ಏಕದಿನ ವಿಶ್ವಕಪ್ 2023 | ಭಾರತಕ್ಕೆ ಸವಾಲಿನ ಗುರಿ ನೀಡಿದ ಬಾಂಗ್ಲಾ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತಕ್ಕೆ 257 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾ ಬ್ಯಾಟಿಂಗ್‌ ಆಯ್ದುಕೊಂಡು ಲಿಟ್ಟನ್‌ ದಾಸ್, ತಂಝೀದ್ ಹಸನ್, ಮುಶ್ಫಿಕರ್ ರಹೀಮ್ ಹಾಗೂ ಮಹಮ್ಮದುಲ್ಲಾ ಅವರ ಸಮಯೋಚಿತ ಆಟದಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್‌ ಪೇರಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ಲಿಟ್ಟನ್‌ ದಾಸ್ ಹಾಗೂ ತಂಝೀದ್ ಹಸನ್ ಬಿರುಸಿನ ಹೊಡೆತಗಳ ಮೂಲಕ ಮೊದಲ 14 ಓವರ್‌ಗಳಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. 14.4 ಓವರ್‌ನಲ್ಲಿ ತಂಡದ ಮೊತ್ತ 93 ಆಗಿದ್ದಾಗ ತಂಝೀದ್ ಹಸನ್(51)  ಅವರನ್ನು ಎಲ್‌ಬಿ ಬಲೆಗೆ ಕೆಡವುದರ ಮೂಲಕ ಇವರಿಬ್ಬರ ಜೋಡಿಯನ್ನು ಕುಲದೀಪ್‌ ಯಾದವ್‌ ಮುರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಂತರ ಬಂದ ನಜ್ಮುಲ್ ಹೊಸೈನ್ ಶಾಂಟೊ(8), ಮೆಹಿದಿ ಹಸನ್ ಮಿರಾಜ್(3) ಹಾಗೂ ತೌಹಿದ್ ಹೃದಯೋಯ್(16) ಅವರು ಸಿರಾಜ್‌ ಹಾಗೂ ಜಡೇಜಾ ದಾಳಿಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯದೆ ಪೆವಿಲಿಯನ್‌ ಕಡೆ ಮುಖಮಾಡಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಲಿಟ್ಟನ್‌ ದಾಸ್‌ (66) ಔಟಾದ ನಂತರ ತಂಡಕ್ಕೆ ಚೇತರಿಕೆ ನೀಡಿದವರು ಮುಶ್ಫಿಕರ್ ರಹೀಮ್(38) ಹಾಗೂ ಮಹಮ್ಮದುಲ್ಲಾ(46). ಅಂತಿಮವಾಗಿ 50 ಓವರ್‌ಗಳಲ್ಲಿ ಬಾಂಗ್ಲಾದೇಶ 256 ರನ್‌ ಕಲೆ ಹಾಕಿತು.

ಭಾರತದ ಪರ ರವೀಂದ್ರ ಜಡೇಜಾ 38/2, ಮೊಹಮ್ಮದ್ ಸಿರಾಜ್ 52/2, ಜಸ್ಪ್ರೀತ್ ಬುಮ್ರಾ 41/2 ಗಳಿಸಿದರೆ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಗಾಯಗೊಂಡ ಹಾರ್ದಿಕ್, ಕೊಹ್ಲಿ ಬೌಲಿಂಗ್

ಮೂರು ಚೆಂಡುಗಳನ್ನು ಹಾಕಿದ ನಂತರ ಬೌಲಿಂಗ್‌ ಮಾಡುವ ವೇಳೆ ಗಾಯಗೊಂಡ ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದರು. ಹಾರ್ದಿಕ್‌ನ ಬಾಕಿ ಮೂರು ಎಸೆತವನ್ನು ವಿರಾಟ್‌ ಕೊಹ್ಲಿ ಮಾಡಿ 2 ರನ್‌ಗಳಷ್ಟನ್ನೇ ನೀಡಿದರು. ಇದರೊಂದಿಗೆ 6 ವರ್ಷಗಳ ನಂತರ ಕೊಹ್ಲಿ ಬೌಲಿಂಗ್‌ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...