ಐಪಿಎಲ್‌ 2023 | ಚೆನ್ನೈ vs ಪಂಜಾಬ್;‌ ವಿಶಿಷ್ಠ ದಾಖಲೆ ಬರೆದ ಎಂಎಸ್‌ ಧೋನಿ

Date:

Advertisements
  • 20ನೇ ಓವರ್‌ನಲ್ಲಿ 1000 ಸಾವಿರ ರನ್‌ಗಳಿಸಿದ ಎಂಎಸ್‌ ಧೋನಿ
  • 27ನೇ ಬಾರಿ 200 ಪ್ಲಸ್‌ ಮೊತ್ತ ದಾಖಲಿಸಿದ ಚೆನ್ನೈ ತಂಡ

ಐಪಿಎಲ್‌ 16ನೇ ಆವೃತ್ತಿಯ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ತಂಡದ ನಾಯಕ ಎಂಎಸ್‌ ಧೋನಿ ಮತ್ತೊಂದು ವಿಶಿಷ್ಠ ದಾಖಲೆ ಬರೆದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅಂತಿಮ 20ನೇ ಓವರ್‌ನಲ್ಲಿ ಒಟ್ಟು 1000 ಸಾವಿರ ರನ್‌ಗಳಿಸಿದ ಎರಡನೇ ಬ್ಯಾಟರ್‌ ಎಂಬ ದಾಖಲೆ ಭಾನುವಾರ ಧೋನಿ ಪಾಲಾಗಿದೆ. ವೆಸ್ಟ್ ಇಂಡೀಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಲ್‌ರೌಂಡರ್‌ ಆಗಿದ್ದ ಕೀರಾನ್ ಪೊಲಾರ್ಡ್ ಈ ಸಾಧನೆಗೈದ ಮೊದಲ ಬ್ಯಾಟರ್‌ ಆಗಿದ್ದಾರೆ.

ಪಂಜಾಬ್‌ ಕಿಂಗ್ಸ್‌ ವಿರುದ್ಧದ ಭಾನುವಾರದ ಪಂದ್ಯದಲ್ಲಿ 20ನೇ ಓವರ್‌ನ ಮೊದಲ ಎಸೆತದಲ್ಲಿ ರವೀಂದ್ರ ಜಡೇಜಾ ವಿಕೆಟ್‌ ಪತನದ ಬಳಿಕ 41ರ ಹರೆಯದ ಧೋನಿ ಕ್ರೀಸ್‌ಗೆ ಆಗಮಿಸಿದ್ದರು. ಮೊದಲ ಎಸೆತದಲ್ಲಿ ರನ್‌ ಗಳಿಸಲು ವಿಫಲರಾದ ಧೋನಿ ನಂತರದ ಎಸೆತದಲ್ಲಿ ಒಂಟಿ ರನ್‌ ಪಡೆದರು. ಬಳಿಕ ಅಂತಿಮ ಎರಡು ಎಸೆತಗಳು ಇರುವಾಗ ಸ್ಟ್ರೈಕ್ ಪಡೆದ ಎಂಎಸ್‌ಡಿ, ಸ್ಯಾಮ್‌ ಕರನ್‌ ಓವರ್‌ನ ಎರಡೂ ಎಸೆತಗಳನ್ನೂ ಭರ್ಜರಿ ಸಿಕ್ಸರ್‌ಗೆ ಅಟ್ಟಿದರು.‌

Advertisements

ಈ ಮೂಲಕ ತಂಡದ ಮೊತ್ತವನ್ನು200ಕ್ಕೆ ತಲುಪಿಸಿದರು. ಈ ವೇಳೆ ಹಳದಿ ಹೊಳೆಯಂತೆ ಚೆಪಾಕ್‌ ಮೈದಾನಕ್ಕೆ ಹರಿದು ಬಂದಿದ್ದ ಚೆನ್ನೈ ಅಭಿಮಾನಿಗಳು ಗ್ಯಾಲರಿಯಲ್ಲಿ ಸಂಭ್ರಮದಿಂದ ಕುಣಿದಾಡಿದರು.

ಈ ಸುದ್ದಿ ಓದಿದ್ದೀರಾ?: ಅಥ್ಲೀಟ್‌ಗಳು ಬೀದಿಗಿಳಿದಿರುವುದು ನೋವು ತಂದಿದೆ; ಪ್ರತಿಭಟನಾನಿರತರಿಗೆ ನೀರಜ್‌ ಚೋಪ್ರಾ, ಕಪಿಲ್‌ ದೇವ್ ಬೆಂಬಲ

27ನೇ ಬಾರಿ 200+ ರನ್‌

ಪಂಜಾಬ್‌ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಎಸ್‌ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 4 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿದೆ.  ಈ ಮೂಲಕ ಐಪಿಎಲ್‌ನಲ್ಲಿ ಸಿಎಸ್‌ಕೆ 27ನೇ ಬಾರಿ 200 ಪ್ಲಸ್‌ ಮೊತ್ತವನ್ನು ದಾಖಲಿಸಿದಂತಾಗಿದೆ. ಐಪಿಎಲ್‌ ಇತಿಹಾಸದಲ್ಲೇ ಇದು ದಾಖಲೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X