ಐಪಿಎಲ್‌ 2023 | ರಾಜಸ್ಥಾನ vs ಡೆಲ್ಲಿ ಕ್ಯಾಪಿಟಲ್ಸ್‌ ; ಟಾಸ್‌, ಆಡುವ ಹನ್ನೊಂದರ ಬಳಗದ ವಿವರ

Date:

ಐಪಿಎಲ್‌ 16ನೇ ಆವೃತ್ತಿಯ ಶನಿವಾರದ ಮೊದಲ ಪಂದ್ಯ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಸಂಜು ಸ್ಯಾಮ್ಸನ್‌ ಬಳಗವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಸತತ 2 ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್‌, ಮೂರನೇ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ ರಾಯಲ್ಸ್‌ ವಿರುದ್ಧ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಳ್ಳಬೇಕದಾದ ಒತ್ತಡಕ್ಕೆ ಸಿಲುಕಿದೆ.

ರಾಜಸ್ಥಾನ ತಂಡದ ತವರು ಮೈದಾನ ಗುವಾಹಟಿಯಲ್ಲಿ ಪಂದ್ಯ ನಡೆಯಲಿದ್ದು, ಆತಿಥೇಯ ತಂಡ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಟೂರ್ನಿಯಲ್ಲಿ ಹೈದರಾಬಾದ್‌ ತಂಡದ ವಿರುದ್ಧ ಭರ್ಜರಿ ಗೆಲುವಿನ ಆರಂಭ ಪಡೆದಿದ್ದ ರಾಯಲ್‌, ಎರಡನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಹೋರಾಡಿ ಶರಣಾಗಿತ್ತು.

ಮೊದಲಿನ ಎರಡು ಪಂದ್ಯಗಳಲ್ಲಿ ಡೇವಿಡ್‌ ವಾರ್ನರ್‌ ತಂಡಕ್ಕೆ ಬ್ಯಾಟಿಂಗ್‌ ಕೈಕೊಟ್ಟಿತ್ತು. ನಾಯಕನನ್ನು ಹೊರತುಪಡಿಸಿ ಉಳಿದ ಬ್ಯಾಟರ್‌ಗಳಿಂದ ಪಂದ್ಯವನ್ನು ಗೆಲ್ಲಿಸುವ ಪ್ರದರ್ಶನ ಕಂಡುಬರುತ್ತಿಲ್ಲ. ಮತ್ತೊಂದೆಡೆ ಜಾಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌ ಭರ್ಜರಿ ಫಾರ್ಮ್‌ನಲ್ಲಿರುವುದು ರಾಯಲ್ಸ್‌ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ‘ರೈಸ್’ ಆಗದ ಹೈದರಾಬಾದ್, ರಾಹುಲ್…

ಉಭಯ ತಂಡಗಳ ಆಡುವ ಬಳಗ

ದೆಹಲಿ ಕ್ಯಾಪಿಟಲ್ಸ್; ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್‌ ಕೀಪರ್), ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.

ರಾಜಸ್ಥಾನ್ ರಾಯಲ್ಸ್;‌ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ...

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...