ಭವಿಷ್ಯದಲ್ಲಿ ಬಿಸಿಸಿಐಗೆ ಕಾದಿದೆ ದೊಡ್ಡ ಅಪಾಯ; ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಚ್ಚರಿಕೆ

Date:

Advertisements

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಕ್ತಾಯದ ಬಳಿಕ ಅತಿಥೇಯ ದೇಶ ಭಾರಿ ನಷ್ಟ ಅನುಭವಿಸಿದೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಭಾರತ ಜಯ ಸಾಧಿಸಿದ ಚಾಂಪಿಯನ್ಸ್ ಟ್ರೋಫಿ ಆತಿಥ್ಯದಿಂದ ಸುಮಾರು ಒಂದು ಕೋಟಿ ಡಾಲರ್ ಗಳಿಸಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೊಂಡಿದೆ.

ಇಂತಹ ಋಣಾತ್ಮಕ ಪ್ರಚಾರಕ್ಕೆ ಭಾರತದ ಮಾಧ್ಯಮಗಳ ವಿರುದ್ಧ ಪಿಸಿಬಿ ವಕ್ತಾರ ಆಮೀರ್ ಮಿರ್ ಮತ್ತು ಮುಖ್ಯ ಹಣಕಾಸು ಅಧಿಕಾರಿ ಜಾವೇದ್ ಮುರ್ತಝಾ ಹರಿಹಾಯ್ದಿದ್ದಾರೆ. ಭವಿಷ್ಯದಲ್ಲಿ ಬಿಸಿಸಿಐ ಇನ್ನೂ ದೊಡ್ಡ ನಷ್ಟ ಅನುಭವಿಸಲಿದೆ ಎಂದು ಆಮೀರ್ ಮಿರ್ ಎಚ್ಚರಿಕೆ ನೀಡಿದ್ದಾರೆ.

“ಎಲ್ಲ ನಿರ್ಧಾರಗಳನ್ನು ಐಸಿಸಿ ಕೈಗೊಂಡಿದೆ. ಭಾರತ ಪಾಕಿಸ್ತಾನಕ್ಕೆ ಹಾನಿ ಮಾಡುವ ಪ್ರಯತ್ನ ಮಾಡಿದ್ದರೆ, ಇದಕ್ಕೆ ಬೆಲೆ ತೆರುತ್ತದೆ ಎಂದು ನಾನು ಹೇಳಬಲ್ಲೆ. ಭಾರತ-ಪಾಕಿಸ್ತಾನ ಬಿಸಿ ಕೇಕ್ ನಂತೆ ಮಾರಾಟವಾಗುತ್ತವೆ ಎಂದು ನಿಮಗೆ ಗೊತ್ತು. ಮುಂದಿನ ಮೂರು ವರ್ಷಗಳ ಕಾಲ ಪಾಕಿಸ್ತಾನ ಭಾರತಕ್ಕೆ ಪ್ರವಾಸ ಕೈಗೊಳ್ಳುವುದಿಲ್ಲ. ಆದ್ದರಿಂದ ಪಾಕಿಸ್ತಾನಕ್ಕೆ ಯಾವುದೇ ಹಣಕಾಸು ನಷ್ಟವಾಗಿದ್ದರೆ, ಭಾರತಕ್ಕೆ ಪಾಕಿಸ್ತಾನ ತೆರಳದೇ ಇರುವುದರಿಂದ ಆ ದೇಶಕ್ಕೆ ಮತ್ತಷ್ಟು ದೊಡ್ಡ ನಷ್ಟವಾಗಲಿದೆ” ಎಂದು ಮಿರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಪಾಕಿಸ್ತಾನ V/s ನ್ಯೂಜಿಲೆಂಡ್‌ | ಬ್ಯಾಟರ್​ಗಳ ಅಬ್ಬರ; ವಿಶ್ವ ದಾಖಲೆ ಛಿದ್ರಗೊಳಿಸಿದ ಪಾಕ್‌ ತಂಡ

ಚಾಂಪಿಯನ್ಸ್ ಟ್ರೋಫಿಗಿಂತ ಮುನ್ನ ಪಾಕಿಸ್ತಾನಕ್ಕೆ ಭಾರತ ಪ್ರವಾಸ ಕೈಗೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಉಭಯ ದೇಶಗಳ ಪಂದ್ಯದ ಸ್ಥಳದ ಬಗ್ಗೆ ಭಾರಿ ಗೊಂದಲ ಮೂಡಿತ್ತು.ಹಲವು ತಿಂಗಳ ವಿಳಂಬದ ಬಳಿಕ, ಪಂದ್ಯ ನಡೆಯುವ ಸ್ಥಳವನ್ನು ಐಸಿಸಿ ಘೋಷಿಸಿತ್ತು. ಪಾಕಿಸ್ತಾನದ ಎಲ್ಲೆಡೆ ಮತ್ತು ತಟಸ್ಥ ಸ್ಥಳಗಳಲ್ಲಿ ಪಂದ್ಯ ನಡೆಯಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿತ್ತು.

ಅಂದರೆ ಭಾರತ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಅಡಲು ಅವಕಾಶ ಮಾಡಿಕೊಟ್ಟಿತ್ತು.2027ರ ವರೆಗೂ ಉಭಯ ದೇಶಗಳ ನಡುವಿನ ಪಂದ್ಯಗಳು ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಐಸಿಸಿ ಅಧ್ಯಕ್ಷ ಜಯ್ ಶಾ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X