India vs Australia Test | ಟಾಸ್ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ, ಇಬ್ಬರಿಗೆ ಚೊಚ್ಚಲ ಅವಕಾಶ

Date:

Advertisements

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ (ನ.22) ಆರಂಭವಾಗಿದೆ.

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ಉಸ್ತುವಾರಿ ನಾಯಕ ಜಸ್‌ಪ್ರೀತ್ ಬೂಮ್ರಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳ ನಡುವಿನ ಈ ಪಂದ್ಯಕ್ಕೆ ಪರ್ತ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಆಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ, ವೇಗಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ.

Advertisements

ಭಾರತ ತಂಡದಲ್ಲಿ ಎರಡು ಹೊಸಮುಖಗಳಿದ್ದು, ಆಲ್​ರೌಂಡರ್​ಗಳಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷೀತ್ ರಾಣಾ ಪದಾರ್ಪಣೆ ಮಾಡಿದ್ದಾರೆ. ಇವರಿಬ್ಬರಿಗೂ ಚೊಚ್ಚಲ ಟೆಸ್ಟ್ ಪಂದ್ಯ ಇದಾಗಿದೆ. ಹರ್ಷಿತ್​ ರಾಣಾಗೆ ಅಶ್ವಿನ್ ಚೊಚ್ಚಲ ಕ್ಯಾಪ್ ನೀಡಿದರೆ, ನಿತೀಶ್​ಗೆ ವಿರಾಟ್ ಕೊಹ್ಲಿ ಚೊಚ್ಚಲ ಕ್ಯಾಪ್ ಹಸ್ತಾಂತರಿಸಿದರು.

ಗಾಯದ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಅವಕಾಶ ವಂಚಿತರಾಗಿದ್ದಾರೆ. ಕನ್ನಡಿಗರಾದ ಕೆ ಎಲ್ ರಾಹುಲ್ ಹಾಗೂ ದೇವದತ್ತ ಪಡಿಕ್ಕಲ್‌ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಪಿನ್‌ ವಿಭಾಗದಲ್ಲಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡರೆ, ನಾಲ್ವರು ವೇಗದ ಬೌಲರ್‌ಗಳಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.

ಈ ಸುದ್ದಿ ಓದಿದ್ದೀರಾ? ಸಂಜು – ತಿಲಕ್ ಅಬ್ಬರದ ಅದ್ಭುತ ಆಟದಲ್ಲಿ ಐಪಿಎಲ್ ಹರಾಜಿನ ಸುಳಿವಿದೆಯೇ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಬೇಕಾದರೆ ಟೀಂ ಇಂಡಿಯಾ ಈ ಸರಣಿಯನ್ನು 4-0 ಅಂತರದಿಂದ ಗೆಲ್ಲಬೇಕಿದೆ. ಇದರ ಜೊತೆಗೆ ಸತತ ಎರಡು ಬಾರಿ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿರುವ ಭಾರತಕ್ಕೆ ಹ್ಯಾಟ್ರಿಕ್ ಸರಣಿ ಗೆಲುವು ಸಾಧಿಸುವ ಅವಕಾಶವಿದೆ.

ಭಾರತ ಕೊನೆಯ ಬಾರಿಗೆ 2022-23ರಲ್ಲಿ ತವರಿನಲ್ಲಿ ಆಸ್ಟ್ರೇಲಿಯಾವನ್ನು 2-1 ಅಂತರದಲ್ಲಿ ಸೋಲಿಸುವ ಮೂಲಕ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.

ಉಭಯ ತಂಡಗಳ ಪ್ಲೇಯಿಂಗ್ 11

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.

ಭಾರತ ತಂಡ: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X