ಐಪಿಎಲ್ 2023 | ಮುಂಬೈ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು; ಪ್ಲೇ ಆಫ್ ಹಾದಿ ಕಠಿಣ

Date:

Advertisements

ವಾಂಖೆಡೆ ಮೈದಾನದಲ್ಲಿ ಸೂರ್ಯಕುಮಾರ್ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ಪಡೆ ಹೀನಾಯವಾಗಿ ಸೋಲು ಕಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿಟ್ಟಿದ್ದ 200 ರನ್‌ಗಳ ಗುರಿಯನ್ನು ರೋಹಿತ್ ಪಡೆ 4 ವಿಕೆಟ್ ನಷ್ಟದಲ್ಲಿ 16.3 ಓವರ್‌ಗಳಲ್ಲೇ ಚೇಸ್ ಮಾಡುವ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಈ ಗೆಲುವಿನೊಂದಿಗೆ ಐಪಿಎಲ್ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಮುಂಬೈ 3ನೇ ಸ್ಥಾನಕ್ಕೇರಿತು. ಮತ್ತೊಂದೆಡೆ 11ನೇ ಪಂದ್ಯದಲ್ಲಿ 6ನೇ ಸೋಲು ಕಂಡ ಆರ್‌ಸಿಬಿ, 7ನೇ ಸ್ಥಾನಕ್ಕೆ ಕುಸಿದಿದೆ.

Advertisements

ಪ್ಲೇ ಆಫ್ ಹಂತಕ್ಕೇರಲು ಇನ್ನುಳಿದ 3 ಪಂದ್ಯಗಳನ್ನು ಬೆಂಗಳೂರು ತಂಡ ಬೃಹತ್ ಅಂತರದಿಂದ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ.

ಚೇಸಿಂಗ್ ವೇಳೆ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲೇ ಉತ್ತಮ ರನ್ ಗತಿ ಕಾಯ್ದುಕೊಂಡಿತ್ತು. 4.4 ಓವರ್‌ಗಳಲ್ಲೇ ತಂಡದ ಮೊತ್ತ 50 ದಾಟಿತ್ತು.

21 ಎಸೆತಗಳಲ್ಲಿ ತಲಾ 4 ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ ಇಶಾನ್ ಕಿಶನ್ 42 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು.

ಅಬ್ಬರಿಸಿದ ಸೂರ್ಯಕುಮಾರ್!

ಮೂರನೇ ಕ್ರಮಾಂಕದಲ್ಲಿ ಬಂದ ಸೂರ್ಯಕುಮಾರ್ ಯಾದವ್, ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದರು. ಆದರೆ ಆ ಬಳಿಕ ಅಬ್ಬರಿಸಿದ ಸೂರ್ಯ, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿದರು.

35 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್, 6 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 83 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ತಾನೆದುರಿಸಿದ ಮೊದಲ 14 ಎಸೆತಗಳಲ್ಲಿ 18 ರನ್‌ಗಳಿಸಿದ್ದ ಯಾದವ್ ನಂತರದ 21 ಎಸೆತಗಳಲ್ಲಿ 65 ರನ್ ಚಚ್ಚಿದರು. ಅಂತಿಮವಾಗಿ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಆರ್‌ಸಿಬಿ 199/6

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ [ 65 ರನ್ ] ಮತ್ತು ಗ್ಲೆನ್ ಮ್ಯಾಕ್ಸ್’ವೆಲ್ [ 68 ರನ್] ಗಳಿಸಿದ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 199 ರನ್‌ಗಳಿಸಿತ್ತು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X