ವಿಶ್ವಕಪ್ | ನೆದರ್‌ಲ್ಯಾಂಡ್ಸ್‌ ವಿರುದ್ಧವೂ ಜಯ ಸಾಧಿಸಿ ಟೀಮ್ ಇಂಡಿಯಾ ‘ಅಜೇಯ’

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಏಕದಿನ ವಿಶ್ವಕಪ್‌ನ ಕೊನೆಯ ಲೀಗ್ ಪಂದ್ಯದಲ್ಲೂ ಕೂಡ ನೆದರ್‌ಲ್ಯಾಂಡ್ಸ್‌ ವಿರುದ್ಧವೂ ಟೀಮ್ ಇಂಡಿಯಾ 160 ರನ್‌ಗಳ ಭರ್ಜರಿ ದಾಖಲಿಸುವ ಮೂಲಕ ಲೀಗ್ ಮಟ್ಟದಲ್ಲಿ ಆಡಿರುವ ಎಲ್ಲ 9 ಪಂದ್ಯಗಳಲ್ಲಿ ಯಾವುದೇ ಸೋಲು ಕಾಣದೆ ಅಜೇಯರಾಗಿ ಉಳಿದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ, ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕದ ನೆರವಿನಿಂದ ನೆದರ್‌ಲ್ಯಾಂಡ್ಸ್‌ ಗೆಲುವಿಗೆ 411 ರನ್‌ಗಳ ಬೃಹತ್ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ನಾಯಕ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ಡಚ್ಚರ ತಂಡ, 47.5 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 250 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಟೀಮ್ ಇಂಡಿಯಾ 160 ರನ್‌ಗಳ ಭರ್ಜರಿ ದಾಖಲಿಸಿತು.

Advertisements

ನೆದರ್‌ಲ್ಯಾಂಡ್ಸ್‌ ಪರ ಬ್ಯಾಟಿಂಗ್‌ನಲ್ಲಿ ತೇಜ ನಿಡಮನೂರು ಅರ್ಧ ಶತಕ(54 ರನ್) ಗಳಿಸಿ, ರೋಹಿತ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಉಳಿದಂತೆ ಸೈಬ್ರಾಂಡ್ ಎಂಗಲ್ಬ್ರೆಕ್ಟ್ 45 ರನ್, ಕಾಲಿನ್ ಅಕರ್ಮನ್ 35, ಮ್ಯಾಕ್ಸ್​ ಓಡೌಡ್ 30, ಸ್ಕಾಟ್ ಎಡ್ವರ್ಡ್ಸ್ 17 ರನ್ ಗಳಿಸಿದರು.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬುಮ್ರಾ, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಅಪರೂಪಕ್ಕೆ ಬೌಲಿಂಗ್ ನಡೆಸಿದ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಟೀಮ್ ಇಂಡಿಯಾ ಪರ ಬ್ಯಾಟಿಂಗ್‌ನಲ್ಲಿ ಔಟಾಗದೆ 128*(94 ಎಸೆತ, 5 ಸಿಕ್ಸ್, 10 ಬೌಂಡರಿ) ರನ್ ಗಳಿಸಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

9 ಮಂದಿ ಆಟಗಾರರಿಂದ ಬೌಲಿಂಗ್

ನೆದರ್‌ಲ್ಯಾಂಡ್ಸ್‌ ವಿರುದ್ಧದ ಇಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಇಬ್ಬರನ್ನು ಬಿಟ್ಟರೆ ಒಂಭತ್ತು ಮಂದಿ ಆಟಗಾರರು ಬೌಲಿಂಗ್ ನಡೆಸಿದ್ದು ವಿಶೇಷವಾಗಿತ್ತು. ಶುಭಮನ್ ಗಿಲ್, ಸೂರ್ಯ ಕುಮಾರ್ ಯಾದವ್ ಕೂಡ ಬೌಲಿಂಗ್ ನಡೆಸಿದ್ದು, ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿತು.

ಸೆಮಿಫೈನಲ್‌ನಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಟೀಮ್ ಇಂಡಿಯಾ ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X