ಐಪಿಎಲ್ 2023 | ಮುಂಬೈ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು; ಪ್ಲೇ ಆಫ್ ಹಾದಿ ಕಠಿಣ

Date:

ವಾಂಖೆಡೆ ಮೈದಾನದಲ್ಲಿ ಸೂರ್ಯಕುಮಾರ್ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ಪಡೆ ಹೀನಾಯವಾಗಿ ಸೋಲು ಕಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿಟ್ಟಿದ್ದ 200 ರನ್‌ಗಳ ಗುರಿಯನ್ನು ರೋಹಿತ್ ಪಡೆ 4 ವಿಕೆಟ್ ನಷ್ಟದಲ್ಲಿ 16.3 ಓವರ್‌ಗಳಲ್ಲೇ ಚೇಸ್ ಮಾಡುವ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಈ ಗೆಲುವಿನೊಂದಿಗೆ ಐಪಿಎಲ್ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಮುಂಬೈ 3ನೇ ಸ್ಥಾನಕ್ಕೇರಿತು. ಮತ್ತೊಂದೆಡೆ 11ನೇ ಪಂದ್ಯದಲ್ಲಿ 6ನೇ ಸೋಲು ಕಂಡ ಆರ್‌ಸಿಬಿ, 7ನೇ ಸ್ಥಾನಕ್ಕೆ ಕುಸಿದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ಲೇ ಆಫ್ ಹಂತಕ್ಕೇರಲು ಇನ್ನುಳಿದ 3 ಪಂದ್ಯಗಳನ್ನು ಬೆಂಗಳೂರು ತಂಡ ಬೃಹತ್ ಅಂತರದಿಂದ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ.

ಚೇಸಿಂಗ್ ವೇಳೆ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲೇ ಉತ್ತಮ ರನ್ ಗತಿ ಕಾಯ್ದುಕೊಂಡಿತ್ತು. 4.4 ಓವರ್‌ಗಳಲ್ಲೇ ತಂಡದ ಮೊತ್ತ 50 ದಾಟಿತ್ತು.

21 ಎಸೆತಗಳಲ್ಲಿ ತಲಾ 4 ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ ಇಶಾನ್ ಕಿಶನ್ 42 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು.

ಅಬ್ಬರಿಸಿದ ಸೂರ್ಯಕುಮಾರ್!

ಮೂರನೇ ಕ್ರಮಾಂಕದಲ್ಲಿ ಬಂದ ಸೂರ್ಯಕುಮಾರ್ ಯಾದವ್, ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದರು. ಆದರೆ ಆ ಬಳಿಕ ಅಬ್ಬರಿಸಿದ ಸೂರ್ಯ, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿದರು.

35 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್, 6 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 83 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ತಾನೆದುರಿಸಿದ ಮೊದಲ 14 ಎಸೆತಗಳಲ್ಲಿ 18 ರನ್‌ಗಳಿಸಿದ್ದ ಯಾದವ್ ನಂತರದ 21 ಎಸೆತಗಳಲ್ಲಿ 65 ರನ್ ಚಚ್ಚಿದರು. ಅಂತಿಮವಾಗಿ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಆರ್‌ಸಿಬಿ 199/6

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ [ 65 ರನ್ ] ಮತ್ತು ಗ್ಲೆನ್ ಮ್ಯಾಕ್ಸ್’ವೆಲ್ [ 68 ರನ್] ಗಳಿಸಿದ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 199 ರನ್‌ಗಳಿಸಿತ್ತು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...