IPL | ಹೈದ್ರಾಬಾದ್‌ ತಂಡದಿಂದ ಹೊರಬಿದ್ದ ಬಳಿಕ ಭಾವನಾತ್ಮಕ ಪತ್ರ ಬರೆದ ಭುವನೇಶ್ವರ್‌

Date:

Advertisements

ವೇಗಿ ಬೌಲರ್‌ ಭುವನೇಶ್ವರ್ ಕುಮಾರ್ ಅವರು ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಸನ್ ರೈಸರ್ಸ್‌ ಹೈದ್ರಾಬಾದ್ (ಎಸ್‌ಆರ್‌ಎಚ್‌) ತಂಡವನ್ನು ತೊರೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಸೇರಿಕೊಂಡಿದ್ದಾರೆ. 11 ವರ್ಷಗಳ ಕಾಲ ಎಸ್‌ಆರ್‌ಎಚ್‌ ತಂಡದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅವರು ತಂಡ ತೊರೆದ ಬಳಿಕ ಎಸ್‌ಆರ್‌ಎಚ್‌ಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

2011ರಲ್ಲಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ಭುವನೇಶ್ವರ್ ಈವರೆಗೆ ಬರೋಬ್ಬರಿ 176 ಪಂದ್ಯಗಳಲ್ಲಿ ಬೌಲ್ ಮಾಡಿದ್ದಾರೆ. 181 ವಿಕೆಟ್‌ಗಳನ್ನು ಪಡೆದಿದ್ದಾರೆ. 2024ರ ಐಪಿಎಲ್‌ನಲ್ಲಿ ಎಸ್‌ಆರ್‌ಎಚ್‌ ತಂಡದಲ್ಲಿ ಆಡಿದ್ದ ಅವರು 16 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದರು.

ಆರ್‌ಸಿಬಿ ಸೇರಿದ ಬಳಿಕ ಭಾವನಾತ್ಮಕ ಪತ್ರ ಬರೆದಿದ್ದು, “SRH ಜೊತೆಗಿನ 11 ವರ್ಷಗಳ ನಂಬಲಾಗದ ಪಯಣದ ನಂತರ, ನಾನು ಈ ತಂಡಕ್ಕೆ ವಿದಾಯ ಹೇಳುತ್ತಿದ್ದೇನೆ. ಹಲವಾರು ಮರೆಯಲಾಗದ ಮತ್ತು ಅನುಸರಿಸಬೇಕಾದ ನೆನಪುಗಳನ್ನು ನನ್ನಲ್ಲಿವೆ. ಅದ್ಭುತ ವಿಜಯಗಳು, ಟ್ರೋಫಿ ಗೆಲುವು, ಎರಡು ಬಾರಿ ನೇರಳೆ ಕ್ಯಾಪ್ ಪಡೆದದ್ದು, ಇನ್ನೂ ಹಲವಾರು ನೆನಪುಗಳಿವೆ. ಎಲ್ಲಕ್ಕಿಂತ ಮಿಗಿಲಾದ ವಿಷಯವೆಂದರೆ ಅಭಿಮಾನಿಗಳ ಪ್ರೀತಿ. ನಾನು ಇಂದು ನನ್ನೊಂದಿಗೆ ಈ ಪ್ರೀತಿ ಮತ್ತು ಬೆಂಬಲವನ್ನು ಹೊತ್ತೊಯ್ಯುತ್ತಿದ್ದೇನೆ. ನಿಮ್ಮ ಬೆಂಬಲ ನಿರಂತರ ಮತ್ತು ಶಾಶ್ವತವಾಗಿರಲಿ” ಎಂದು ಹೇಳಿದ್ದಾರೆ.

Advertisements

ಇತ್ತೀಚೆಗೆ ನಡೆದ ಐಪಿಎಲ್‌ ಬಿಡ್‌ನಲ್ಲಿ ಭುವನೇಶ್ವರ್ ಕುಮಾರ್ ಅವರ ಹರಾಜು ಪ್ರಕ್ರಿಯೆ 2 ಕೋಟಿ ರೂ.ಗಳೊಂದಿಗೆ ಆರಂಭವಾಯಿತು. ಎಲ್‌ಎಸ್‌ಜಿ ಮತ್ತು ಮುಂಬೈ ಪ್ರಾಂಚೈಸಿಗಳು ಬಿಡ್ಡಿಂಗ್‌ಗಾಗಿ ಹಣಾಹಣಿ ನಡೆಸಿದವು. ಬಿಡ್‌ಅನ್ನು ಎಲ್‌ಎಸ್‌ಜಿ 10 ಕೋಟಿ ರೂ.ಗೆ ಹೆಚ್ಚಿಸಿತು. ಬಳಿಕ, ಮುಂಬೈ ಪ್ರಾಂಚೈಸಿ ಹಿಂದೆ ಸರಿಯಿತು. ಬಳಿಕ, ಆರ್‌ಸಿಬಿ 10.75 ಕೋಟಿ ರೂ.ಗಳ ಬಿಡ್‌ ಮಾಡಿ, ಭುವನೇಶ್ವರ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X