ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತಕ್ಕೆ 257 ರನ್ಗಳ ಸವಾಲಿನ ಗುರಿಯನ್ನು ನೀಡಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ದುಕೊಂಡು ಲಿಟ್ಟನ್ ದಾಸ್, ತಂಝೀದ್ ಹಸನ್, ಮುಶ್ಫಿಕರ್ ರಹೀಮ್ ಹಾಗೂ ಮಹಮ್ಮದುಲ್ಲಾ ಅವರ ಸಮಯೋಚಿತ ಆಟದಿಂದ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಪೇರಿಸಿದೆ.
ಆರಂಭಿಕರಾಗಿ ಕಣಕ್ಕಿಳಿದ ಲಿಟ್ಟನ್ ದಾಸ್ ಹಾಗೂ ತಂಝೀದ್ ಹಸನ್ ಬಿರುಸಿನ ಹೊಡೆತಗಳ ಮೂಲಕ ಮೊದಲ 14 ಓವರ್ಗಳಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. 14.4 ಓವರ್ನಲ್ಲಿ ತಂಡದ ಮೊತ್ತ 93 ಆಗಿದ್ದಾಗ ತಂಝೀದ್ ಹಸನ್(51) ಅವರನ್ನು ಎಲ್ಬಿ ಬಲೆಗೆ ಕೆಡವುದರ ಮೂಲಕ ಇವರಿಬ್ಬರ ಜೋಡಿಯನ್ನು ಕುಲದೀಪ್ ಯಾದವ್ ಮುರಿದರು.
ನಂತರ ಬಂದ ನಜ್ಮುಲ್ ಹೊಸೈನ್ ಶಾಂಟೊ(8), ಮೆಹಿದಿ ಹಸನ್ ಮಿರಾಜ್(3) ಹಾಗೂ ತೌಹಿದ್ ಹೃದಯೋಯ್(16) ಅವರು ಸಿರಾಜ್ ಹಾಗೂ ಜಡೇಜಾ ದಾಳಿಗೆ ಕ್ರೀಸ್ನಲ್ಲಿ ಹೆಚ್ಚು ಕಾಲ ಉಳಿಯದೆ ಪೆವಿಲಿಯನ್ ಕಡೆ ಮುಖಮಾಡಿದರು.
https://t.co/qWjA0WQ4ii pic.twitter.com/tEo8H3gj6v
— BCCI (@BCCI) October 19, 2023
ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್ಗೆ ಟಿ20 ಕ್ರಿಕೆಟ್ ಸೇರ್ಪಡೆ
ರವೀಂದ್ರ ಜಡೇಜಾ ಬೌಲಿಂಗ್ನಲ್ಲಿ ಲಿಟ್ಟನ್ ದಾಸ್ (66) ಔಟಾದ ನಂತರ ತಂಡಕ್ಕೆ ಚೇತರಿಕೆ ನೀಡಿದವರು ಮುಶ್ಫಿಕರ್ ರಹೀಮ್(38) ಹಾಗೂ ಮಹಮ್ಮದುಲ್ಲಾ(46). ಅಂತಿಮವಾಗಿ 50 ಓವರ್ಗಳಲ್ಲಿ ಬಾಂಗ್ಲಾದೇಶ 256 ರನ್ ಕಲೆ ಹಾಕಿತು.
ಭಾರತದ ಪರ ರವೀಂದ್ರ ಜಡೇಜಾ 38/2, ಮೊಹಮ್ಮದ್ ಸಿರಾಜ್ 52/2, ಜಸ್ಪ್ರೀತ್ ಬುಮ್ರಾ 41/2 ಗಳಿಸಿದರೆ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಗಾಯಗೊಂಡ ಹಾರ್ದಿಕ್, ಕೊಹ್ಲಿ ಬೌಲಿಂಗ್
ಮೂರು ಚೆಂಡುಗಳನ್ನು ಹಾಕಿದ ನಂತರ ಬೌಲಿಂಗ್ ಮಾಡುವ ವೇಳೆ ಗಾಯಗೊಂಡ ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದರು. ಹಾರ್ದಿಕ್ನ ಬಾಕಿ ಮೂರು ಎಸೆತವನ್ನು ವಿರಾಟ್ ಕೊಹ್ಲಿ ಮಾಡಿ 2 ರನ್ಗಳಷ್ಟನ್ನೇ ನೀಡಿದರು. ಇದರೊಂದಿಗೆ 6 ವರ್ಷಗಳ ನಂತರ ಕೊಹ್ಲಿ ಬೌಲಿಂಗ್ ಮಾಡಿದ್ದಾರೆ.