ಏಕದಿನ ಸರಣಿ; ಸೋಲಿನ ದಾಖಲೆ ಬರೆದ ಭಾರತ!

Date:

Advertisements
  • 2 ವರ್ಷಗಳಲ್ಲಿ ಭಾರತಕ್ಕೆ ಎದುರಾದ 3ನೇ 10 ವಿಕೆಟ್ ಸೋಲು
  • 234 ಎಸೆತ‌ ಬಾಕಿ ಉಳಿಸಿ ನಿರ್ಣಾಯಕ ಪಂದ್ಯ ಗೆದ್ದ ಆಸ್ಟ್ರೇಲಿಯ

ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ, 10 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ವಿಶಾಖಪಟ್ಟಣದಲ್ಲಿ ನಡೆದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತ ಮುಂದಿಟ್ಟ 117 ರನ್‌ಗಳ ಸುಲಭ ಸವಾಲನ್ನು ಪ್ರವಾಸಿ ಪಡೆ, ಕೇವಲ 11 ಓವರ್‌ಗಳಲ್ಲಿ (121 ರನ್) ಯಾವುದೇ ವಿಕೆಟ್‌ ನಷ್ಟವಿಲ್ಲದೆ ಚೇಸ್‌ ಮಾಡಿತು.‌

ಅತಿ ಹೆಚ್ಚು ಓವರ್‌ಗಳನ್ನು ಬಾಕಿ ಉಳಿಸಿಕೊಂಡು (234 ಎಸೆತ) ಟೀಮ್‌ ಇಂಡಿಯಾ ಸೋತ ಪಂದ್ಯ ಎಂಬ ಕೆಟ್ಟ ದಾಖಲೆ ಭಾನುವಾರ ದಾಖಲಾಗಿದೆ. ಮತ್ತೊಂದೆಡೆ ಅತಿ ಹೆಚ್ಚು ಓವರ್‌ಗಳನ್ನು ಬಾಕಿ ಉಳಿಸಿಕೊಂಡು ಆಸೀಸ್‌ ಪಡೆ ದಾಖಲಿಸಿದ ಮೂರನೇ ಅತಿದೊಡ್ಡ ಗೆಲವು ಇದಾಗಿದೆ.

Advertisements

ತವರು ನೆಲದಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತ ದಾಖಲಿಸಿದ ಕನಿಷ್ಠ ಮೊತ್ತ ಮತ್ತು ಮೊದಲು ಬ್ಯಾಟ್‌ ಮಾಡುವ ವೇಳೆ ಟೀಮ್‌ ಇಂಡಿಯಾ ಒಟ್ಟುಗೂಡಿಸಿದ ಎರಡನೇ ಕನಿಷ್ಠ ಮೊತ್ತ ಇದಾಗಿದೆ.

2019ರಲ್ಲಿ ಹ್ಯಾಮಿಲ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧದ ನ್ಯೂಜಿಲೆಂಡ್‌ ಗೆಲುವಿನ ದಾಖಲೆಯನ್ನು ಆಸ್ಟ್ರೇಲಿಯ ಹಿಂದಿಕ್ಕಿದೆ. ಅಂದಿನ ಪಂದ್ಯದಲ್ಲಿ ಭಾರತ ಮುಂದಿಟ್ಟಿದ 92 ರನ್‌ಗಳ ಗೆಲುವಿನ ಗುರಿಯನ್ನು ಆತಿಥೇಯ ಕಿವೀಸ್‌ ಪಡೆ, 14.4 ಓವರ್‌ಗಳಲ್ಲಿ ಬೆನ್ನಟ್ಟಿತ್ತು. ಇದೀಗ ಆ ದಾಖಲೆಯನ್ನು ಸ್ಟೀವ್‌ ಸ್ಮಿತ್‌ ಪಡೆ ತನ್ನದಾಗಿಸಿಕೊಂಡಿದೆ. ಕಾಕತಾಳೀಯವೆಂದರೆ ಈ ಎರಡೂ ಸೋಲುಗಳು ರೋಹಿತ್ ಶರ್ಮಾ ನಾಯಕತ್ವದಲ್ಲಿ ದಾಖಲಾಗಿವೆ.

ಕಳೆದ ಎರಡು ವರ್ಷಗಳಲ್ಲಿ ಭಾರತಕ್ಕೆ ಎದುರಾದ 3ನೇ 10 ವಿಕೆಟ್ ಸೋಲು ಇದಾಗಿದೆ.

  1. 2021ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ
  2. 2022ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್  ವಿರುದ್ಧ

ಸರಣಿಯ ಮೂರನೇ ನಿರ್ಣಾಯಕ ಪಂದ್ಯ ಮಾರ್ಚ್‌ 22, ಬುಧವಾರದಂದು ಚೆನ್ನೈನಲ್ಲಿ ನಡೆಯಲಿದೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X