ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತದ ಅಂಡರ್‌ 19 ತಂಡ ಪ್ರಕಟ; ವೈಭವ್ ಸೂರ್ಯವಂಶಿ, ಆಯುಷ್‌ಗೆ ಸ್ಥಾನ

Date:

Advertisements

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಂಡರ್‌ 19 ಕ್ರಿಕೆಟ್ ಸರಣಿಗಾಗಿ ಪ್ರವಾಸಿ ಭಾರತ ತಂಡವನ್ನು ಬಿಸಿಸಿಐ ಇಂದು (ಗುರುವಾರ) ಪ್ರಕಟಿಸಿದೆ.

ಭಾರತ ತಂಡವನ್ನು 17 ವರ್ಷದ ಆಯುಷ್ ಮಾತ್ರೆ ಮುನ್ನಡೆಸಲಿದ್ದು, 14 ವರ್ಷದ ವೈಭವ್ ಸೂರ್ಯವಂಶಿ ಸಹ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯುಷ್ ಮತ್ತು ರಾಜಸ್ಥಾನ ರಾಯಲ್ಸ್ ತಂಡವನ್ನು ವೈಭವ್ ಪ್ರತಿನಿಧಿಸುತ್ತಿದ್ದಾರೆ.ಐಪಿಎಲ್‌ನಲ್ಲಿ ಈ ಉದಯೋನ್ಮುಖ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ.

Advertisements

ಇಂಗ್ಲೆಂಡ್ ವಿರುದ್ಧದ ಅಂಡರ್ 19 ಸರಣಿಯು ಜೂನ್ 24ರಿಂದ ಆರಂಭವಾಗಲಿದೆ. 50 ಓವರ್‌ಗಳ ಅಭ್ಯಾಸ ಪಂದ್ಯದ ಬಳಿಕ ಐದು ಪಂದ್ಯಗಳ ಯೂತ್ ಏಕದಿನ ಸರಣಿಯು ನಡೆಯಲಿದೆ. ತದನಂತರ ನಾಲ್ಕು ದಿನಗಳ ಎರಡು ಪಂದ್ಯಗಳು ನಡೆಯಲಿವೆ.

ಇದನ್ನು ಓದಿದ್ದೀರಾ? 90.23 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

14 ವರ್ಷದ ಸೂರ್ಯವಂಶಿ, ಐಪಿಎಲ್ ನಲ್ಲಿ ಶತಕ ಗಳಿಸಿದ (35 ಎಸೆತ) ಅತಿ ಕಿರಿಯ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಹಾಗೆಯೇ ಐಪಿಎಲ್‌ ನಲ್ಲಿ ವೇಗದ ಶತಕ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿದ್ದಾರೆ. ಕ್ರಿಸ್ ಗೇಲ್‌ ಬಳಿಕ ಐಪಿಎಲ್‌ನಲ್ಲಿ ವೇಗದ ಶತಕ ಗಳಿಸಿದ 2ನೇ ಆಟಗಾರರಾಗಿದ್ದಾರೆ. ಸಿಎಸ್‌ಕೆ ಪರ ಆಡುತ್ತಿರುವ ಆಯುಷ್ ಮಾತ್ರೆ ಕೂಡ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ.

ಕಳೆದ ವರ್ಷ ಆಸ್ಟ್ರೇಲಿಯಾ ಅಂಡರ್ 19 ತಂಡದ ವಿರುದ್ಧದ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಕೇರಳದ ಬೆಗ್ ಸ್ಪಿನ್ನ‌ರ್ ಮೊಹಮ್ಮದ್ ಇನಾನ್ ಸಹ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ ಪ್ರವಾಸ ಜೂನ್‌ 24 ರಂದು ಆರಂಭವಾಗಿ ಜುಲೈ ಅಂತ್ಯದವರೆಗೂ ನಡೆಯಲಿದೆ.

ಭಾರತ ಅಂಡರ್-19 ತಂಡ:

ಆಯುಷ್ ಮಾತ್ರೆ (ನಾಯಕ), ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರ, ಮೌಲ್ಯರಾಜ್‌ಸಿನ್ಹ್ ಚಾವ್ಡಾ, ರಾಹುಲ್ ಕುಮಾರ್, ಅಭಿಜ್ಞಾನ್ ಕುಂಡು (ಉಪನಾಯಕ ಮತ್ತು ವಿಕೆಟ್ ಕೀಪರ್), ಹರ್ವಾಂಶ್ ಸಿಂಗ್ (ವಿಕೆಟ್ ಕೀಪರ್), ಆರ್.ಎಸ್. ಅಂಬರೀಶ್, ಕನಿಷ್ಕ್ ಚೌಹಾಣ್, ಖಿಲಾನ್ ಪಟೇಲ್, ಹೆನಿಲ್ ಪಟೇಲ್, ಯುಧಾಜಿತ್ ಗುಹಾ, ಪ್ರಣವ್ ರಾಘವೇಂದ್ರ, ಮೊಹಮ್ಮದ್ ಇಹಾನ್‌, ಆದಿತ್ಯ ರಾಣಾ, ಅನ್ಮೋಲ್‌ಜೀತ್ ಸಿಂಗ್

ಮೀಸಲು ಆಟಗಾರರು: ನಮನ್ ಪುಷ್ಕಕ್, ಡಿ. ದಿಪೇಶ್, ವೇದಾಂತ್ ತ್ರಿವೇದಿ, ವಿಕಲ್ಪ್‌ ತಿವಾರಿ, ಅಲಂಕೃತ್ ರಾಪೊಲ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X