ಏಷ್ಯಾ ಕಪ್‌ ಕ್ರಿಕೆಟ್‌ನಿಂದ ಹಿಂದೆ ಸರಿದ ಭಾರತ

Date:

Advertisements

ಭಾರತ-ಪಾಕಿಸ್ತಾನ ನಡುವೆ ನಡೆದ ಇತ್ತೀಚಿನ ಮಿಲಿಟರಿ ಘರ್ಷಣೆಗಳ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಡೆಸುವ ಎಲ್ಲ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಮುಂದಿನ ತಿಂಗಳಿಂದ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ. ಹಾಗೆಯೇ ಈ ವರ್ಷಾಂತ್ಯದಲ್ಲಿ ಪುರುಷರ ಏಷ್ಯಾಕಪ್ ಟೂರ್ನಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿತ್ತು. ಇದೀಗ ಈ ಟೂರ್ನಿಯಿಂದಲೂ ಭಾರತ ಹೊರಗುಳಿಯುವುದಾಗಿ ಬಿಸಿಸಿಐ ತಿಳಿಸಿದೆ.

ಈ ಬಾರಿಯ ಏಷ್ಯಾಕಪ್ ಟೂರ್ನಿಯು ಭಾರತದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಮುಂಬರುವ ಟಿ20 ವಿಶ್ವಕಪ್​ ಅನ್ನು ಕೇಂದ್ರೀಕರಿಸಿ ಟಿ20 ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಯೋಜನೆ ರೂಪಿಸಲಾಗಿತ್ತು. ಆದರೀಗ ಆತಿಥ್ಯದ ಹಕ್ಕನ್ನು ಹೊಂದಿರುವ ಭಾರತವೇ ಟೂರ್ನಿಯಿಂದ ಹಿಂದೆ ಸರಿದಿದೆ. ಹೀಗಾಗಿ ಟೂರ್ನಿ ನಡೆಯುವ ಸಾಧ್ಯತೆಯಿಲ್ಲ ಎನ್ನಬಹುದು.

Advertisements

ಇದನ್ನು ಓದಿದ್ದೀರಾ? ಐಪಿಎಲ್ 2025: ಪ್ಲೇ ಆಫ್‌ನಲ್ಲಿ ಯಾರ್ಯಾರು ಆಡುವುದಿಲ್ಲ: ಆಟಗಾರರ ಪಟ್ಟಿ ಇಲ್ಲಿದೆ

ಏಷ್ಯಾಕಪ್ ಟೂರ್ನಿಗೆ ಅತೀ ಹೆಚ್ಚು ಪ್ರಾಯೋಜಕತ್ವ ಸಿಗುವುದು ಭಾರತದಿಂದ. ಇದೀಗ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಗುಳಿದರೆ, ಪ್ರಾಯೋಜಕರ ಕೊರತೆ ಎದುರಾಗಲಿದೆ. ಅಲ್ಲದೆ ಆದಾಯದ ಮೇಲೂ ಭಾರೀ ಹೊಡೆತ ಬೀಳಲಿದೆ. ಹೀಗಾಗಿ ಈ ಬಾರಿ ಟೂರ್ನಿ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಪಾಕಿಸ್ತಾನದ ಸಚಿವರು ಮುಖ್ಯಸ್ಥರಾಗಿರುವ ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ. ಹೀಗಾಗಿ ಮುಂಬರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್‌ನಿಂದ ಹಿಂದೆ ಸರಿಯುವ ಬಗ್ಗೆ ನಾವು ಈಗಾಗಲೇ ಎಸಿಸಿಗೆ ಮೌಖಿಕವಾಗಿ ತಿಳಿಸಿದ್ದೇವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೀಗಾಗಿ ಈ ವರ್ಷದ ನಡೆಯಲಿರುವ ಏಷ್ಯಾಕಪ್ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಕಾಣಿಸಿಕೊಳ್ಳುವುದಿಲ್ಲ. ಈ ಮೂಲಕ ಪಾಕಿಸ್ತಾನದ ಕ್ರಿಕೆಟ್ ಆದಾಯಕ್ಕೂ ಹೊಡೆತ ನೀಡಲು ಭಾರತ ಮುಂದಾಗಿದೆ.

2023 ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಕೇವಲ 50 ರನ್​ಗಳಿಗೆ ಆಲೌಟ್ ಮಾಡಿ ಟ್ರೋಫಿ ಜಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X