ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 318 ರನ್‌ಗಳ ಹಿನ್ನಡೆಯಲ್ಲಿ ಟೀಮ್‌ ಇಂಡಿಯಾ

Date:

Advertisements

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್‌ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ದಾಟಲು ರೋಹಿತ್‌ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 469 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಭಾರತದ ಬೌಲರ್‌ಗಳು ಯಶಸ್ವಿಯಾಗಿದ್ದರು. ಆದರೆ ಆ ಬಳಿಕ ಬ್ಯಾಟಿಂಗ್‌ ಆರಂಭಿಸಿದ ಭಾರತ ಆರಂಭದಲ್ಲೇ ಕುಸಿಯಿತು. ತಂಡದ ಮೊತ್ತ 30 ತಲುಪುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್‌ ಸೇರಿದ್ದರು.

ಕೈಕೊಟ್ಟ ಅಗ್ರ ಕ್ರಮಾಂಕ!

Advertisements

ನಾಯಕ ರೋಹಿತ್‌ ಶರ್ಮಾ 15 ರನ್‌ಗಳಿಸಿದ್ದ ವೇಳೆ ಕಮ್ಮಿನ್ಸ್‌ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಆದರು. ಮುಂದಿನ ಓವರ್‌ನಲ್ಲೇ ಶುಭ್‌ಮನ್‌ ಗಿಲ್‌ (13) ಬೊಲಾಂಡ್‌ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆದರು. ಅನುಭವಿ ಚೆತೇಶ್ವರ ಪುಜಾರ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ಕಾಣಿಗೆ ತಲಾ 14 ರನ್‌.

ಐಪಿಎಲ್‌ ಗುಂಗಿನಲ್ಲೇ ಬ್ಯಾಟ್‌ ಬೀಸಿದ ರವೀಂದ್ರ ಜಡೇಜಾ, ಬೌಂಡರಿಗಳ ಮೂಲಕವೇ ರನ್‌ ಗಳಿಸುತ್ತಾ ಸಾಗಿದರು. ಕೇವಲ 50 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್‌ ಸಿಡಿಸುವ ಮೂಲಕ 48 ರನ್‌ ಕಲೆಹಾಕಿದ್ದ ಜಡ್ಡು, ಲಿಯಾನ್‌ ಸ್ಪಿನ್‌ ಬೌಲಿಂಗ್‌ನಲ್ಲಿ ಸ್ಲಿಪ್‌ನಲ್ಲಿ ಕ್ಯಾಚಿತ್ತು ನಿರಾಸೆಯಿಂದ ನಿರ್ಗಮಿಸಿದರು.

29 ರನ್‌ಗಳಿಸಿರುವ ಅಜಿಂಕ್ಯಾ ರಹಾನೆ ಮತ್ತು 5 ರನ್‌ಗಳಿಸಿರುವ ಎಸ್‌ ಭರತ್‌, ಶುಕ್ರವಾರ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ.

ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮ್ಮಿನ್ಸ್‌, ಸ್ಕಾಟ್‌ ಬೊಲಾಂಡ್‌, ಕ್ಯಾಮರೂನ್‌ ಗ್ರೀನ್‌ಹಾಗೂ ನಾಥನ್‌ ಲಿಯಾನ್‌ ತಲಾ 1 ವಿಕೆಟ್‌ ಪಡೆದರು.

469 ರನ್‌ಗಳಿಗೆ ಆಸ್ಟ್ರೇಲಿಯಾ  ಆಲೌಟ್‌

3 ವಿಕೆಟ್ ನಷ್ಟದಲ್ಲಿ 327 ರನ್ ಗಳಿಂದ ಎರಡನೇ ದಿನದಾಟ ಆರಂಭಿಸಿದ್ದ ಆಸೀಸ್‌ ಪಡೆ, ಗುರುವಾರ, 121.3 ಓವರ್‌ಗಳಲ್ಲಿ 469 ರನ್‌ಗಳಿಗೆ ಆಲೌಟ್‌ ಆಯಿತು.

95 ರನ್‌ಗಳಿಂದ ಗುರುವಾರ ಬ್ಯಾಟಿಂಗ್‌ ಆರಂಭಿಸಿದ್ದ ಸ್ಮಿತ್‌, ಸಿರಾಜ್‌ ಎಸೆದ ದಿನದಾಟದ ಮೊದಲ ಓವರ್‌ನಲ್ಲೇ ಸತತ ಎರಡು ಬೌಂಡರಿಗಳನ್ನು ಬಾರಿಸುವ ಶತಕ ಪೂರ್ತಿಗೊಳಿಸಿದರು.‌ ಟ್ರಾವಿಸ್‌ ಹೆಡ್‌163 ರನ್‌ಗಳಿಸಿ ನಿರ್ಗಮಿಸಿದರು. ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ 48 ರನ್‌ಗಳಿಸಿದ್ದ ವೇಳೆ ಜಡೇಜಾ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂಗೆ ಬಲಿಯಾದರು.

ಟೀಮ್‌ ಇಂಡಿಯಾ ಪರ ಮುಹಮ್ಮದ್‌ ಸಿರಾಜ್‌ 4 ವಿಕೆಟ್‌ ಪಡೆದರೆ, ಮುಹಮ್ಮದ್‌ ಶಮಿ ಮತ್ತು ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X