ಛತ್ತೀಸ್‌ಗಢ | ಜನರೇಟರ್‌ ನೆರವಿನಿಂದ ನಡೆದ ಭಾರತ-ಆಸೀಸ್ ನಡುವಿನ 4ನೇ ಟಿ20 ಪಂದ್ಯ!

Date:

Advertisements

ನಿನ್ನೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೆ ಟಿ-20 ಕ್ರಿಕೆಟ್ ಪಂದ್ಯದಲ್ಲಿ, ಟೀಮ್ ಇಂಡಿಯಾ 20 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ 3-1 ಮುನ್ನಡೆಯೊಂದಿಗೆ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು.

ಈ ಪಂದ್ಯ ನಡೆದಿದ್ದು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ. ಆದರೆ, ಈ ಮಹತ್ವದ ಪಂದ್ಯ ನಡೆದಿದ್ದು ವಿದ್ಯುತ್ ಸಂಪರ್ಕ ಇಲ್ಲದೆ, ಕೇವಲ ಜನರೇಟರ್‌ನ ನೆರವಿನಿಂದ ಎಂದರೆ ನೀವು ನಂಬಲೇಬೇಕು.

ಹೌದು. ಇದಕ್ಕೆ ಕಾರಣ 2009ರಿಂದ ವಿದ್ಯುತ್ ಶುಲ್ಕ ಬಾಕಿಯನ್ನು ಪಾವತಿ ಮಾಡದೆ ಇರುವುದು. ಈ ಕ್ರೀಡಾಂಗಣವು ರೂ. ₹3.16 ಕೋಟಿ ವಿದ್ಯುತ್ ಶುಲ್ಕವನ್ನು ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ, ಕಳೆದ ಐದು ವರ್ಷಗಳ ಹಿಂದೆಯೇ ಈ ಕ್ರೀಡಾಂಗಣಕ್ಕೆ ವಿದ್ಯುತ್‌ ಪೂರೈಕೆಯನ್ನು ಕಡಿತಗೊಳಿಸಲಾಗಿದೆ.

Advertisements

ಛತ್ತೀಸ್‌ಗಢದಲ್ಲಿ ಕೆಲ ದಿನಗಳ ಹಿಂದಷ್ಟೇ ಮತದಾನ ಪ್ರಕ್ರಿಯೆ ಮುಗಿದಿದ್ದು, ನಾಳೆ(ಡಿ.3) ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆಯೇ ಈ ಸುದ್ದಿ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಟಿ20 । ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 3-1 ಸರಣಿ ಜಯ

ಬಿಲ್ ಬಾಕಿ ಇರುವ ಬಗ್ಗೆ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆಯೇ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಒಕ್ಕೂಟವು ಮುಖಭಂಗದಿಂದ ತಪ್ಪಿಸಲು ಹಾಗೂ ಪಂದ್ಯವು ಸುಗಮವಾಗಿ ಸಾಗಲು ಜನರೇಟರ್‍‌ನ ವ್ಯವಸ್ಥೆ ಮಾಡಿದ್ದವು. ಆದರೆ ಈ ಜನರೇಟರ್‍‌ ವ್ಯವಸ್ಥೆಗಾಗಿ ಕ್ರೀಡಾಂಗಣದ ಅಧಿಕಾರಿಗಳು 1.4 ಕೋಟಿ ಖರ್ಚು ಮಾಡಿದ್ದಾರೆ. ಅಂದರೆ ಬಾಕಿ ಇರುವ ವಿದ್ಯುತ್ ಬಿಲ್‌ನ( ₹3.16 ಕೋಟಿ) 40 ಶೇಕಡಾದಷ್ಟು ಎಂದು ‘ಟೈಮ್ಸ್‌ ಆಫ್ ಇಂಡಿಯಾ‘ ವರದಿ ಮಾಡಿದೆ.

ರಾಜ್ಯ ಕ್ರಿಕೆಟ್ ಒಕ್ಕೂಟದ ಮನವಿಯ ಮೇರೆಗೆ ಈ ಕ್ರೀಡಾಂಗಣಕ್ಕೆ ತಾತ್ಕಾಲಿಕ ವಿದ್ಯುತ್ ಪೂರೈಕೆಯನ್ನು ಒದಗಿಸಲಾಗಿದ್ದರೂ, ಈ ವಿದ್ಯುತ್ ಪ್ರೇಕ್ಷಕರ ಗ್ಯಾಲರಿ ಹಾಗೂ ಬಾಕ್ಸ್ ಗಳಿಗೆ ಮಾತ್ರ ಸಾಕಾಗಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯದ ವೇಳೆ ಜನರೇಟರ್ ನೆರವಿನಿಂದ ಹೊನಲು ಬೆಳಕಿನ ವ್ಯವಸ್ಥೆ ಮಾಡಿದೆ ಎಂದು ವರದಿ ತಿಳಿಸಿದೆ.

2018ರಲ್ಲಿ ನಡೆದಿದ್ದ ಮ್ಯಾರಥಾನ್‌ ವೇಳೆ ಅಥ್ಲೀಟ್‌ಗಳು ಭಾಗವಹಿಸಿದ್ದಾಗ, ಕ್ರೀಡಾಂಗಣದಲ್ಲಿ ವಿದ್ಯುತ್‌ ಪೂರೈಕೆ ಇಲ್ಲ ಎಂಬ ಸಂಗತಿ ಬೆಳಕಿಗೆ ಬಂದು ಭಾರೀ ಗದ್ದಲವಾಗಿತ್ತು. ಇದಾದ ನಂತರ, ವಿದ್ಯುತ್ ಶುಲ್ಕವನ್ನು 2009ರಿಂದ ಪಾವತಿಸಲಾಗಿಲ್ಲ ಎಂದು ಪ್ರಕಟಿಸಲಾಗಿತ್ತು. ಆ ವೇಳೆಗೆ ವಿದ್ಯುತ್ ಶುಲ್ಕ ಬಾಕಿ ಮೊತ್ತವು ರೂ. 3.16 ಕೋಟಿಗೂ ಅಧಿಕವಾಗಿತ್ತು.

2018ರಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದಾಗಿನಿಂದ ಇಲ್ಲಿಯವರೆಗೆ ಈ ಕ್ರೀಡಾಂಗಣದಲ್ಲಿ ಮೂರು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ನಡೆದಿವೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X