ಫುಟ್‌ಬಾಲ್‌ | ಛೆಟ್ರಿ ಗೋಲಿನ ಬಲದಲ್ಲಿ ಇಂಟರ್‌ಕಾಂಟಿನೆಂಟಲ್‌ ಕಪ್‌ ಗೆದ್ದ ಭಾರತ

Date:

Advertisements

ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯನ್ಜುವಾಲಾ ಚಾಂಗ್ಟೆ ಗಳಿಸಿದ  ಗೋಲುಗಳ ನೆರವಿನಿಂದ ಭಾರತ ತಂಡ, ಇಂಟರ್‌ಕಾಂಟಿನೆಂಟಲ್ ಕಪ್ 2023 ಫುಟ್‌ಬಾಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.  

ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರೆದುರು ನಡೆದ ಫೈನಲ್‌ ಹೋರಾಟದಲ್ಲಿ ಭಾರತ, ಇಗೋರ್‌ ಸ್ಟಿಮಾಕ್‌ ಕೋಚ್‌ ಆಗಿರುವ ಲೆಬನಾನ್‌ ತಂಡವನ್ನು 2-0 ಗೋಲುಗಳ ಅಂತರದಿಂದ ಮಣಿಸಿ ಚಾಂಪಿಯನ್‌ ಆಯಿತು. ಈ ಗೆಲುವಿನೊಂದಿಗೆ ಫಿಫಾ ರ‍್ಯಾಂಕಿಂಗ್‌ನಲ್ಲಿ ಭಾರತ ಮೊದಲ ಬಾರಿಗೆ 98ನೇ ಸ್ಥಾನಕ್ಕೇರಿದೆ.

ಸಮಬಲದ ಹೋರಾಟಕ್ಕೆ ಸಾಕ್ಷಿಯಾದ ಮೊದಲಾರ್ಧ ಗೋಲು ರಹಿತವಾಗಿ ಕೊನೆಗೊಂಡಿತ್ತು. ದ್ವಿತಿಯಾರ್ಧದ ಮೊದಲ ನಿಮಿಷದಲ್ಲೇ (46) ನಾಯಕ ಸುನಿಲ್ ಛೆಟ್ರಿ ಗೋಲಿನ ಮೂಲಕ ಭಾರತ ಮುನ್ನಡೆ ಸಾಧಿಸಿತ್ತು. ಇದಾದ ಬಳಿಕ ಪಂದ್ಯದಲ್ಲಿ ಪೂರ್ಣ ಹಿಡಿತ ಸಾಧಿಸಿದ ಭಾರತ, 65ನೇ ನಿಮಿಷದಲ್ಲಿ ಲಾಲಿಯನ್ಜುವಾಲಾ ಚಾಂಗ್ಟೆ ಗೋಲಿನ ಮೂಲಕ ಮುನ್ನಡೆಯನ್ನು 2-0ಗೆ ಏರಿಸಿತು.

Advertisements

80ನೇ ನಿಮಿಷದಲ್ಲಿ ಲೆಬನಾನ್‌ ತಂಡದ ಪಾಲಿಗೆ ಗೋಲು ಗಳಿಸುವ ಉತ್ತಮ ಅವಕಾಶ ನಿರ್ಮಾಣವಾಗಿತ್ತು. ಆದರೆ ಲೆಫ್ಟ್‌ ವಿಂಗ್‌ನಿಂದ ದೊರೆತ ಕ್ರಾಸ್‌ಅನ್ನು ಗೋಲಾಗಿ ಪರಿವರ್ತಿಸುವಲ್ಲಿ ನಾಯಕ ಹಸನ್‌ ಮಾಟೌಕ್‌ ವಿಫಲವಾದರು.

ಯುವ  ಆಟಗಾರರನ್ನು ಒಳಗೊಂಡ ಲೆಬನಾನ್‌ ಮತ್ತು ಭಾರತ ತಂಡಗಳ ನಡುವೆ ಟೂರ್ನಿಯ ಗುಂಪು ಹಂತದಲ್ಲಿ ನಡೆದಿದ್ದ ಪಂದ್ಯ, ಗೋಲು ರಹಿತ ಡ್ರಾದಲ್ಲಿ ಅಂತ್ಯಗೊಂಡಿತ್ತು.

ಭಾರತದ ಸಾರ್ವಕಾಲಿಕ ಗರಿಷ್ಠ ಗೋಲು ಸ್ಕೋರರ್‌  ಆಗಿರುವ ಸುನೀಲ್‌ ಛೇಟ್ರಿ, ಭಾನುವಾರ ಲೆಬನಾನ್‌ ವಿರುದ್ಧ 87ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿ ಮಿಂಚಿದರು.

2021ರಲ್ಲಿ ಎಸ್‌ಎಎಫ್‌ಎಫ್‌ (ಸ್ಯಾಫ್) ಚಾಂಪಿಯನ್‌ಶಿಪ್ ಗೆಲುವಿನ ಬಳಿಕ ಭಾರತೀಯ ಫುಟ್‌ಬಾಲ್‌ ತಂಡ ಗೆಲ್ಲುತ್ತಿರುವ ಮೊದಲ ಅಂತಾರಾಷ್ಟ್ರೀಯ ಟ್ರೋಫಿ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X