ಆಸೀಸ್ ವಿರುದ್ಧ ಐದನೇ ಟೆಸ್ಟ್ | ಟೀಂ ಇಂಡಿಯಾ ಮತ್ತೆ ವೈಫಲ್ಯ: 185ಕ್ಕೆ ಆಲೌಟ್

Date:

Advertisements

ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್‌ – ಗವಾಸ್ಕರ್‌ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿರುವ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲೌಟ್‌ ಆಗಿದೆ. ಈ ಟೆಸ್ಟ್‌ ಪಂದ್ಯದಲ್ಲೂ ಟೀಮ್ ಇಂಡಿಯಾದ ಸ್ಟಾರ್‌ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ಮತ್ತೆ ವಿಫಲರಾದರು.

ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಜಸ್ಪ್ರಿತ್ ಬುಮ್ರಾ ಅವರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಟೀಮ್ ಇಂಡಿಯಾಗೆ ಇದು ಮಹತ್ವದ ಪಂದ್ಯವಾಗಿತ್ತು. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ದೃಷ್ಟಿಯಿಂದ ಈ ಪಂದ್ಯ ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿತ್ತು. ಆದರೆ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲಿಲ್ಲ.

ಯಶಸ್ವಿ ಜೈಸ್ವಾಲ್‌ (10), ಕೆ ಎಲ್ ರಾಹುಲ್ (4) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ನಾಲ್ಕನೇ ಟೆಸ್ಟ್‌ನಲ್ಲಿ ತಂಡದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌, ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಅವಕಾಶವನ್ನು ಪಡೆದರು. ಆದರೆ ಇವರು ಸಹ 20 ರನ್‌ಗಳ ಮೇಲೆ ದೊಡ್ಡ ಕಾಣಿಕೆ ನೀಡಲಿಲ್ಲ. ಹಳೆಯ ದಾಟಿಯಲ್ಲಿ ಔಟ್ ಆದ ವಿರಾಟ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವ ಸೂಚನೆ ನೀಡಿದ್ದರು. ಆದರೆ 17 ರನ್‌ಗಳಿಸಿ ಔಟಾದರು.

Advertisements

ಈ ಸುದ್ದಿ ಓದಿದ್ದೀರಾ? ನಾಲ್ಕನೇ ಟೆಸ್ಟ್‌ | ಕೈಕೊಟ್ಟ ಬ್ಯಾಟಿಂಗ್: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಹೀನಾಯ ಸೋಲು

48 ರನ್‌ಗಳ ಜೊತೆಯಾಟ 72 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಜೋಡಿ ಕೊಂಚ ಆಸರೆ ಆಯಿತು. ಇವರಿಬ್ಬರ ಜೋಡಿ 151 ಎಸೆತಗಳನ್ನು ಎದುರಿಸಿ 48 ರನ್‌ಗಳ ಪೇರಿಸಿತು. ರಿಷಭ್‌ ಪಂತ್‌ 98 ಎಸೆತಗಳಲ್ಲಿ 40 ರನ್‌ ಬಾರಿಸಿ ನಿರ್ಗಮಿಸಿದರು. ರವೀಂದ್ರ ಜಡೇಜಾ 95 ಎಸೆತಗಳಲ್ಲಿ 26 ರನ್‌ ಸಿಡಿಸಿದರು. ಕೆಳ ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್‌ ಸುಂದರ್ 14, ಜಸ್ಪ್ರಿತ್ ಬುಮ್ರಾ 22 ರನ್ ಬಾರಿಸಿ ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾದ ಪರ ವೇಗದ ಬೌಲರ್‌ಗಳು ಬಿಗುವಿನ ದಾಳಿಯನ್ನು ನಡೆಸಿದರು. ಸ್ಕಾಟ್‌ ಬೋಲೆಂಡ್‌ 31 ರನ್‌ ನೀಡಿ 4 ವಿಕೆಟ್‌ ಪಡೆದರೆ, ಮಿಚೆಲ್ ಸ್ಟಾರ್ಕ್‌ 3, ಪ್ಯಾಟ್‌ ಕಮಿನ್ಸ್‌ 2 ವಿಕೆಟ್‌ ಪಡೆದರು, ಲಿಯೋನ್‌ 1 ವಿಕೆಟ್ ಕಬಳಿಸಿದರು.

ಮೊದಲ ಇನಿಂಗ್ಸ್ ಆರಂಭಿಸಿರುವ ಆಸೀಸ್ ಆರಂಭಿಕ ಪತನ ಕಂಡಿದ್ದು 3 ಓವರ್‌ಗಳಲ್ಲಿ 9 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X