ಪಡೆದಿದ್ದಾರೆ.

ಮೊದಲ ಮೂರು ಸ್ಥಾನಗಳಲ್ಲಿ ಶ್ರೀಲಂಕಾದ ಮುತ್ತಯ್ಯ ಮುರುಳೀಥರನ್ (67 ಬಾರಿ), ಆಸೀಸ್‌ನ ಶೇನ್‌ ವಾರ್ನ್ (37 ಬಾರಿ), ನ್ಯೂಜಿಲೆಂಡ್‌ನ ರಿಚರ್ಡ್‌ ಹ್ಯಾಂಡ್ಲಿ (36) ಇದ್ದಾರೆ. ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಅಶ್ವಿನ್‌ ಹಾಗೂ ಕುಂಬ್ಳೆ ಇದ್ದಾರೆ.

ಎರಡನೇ ಇನಿಂಗ್ಸ್‌ ಆರಂಭಿಸಿರುವ ಭಾರತ 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಅಜೇಯರಾಗಿ ಆಡುತ್ತಿದ್ದಾರೆ. ಭಾರತದ ಗೆಲುವಿಗೆ ಎರಡು ದಿನಗಳ ಆಟ ಬಾಕಿಯಿದ್ದು, 152 ರನ್‌ಗಳ ಅಗತ್ಯವಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ  ಹೊಸ ಮೈಲಿಗಲ್ಲು ಸಾಧಿಸಿದ ನಾಯಕ ರೋಹಿತ್ ಶರ್ಮಾ 4 ಸಾವಿರ ರನ್‌ ಗಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X