ನ್ಯೂಜಿಲೆಂಡ್‌-ಇಂಡಿಯಾ ಟೆಸ್ಟ್ | ಮೊದಲ ಇನಿಂಗ್ಸ್‌ನಲ್ಲಿ 46 ಕ್ಕೆ ಆಲೌಟ್; ಕೊಹ್ಲಿ ಸೇರಿ ಐವರು ಶೂನ್ಯ ಸಂಪಾದನೆ

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್‌ ಆಗಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ನಾಯಕ ರೋಹಿತ್‌ ಶರ್ಮಾ ಪಡೆ ಕಿವೀಸ್‌ ವೇಗಿಗಳ ದಾಳಿಗೆ ಸಿಲುಕಿ 31.2 ಓವರ್‌ಗಳಲ್ಲಿ ಆಲೌಟ್‌ ಆಯಿತು. ರಿಷಬ್‌ ಪಂತ್‌ (20) ಹಾಗೂ ಯಶಸ್ವಿ ಜೈಸ್ವಾಲ್‌(13) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳ್ಯಾರು ಎರಡಂಕಿಯ ಗಡಿ ದಾಟಲಿಲ್ಲ.

ವಿರಾಟ್‌ ಕೊಹ್ಲಿ ಸೇರಿ ಭಾರತದ ಐವರು ಬ್ಯಾಟರ್‌ಗಳು ಶೂನ್ಯಕ್ಕೆ ಆಲೌಟ್‌ ಆದರು. ಮ್ಯಾಟ್‌ ಹೆನ್ರಿ 15/5 ಹಾಗೂ ವಿಲಿಯಂ ಒ ರೂರ್ಕ್‌ 22/4 ವಿಕೆಟ್‌ ಪಡೆದು ಭಾರತದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳಿಸಲು ಕಾರಣರಾದರು.

Advertisements

ಬುಧವಾರದಿಂದ ಆರಂಭವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು. ಎರಡನೇ ದಿನ ಆಟ ಶುರುವಾದರೂ 46 ರನ್‌ಗಳಿಗೆ ಆಲೌಟ್‌ ಆಯಿತು. ಹಾಗೆಯೇ ಸ್ವದೇಶದಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್‌ ಆದ ದಾಖಲೆಯನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿತು. 46 ರನ್‌ಗಳನ್ನು ಗಳಿಸುವ ಮೂಲಕ ಇಂಡಿಯಾ, ವಿಶ್ವ ಕ್ರಿಕೆಟ್‌ನಲ್ಲಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿತು.

ಅದರಲ್ಲೂ ಇದೇ ಮೊದಲ ಬಾರಿಗೆ ಭಾರತ ತಂಡ ತವರಿನಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಇದಕ್ಕೂ ಮುನ್ನ 1987 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಕೇವಲ 75 ರನ್​ಗಳಿಗೆ ಆಲೌಟ್ ಆಗಿತ್ತು. ಇದೀಗ 37 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಟೀಂ ಇಂಡಿಯಾ ಕಳಪೆ ರನ್‌ ಗಳಿಸಿದ ಪಂದ್ಯಗಳು
* 36 ರನ್‌ – ಆಸ್ಟ್ರೇಲಿಯಾ ವಿರುದ್ಧ – ಡಿಲೇಡ್‌ ಮೈದಾನ (2020)
* 42 ರನ್‌ – ಇಂಗ್ಲೆಂಡ್‌ ವಿರುದ್ಧ – ಲಾರ್ಡ್ಸ್‌ ಮೈದಾನ (1974
* 46 ರನ್‌ – ನ್ಯೂಜಿಲೆಂಡ್‌ ವಿರುದ್ಧ – ಚಿನ್ನಸ್ವಾಮಿ ಕ್ರೀಡಾಂಗಣ (2024)
* 58 ರನ್‌ – ಆಸ್ಟ್ರೇಲಿಯಾ ವಿರುದ್ಧ – ಮ್ಯಾಂಚೆಸ್ಟರ್‌(1952)
* 66 ರನ್‌ – ದಕ್ಷಿಣ ಆಫ್ರಿಕಾ ವಿರುದ್ಧ – ಡರ್ಬನ್‌ ಮೈದಾನ (1996)

ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ತಾಯ್ನಾಡಿನಲ್ಲಿ ದಾಖಲಿಸಿದ ಅತ್ಯಂತ ಕಡಿಮೆ ಮೊತ್ತ

ನ್ಯೂಜಿಲೆಂಡ್‌ ಎದುರು 2024ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಸ್ಟ್‌ನಲ್ಲಿ 46ಕ್ಕೆ ಆಲ್‌ಔಟ್
ವೆಸ್ಟ್‌ ಇಂಡೀಸ್‌ ವಿರುದ್ಧ 1987ರಲ್ಲಿ ದಿಲ್ಲಿಯಲ್ಲಿ ನಡೆದ ಪಂದ್ಯದಲ್ಲಿ 75ಕ್ಕೆ ಆಲ್‌ಔಟ್‌
ದಕ್ಷಿಣ ಆಫ್ರಿಕಾ ಎದುರು 2008ರಲ್ಲಿ ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ 76ಕ್ಕೆ ಅಲ್‌ಔಟ್
ನ್ಯೂಜಿಲೆಂಡ್‌ ವಿರುದ್ಧ 1999ರಲ್ಲಿ ಮೊಹಾಲಿಯಲ್ಲಿ ನಡೆದ ಟೆಸ್ಟ್‌ನಲ್ಲಿ 83ಕ್ಕೆ ಆಲ್‌ಔಟ್
ಇಂಗ್ಲೆಂಡ್‌ ಎದುರು 1977ರಲ್ಲಿ ಚೆನ್ನೈನಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ 83ಕ್ಕೆ ಆಲ್‌ಔಟ್‌

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X