ಐಎಂಎಲ್ 2025 | ಇಂಡಿಯಾ ಮಾಸ್ಟರ್ಸ್ ಚಾಂಪಿಯನ್; ಮಿಂಚಿದ ಅಂಬಾಟಿ ರಾಯುಡು ​

Date:

Advertisements

ಛತ್ತೀಸ್‌ಗಢದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್(ಐಎಂಎಲ್) ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಉಭಯ ತಂಡಗಳ ನಡುವೆ ನಡೆದ ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್ 17 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಮಾಸ್ಟರ್ಸ್ ಪರ ಲೆಂಡ್ಲ್ ಸಿಮನ್ಸ್ ಅತಿ ಹೆಚ್ಚು ರನ್ ಗಳಿಸಿದರು. ಸಿಮನ್ಸ್ 41 ಎಸೆತಗಳಲ್ಲಿ 139.02 ಸ್ಟ್ರೈಕ್ ರೇಟ್‌ನಲ್ಲಿ 57 ರನ್ ಗಳಿಸಿದರು. ವಿಂಡೀಸ್ ಪರವಾಗಿ ಸಿಮನ್ಸ್ 1 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು.

Advertisements

ಇವರಲ್ಲದೆ, ಆರಂಭಿಕ ಆಟಗಾರ ಡ್ವೇನ್ ಸ್ಮಿತ್ 2 ಸಿಕ್ಸರ್ ಮತ್ತು 4 ಬೌಂಡರಿಗಳೊಂದಿಗೆ 45 ರನ್ ಗಳಿಸಿದರು. ವಿಕೆಟ್ ಕೀಪರ್ ದಿನೇಶ್ ರಾಮ್ದಿನ್ ಅಜೇಯ 12 ರನ್ ಗಳಿಸಿದರು. ಈ ಮೂವರನ್ನು ಹೊರತುಪಡಿಸಿ, ಯಾರೂ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ. ನಾಯಕ ಬ್ರಿಯಾನ್ ಲಾರಾ, ವಿಲಿಯಂ ಪರ್ಕಿನ್ಸ್ ಮತ್ತು ಚಾಡ್ವಿಕ್ ವಾಲ್ಟನ್ ತಲಾ 6 ರನ್ ಗಳಿಸಿದರೆ, ರವಿ ರಾಂಪಾಲ್ 2 ರನ್ ಕೊಡುಗೆ ನೀಡಿದರು. ಆಶ್ಲೇ ನರ್ಸ್ 1 ರನ್ ಗಳಿಸಿದರು.

ಈ ಸುದ್ದಿ ಓದಿದ್ದೀರಾ? ‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

ಇಂಡಿಯಾ ಮಾಸ್ಟರ್ಸ್ ಪರ ಒಟ್ಟು 6 ಮಂದಿ ಬೌಲಿಂಗ್ ಮಾಡಿ, ವಿನಯ್ ಕುಮಾರ್ 3 , ಶಾದಾಬ್ ನದೀಮ್ 2 , ಪವನ್ ನೇಗಿ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಪಡೆದರು.

148 ರನ್​ಗಳ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್​ ಪರ ಅಂಬಾಟಿ ರಾಯುಡು ಸ್ಫೋಟಕ ಇನಿಂಗ್ಸ್ ಕಟ್ಟಿದರು. ರಾಯುಡು 50 ಎಸೆತಗಳಲ್ಲಿ 148 ಸ್ಟ್ರೈಕ್ ರೇಟ್‌ನಲ್ಲಿ 74 ರನ್ ಗಳಿಸಿದರು. ರಾಯುಡು ಅವರ ಇನಿಂಗ್ಸ್‌ನಲ್ಲಿ 3 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳು ಸೇರಿದ್ದವು. ಅವರನ್ನು ಹೊರತುಪಡಿಸಿ ನಾಯಕ ಸಚಿನ್ ತೆಂಡೂಲ್ಕರ್ 18 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 2 ಬೌಂಡರಿಗಳೊಂದಿಗೆ 25 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಗುರುಕಿರತ್ ಸಿಂಗ್ ಮಾನ್ 14 ರನ್​ಗಳ ಕಾಣಿಕೆ ನೀಡಿದರೆ, ಯೂಸುಫ್ ಪಠಾಣ್‌ಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ಕೊನೆಯಲ್ಲಿ ಯುವರಾಜ್ ಸಿಂಗ್ (13 ರನ್) ಮತ್ತು ಸ್ಟುವರ್ಟ್ ಬಿನ್ನಿ (16 ರನ್) ಜೋಡಿ ಭಾರತವನ್ನು ಗೆಲುವಿನತ್ತ ಕೊಂಡೊಯ್ದಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X