ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ | ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

Date:

Advertisements

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಇಂದು ನಡೆಯಲಿರುವ ವಿಶ್ವಕಪ್ ಸೆಮಿಫೈನಲ್-1ರಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಕೊಂಡಿದ್ದು, ಬ್ಯಾಟಿಂಗ್ ಆಯ್ದುಕೊಂಡಿದೆ.

ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. 2019ರ ಅಂದರೆ ನಾಲ್ಕು ವರ್ಷಗಳ ಹಿಂದೆ ಇದೇ ನ್ಯೂಜಿಲ್ಯಾಂಡ್‌ ತಂಡ ಮ್ಯಾಂಚೆಸ್ಟರ್‌ನಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಭಾರತದ ಚಾಂಪಿಯನ್ ಕನಸನ್ನು ಭಗ್ನಗೊಳಿಸಿತ್ತು. ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿ, ಫೈನಲ್ ತಲುಪಿತ್ತು. ಫೈನಲ್‌ನಲ್ಲಿ ಇಂಗ್ಲೆಂಡ್‌ ತಂಡ, ನ್ಯೂಝಿಲ್ಯಾಂಡ್ ತಂಡವನ್ನು ರೋಚಕವಾಗಿ ಸೋಲಿಸಿ, ಚಾಂಪಿಯನ್ ಆಗಿತ್ತು.

ನ್ಯೂಝಿಲ್ಯಾಂಡ್ ಹಾಗೂ ಭಾರತದ ಮಧ್ಯೆ ಇಂದು ನಡೆಯುತ್ತಿರುವ ಈ ಬಾರಿಯ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಆಗಿದ್ದು, ನಾಳೆ(ನ.16) ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಮಧ್ಯೆ ಕೊಲ್ಕತ್ತಾದ ಈಡನ್‌ ಗಾರ್ಡನ್ ಮೈದಾನದಲ್ಲಿ ಎರಡನೇ ಸೆಮಿಫೈನಲ್ ನಡೆಯಲಿದೆ. ಸೆಮಿಫೈನಲ್‌ನಲ್ಲಿ ಗೆದ್ದ ತಂಡಗಳ ಮಧ್ಯೆ ನವೆಂಬರ್ 19ರ ಭಾನುವಾರದಂದು ಫೈನಲ್ ಪಂದ್ಯವು ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Advertisements

ಟೀಮ್ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್

ನ್ಯೂಝಿಲ್ಯಾಂಡ್ ತಂಡ:

ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X