ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

Date:

Advertisements

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅತಿಥೇಯ ತಂಡ ಭಾರತದ ಬೌಲರ್‌ಗಳ ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್‌ಗಳನ್ನು ಮಾತ್ರ ಗಳಿಸಿತು.

ಟೀಂ ಇಂಡಿಯಾ ಪರ ವಾಷಿಂಗ್ಟನ್‌ ಸುಂದರ್‌ 15/3, ಆವೇಶ್ ಖಾನ್ 39/2 ಹಾಗೂ ಖಲೀಲ್‌ ಅಹಮದ್‌ 15/1 ವಿಕೆಟ್‌ ಪಡೆದು ಜಿಂಬಾಬ್ವೆ ಗೆಲುವಿಗೆ ಅಡ್ಡಿಯಾದರು.

ಅತಿಥೇಯ ತಂಡದ ಪರ ಡಿಯೋನ್‌ ಮೈಯರ್ಸ್ ಅಜೇಯ 65 ರನ್‌ ಗಳಿಸುವ ಮೂಲಕ ಕೊನೆಯವರೆಗೂ ಹೋರಾಟ ನಡೆಸಿದರೂ ತಂಡದ ಉಳಿದ ಆಟಗಾರರು ಇವರಿಗೆ ಬೆಂಬಲ ನೀಡಲಿಲ್ಲ. ವಿಕೆಟ್ ಕೀಪರ್‌ ಕ್ಲಿವ್ ಮಡಂದೆ 37 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು 20ರ ಗಡಿ ದಾಟಲಿಲ್ಲ.

Advertisements

ಹರಾರೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಆಯ್ದುಕೊಂಡು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್‌ಗಳ ಉತ್ತಮ ಮೊತ್ತ ಕಲೆಹಾಕಿತು.

ಈ ಸುದ್ದಿ ಓದಿದ್ದೀರಾ? ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಮೊದಲ ವಿಕೆಟ್‌ ಜೊತೆಯಾಟದಲ್ಲಿ ನಾಯಕ ಶುಭಮನ್‌ ಗಿಲ್ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 8.1 ಓವರ್‌ಗಳಲ್ಲಿ 67 ರನ್‌ ಪೇರಿಸಿದರು. 27 ಚೆಂಡುಗಳಲ್ಲಿ 4 ಬೌಂಡರಿ, 2 ಸಿಕ್ಸರ್‌ಗಳೊಂದಿಗೆ 36 ರನ್‌ ಗಳಿಸಿದ ಜೈಸ್ವಾಲ್‌, ಸಿಕಂದರ್‌ ರಜಾ ಬೌಲಿಂಗ್‌ನಲ್ಲಿ ಔಟಾದರು.

ನಂತರ ಇನಿಂಗ್ಸ್ ಮುಂದುವರೆಸಿದ ಗಿಲ್‌ಗೆ ಎರಡನೇ ಪಂದ್ಯದಲ್ಲಿ ಶತಕ ಸ್ಫೋಟಿಸಿದ್ದ ಯುವ ಆಟಗಾರ ಅಭಿಷೇಕ್‌ ಶರ್ಮಾ(10) ಹೆಚ್ಚು ಹೊತ್ತು ಜೊತೆ ನೀಡಲಿಲ್ಲ. ರುತುರಾಜ್‌ ಗಾಯಕ್ವಾಡ್‌ ಮೂರನೇ ಪಂದ್ಯದಲ್ಲಿಯೂ ಉತ್ತಮ ಆಟವಾಡಿದರು. 28 ಎಸೆತಗಳಲ್ಲಿ 3 ಸಿಕ್ಸರ್‌, 4 ಬೌಂಡರಿಗಳೊಂದಿಗೆ 49 ಬಾರಿಸಿದ ರುತುರಾಜ್‌ 1 ರನ್‌ನಿಂದ ಅರ್ಧ ಶತಕ ವಂಚಿತರಾದರು. ಕೊನೆಯ ಓವರ್‌ಗಳಲ್ಲಿ ಬಂದ ಸಂಜು ಸ್ಯಾಮ್ಸನ್‌ 12 ರನ್‌ ಗಳಿಸಿ ಅಜೇಯರಾಗುಳಿದರು.

ನಾಲ್ಕನೇ ಟಿ20 ಪಂದ್ಯ ಜುಲೈ 13 ರಂದು ನಡೆಯಲಿದ್ದು, ಅತಿಥೇಯ ಜಿಂಬಾಬ್ವೆ ತಂಡಕ್ಕೆ ಮಾಡು ಇಲ್ಲವೆ ಮಡಿ ಪಂದ್ಯವಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X