IND vs ENG T20 | ಸರಣಿ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಭಾರತದ ವನಿತೆಯರು

Date:

Advertisements

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಭರ್ಜರಿ ಜಯ ಸಾಧಿಸಿ 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ವಿಶೇಷವೆಂದರೆ ಇಂಗ್ಲೆಂಡ್ ವಿರುದ್ಧದ ಟಿಂ ಇಂಡಿಯಾ ಮಹಿಳಾ ತಂಡದ ಮೊದಲ ಟಿ20 ಸರಣಿ ಗೆಲುವು ಇದಾಗಿದ್ದು, ಐತಿಹಾಸಿಕ ಸಾಧನೆ ಮಾಡುವಲ್ಲಿ ವನಿತೆಯರ ತಂಡ ಯಶಸ್ವಿಯಾಗಿದೆ.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಉತ್ತಮ ಆರಂಭ ಪಡೆದಿರಲಿಲ್ಲ.

ಸೋಫಿಯಾ ಡಂಕ್ಲಿ 22 ರನ್ ಬಾರಿಸಿದರೆ, ವ್ಯಾಟ್ ಹಾಡ್ಜ್ 5 ರನ್​ಗಳಿಸಿ ನಿರ್ಗಮಿಸಿದ್ದರು. ಆ ಬಳಿಕ ಬಂದ ಅಲೀಸ್ ಕಾಪ್ಸಿ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕಿ ಬ್ಯೂಮಾಂಟ್ 20 ರನ್ ಗಳ ಕೊಡುಗೆ ನೀಡಿದರೆ, ಸ್ಕೋಲ್​​ಫೀಲ್ಡ್ 16 ರನ್ ಗಳಿಸಿದರು.

Advertisements

ಇದನ್ನು ಓದಿದ್ದೀರಾ? ನಾಯಕನಾಗಿ ಅಭೂತಪೂರ್ವ ದಾಖಲೆ ನಿರ್ಮಿಸಿದ ಶುಭ್​ಮನ್ ಗಿಲ್

ಈ ಮೂಲಕ ಇಂಗ್ಲೆಂಡ್ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಉತ್ತಮ ದಾಳಿ ಸಂಘಟಿಸಿದ ರಾಧಾ ಯಾದವ್ 4 ಓವರ್‌ಗಳಲ್ಲಿ 15 ರನ್ ನೀಡಿ 2 ವಿಕೆಟ್ ಪಡೆದರೆ, ಶ್ರೀ ಚರಣಿ 4 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆದರು.

ಇನ್ನು 127 ರನ್ ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಈ ಜೋಡಿ ಪವರ್ ಪ್ಲೇನಲ್ಲಿ 53 ರನ್ ಕಲೆಹಾಕಿದರು.

ಇದರ ಬೆನ್ನಲ್ಲೇ 19 ಎಸೆತಗಳಲ್ಲಿ 6 ಬೌಂಡರಿಗಳೊಂದಿಗೆ 31 ರನ್ ಬಾರಿಸಿದ್ದ ಶಫಾಲಿ ವರ್ಮಾ ಔಟಾದರು. ಈ ಹಂತದಲ್ಲಿ ಆಗಮಿಸಿದ ಜೆಮಿಮಾ ರೊಡ್ರಿಗಸ್ 24 ರನ್ ಗಳಿಸಿದರು. ಮತ್ತೊಂದೆಡೆ ಸ್ಮೃತಿ ಮಂಧಾನ 31 ರನ್ ಗಳಿಸಿ ನಿರ್ಗಮಿಸಿದರು. ಈ ವೇಳೆ ಕಣಕ್ಕಿಳಿದ ನಾಯಕಿ ಹರ್ಮನ್ ಪ್ರೀತ್ ಕೌರ್ 26 ರನ್ ಗಳನ್ನು ಕಲೆಹಾಕಿದರು.

ಈ ಮೂಲಕ ಟೀಮ್ ಇಂಡಿಯಾ 17 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 127 ರನ್ ಬಾರಿಸಿ 6 ವಿಕೆಟ್‌ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X