ಹಿಂದೆ ಸರಿದ ಆಟಗಾರರು: ಭಾರತ – ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ರದ್ದು

Date:

Advertisements

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ (WCL) ಇಂದು (ಜುಲೈ 20) ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಿಂದ ಭಾರತೀಯ ಆಟಗಾರರು ಹಿಂದೆ ಸರಿದ ಹಿನ್ನಲೆಯಲ್ಲಿ ಪಂದ್ಡಯ ರದ್ದು ಮಾಡಲಾಗಿದೆ. ಇದಕ್ಕೂ ಮುನ್ನ ಜುಲೈ 19 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ ಹಾಗೂ ಶಿಖರ್ ಧವನ್ ತಿಳಿಸಿದ್ದರು. ಇತ್ತ ಐವರು ಪ್ರಮುಖ ಆಟಗಾರರು ಪಂದ್ಯದಿಂದ ಹಿಂದೆ ಸರಿದ ಬೆನ್ನಲ್ಲೇ ಇತರೆ ಆಟಗಾರರು ಕೂಡ ಅಲಭ್ಯರಾಗುವ ಸೂಚನೆ ಲಭಿಸಿತ್ತು.

ಇದರ ಬೆನ್ನಲ್ಲೇ ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿ ಆಯೋಜಕರು ಸಾಮಾಜಿಕ ಮಾಧ್ಯಮದಲ್ಲಿ ಇಂದು ನಡೆಯಲಿರುವ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

Advertisements
Advertisements

ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಲೀಗ್​​ನಲ್ಲಿ ನಾವು ಯಾವಾಗಲೂ ಕ್ರಿಕೆಟ್ ಅನ್ನು ಪ್ರೀತಿಸುತ್ತೇವೆ. ನಮ್ಮ ಏಕೈಕ ಗುರಿ ಅಭಿಮಾನಿಗಳಿಗೆ ಕೆಲವು ಒಳ್ಳೆಯ, ಸಂತೋಷದ ಕ್ಷಣಗಳನ್ನು ನೀಡುವುದಾಗಿದೆ. ಈ ವರ್ಷ ಪಾಕಿಸ್ತಾನ ಹಾಕಿ ತಂಡ ಭಾರತಕ್ಕೆ ಬರಲಿದೆ ಎಂಬ ಸುದ್ದಿಯನ್ನು ಕೇಳಿದ ನಂತರ, ಭಾರತ-ಪಾಕಿಸ್ತಾನ ನಡುವಣ ವಾಲಿಬಾಲ್ ಪಂದ್ಯವನ್ನು ನೋಡಿದ ಬಳಿಕ, WCL ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯವನ್ನು ಮುಂದುವರಿಸಲು ನಾವು ಯೋಚಿಸಿದ್ದೆವು.

ಇದನ್ನು ಓದಿದ್ದೀರಾ?: ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕತೆ | ಕಮ್ಮಾರ ವೀರಭದ್ರಾಚಾರಿ ಜೋಯಿಸನಾದುದು

ಈ ಮೂಲಕ ಪ್ರಪಂಚದಾದ್ಯಂತದ ಜನರಿಗೆ ಕೆಲವು ಸಂತೋಷಕರ ನೆನಪುಗಳನ್ನು ಸೃಷ್ಟಿಸಲು ಬಯಸಿದ್ದೆವು. ಆದರೆ ಬಹುಶಃ ಈ ಪ್ರಕ್ರಿಯೆಯಲ್ಲಿ, ನಾವು ಅನೇಕರ ಭಾವನೆಗಳನ್ನು ನೋಯಿಸಿದ್ದೇವೆ ಮತ್ತು ಕೆಲವರ ಭಾವನೆಗಳನ್ನು ಕಲಕಿದ್ದೇವೆ. ಹೀಗಾಗಿ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದು ಮಾಡಲು ನಿರ್ಧರಿಸಿದ್ದೇವೆ ಎಂದು ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯ ಆಯೋಜಕರು ಸಾಮಾಜಿಕ ಮಾಧ್ಯಮದ ಮೂಲಕ ತಿಳಿಸಿದ್ದಾರೆ.

ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಅನೇಕರು ಪಾಕಿಸ್ತಾನ ವಿರುದ್ಧ ಭಾರತೀಯರು ಯಾವುದೇ ಪಂದ್ಯವಾಡಬಾರದು ಸಾಮಾಜಿಕ ಮಾಧ್ಯಮದಲ್ಲಿ ಆಗ್ರಹಿಸಿದ್ದರು.

ಈ ಬಗ್ಗೆ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸುರೇಶ್ ರೈನಾ, ಶಿಖರ್ ಧವನ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್ ಹಾಗೂ ಹರ್ಭಜನ್ ಸಿಂಗ್ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲು ನಿರಾಕರಿಸಿದ್ದರು. ಇದೀಗ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿರುವ ಆಟಗಾರರು ಕೂಡ ಪಾಕ್ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಪಾಕಿಸ್ತಾನ ಚಾಂಪಿಯನ್ಸ್ ಹಾಗೂ ಇಂಡಿಯಾ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದು ಮಾಡಲು ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜೃಂಭಣೆಯ ಹೊಸ್ತಿಲಲ್ಲಿ ಟೆಸ್ಟ್‌ ಕ್ರಿಕೆಟ್: ಮತ್ತೆ ಮರುಕಳಿಸಲಿರುವ ಇತಿಹಾಸ    

ಟೆಸ್ಟ್ ಕ್ರಿಕೆಟ್ ನಿಧಾನವಾಗಿ ನಡೆಯುವ ಹಾಗೆ ತೋರಬಹುದು, ಆದರೆ ಆ ನಿಧಾನಗತಿಯಲ್ಲಿಯೇ...

ಟೆಸ್ಟ್ ಕ್ರಿಕೆಟ್ | ಆಸೀಸ್ ಬೌಲಿಂಗ್ ಅಬ್ಬರ: 27 ರನ್‌ಗಳಿಗೆ ಆಲೌಟ್ ಆದ ವೆಸ್ಟ್ ಇಂಡೀಸ್!

ಆಸ್ಟ್ರೇಲಿಯಾ ವಿರುದ್ಧ ಕಿಂಗ್‌ಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ...

ಲಾರ್ಡ್ಸ್ ಟೆಸ್ಟ್ | ಟೀಮ್ ಇಂಡಿಯಾಗೆ ‘ಹಾರ್ಟ್ ಬ್ರೇಕ್’: ಇಂಗ್ಲೆಂಡ್‌ಗೆ 22 ರನ್‌ಗಳ ರೋಚಕ ಜಯ

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆನ್...

Wimbledon 2025: 23 ವರ್ಷದ ಯಾನಿಕ್ ಸಿನರ್ ಚೊಚ್ಚಲ ವಿಂಬಲ್ಡನ್ ಚಾಂಪಿಯನ್

ಲಂಡನ್​ ಸೆಂಟರ್​ ಕೋರ್ಟ್​​ನಲ್ಲಿ ನಡೆದ ವಿಂಬಲ್ಡನ್ ಟೆನಿಸ್ 2025ರ ಪುರುಷರ ಫೈನಲ್​ನಲ್ಲಿ...

Download Eedina App Android / iOS

X