ಐಪಿಎಲ್‌ 2023 | ಅಗ್ರಸ್ಥಾನಕ್ಕೇರಿದ ಗುಜರಾತ್‌; ಕೆಕೆಆರ್‌ ಪಡೆಗೆ ಆರನೇ ಸೋಲು

Date:

Advertisements

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಶನಿವಾರ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಟೂರ್ನಿಯ 39ನೇ ಪಂದ್ಯದಲ್ಲಿ ಗುಜರಾತ್‌, ಆತಿಥೇಯ ಕೆಕೆಆರ್‌ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ ಸುಲಭವಾಗಿ ಮಣಿಸಿತು.

ಕೋಲ್ಕತ್ತಾ ನೈಟ್‌ ರೈಡರ್ಸ್‌ ಮುಂದಿಟ್ಟಿದ್ದ 180 ರನ್‌ಗಳ ಗೆಲುವಿನ ಗುರಿಯನ್ನು ಗುಜರಾತ್‌, 17.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಚೇಸ್‌ ಮಾಡಿತು. ಅಮೋಘ ಫಾರ್ಮ್‌ ಮುಂದುವರಿಸಿದ ವಿಜಯ್‌ ಶಂಕರ್‌ ಭರ್ಜರಿ ಅರ್ಧಶತಕ (51 ರನ್‌, 24 ಎಸೆತ, 4×2, 6×5) ಆರಂಭಿಕ ಶುಭಮನ್‌ ಗಿಲ್‌ 49 ಹಾಗೂ ಡೇವಿಡ್‌ ಮಿಲ್ಲರ್‌ 32 ರನ್‌ಗಳಿಸುವ ಮೂಲಕ ಜಿಟಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಕುಸ್ತಿಪಟುಗಳ ಪ್ರತಿಭಟನೆ ʻಅಶಿಸ್ತುʼ ಎಂದ ಪಿಟಿ ಉಷಾ!

ಇದಕ್ಕೂ ಮೊದಲು ಬ್ಯಾಟ್‌ ಮಾಡಿದ್ದ ಕೆಕೆಆರ್‌ ಪರ ಆರಂಭಿಕ ರಹ್ಮಾನುಲ್ಲಾ ಗುರ್ಬಾಝ್‌, ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರಾದರೂ, ಸಹ ಆಟಗಾರರಿಂದ ಯಾವುದೇ ಬೆಂಬಲ ವ್ಯಕ್ತವಾಗಲಿಲ್ಲ. 39 ಎಸೆತಗಳನ್ನು ಎದುರಿಸಿದ ಗುರ್ಬಾಝ್ 7 ಸಿಕ್ಸರ್‌ ಮತ್ತು 5 ಬೌಂಡರಿಗಳ ನೆರವಿನೊಂದಿಗೆ 81 ರನ್‌ಗಳಿಸಿದ್ದ ವೇಳೆ ರಶೀದ್‌ ಖಾನ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಶಾರ್ದೂಲ್‌ ಠಾಕೂರ್‌ ಶೂನ್ಯ ಸುತ್ತಿದರೆ, ನಾಯಕ ನಿತೀಶ್‌ ರಾಣಾ ಕೇವಲ 4 ರನ್‌ಗಳಿಸುವಷ್ಟರಲ್ಲೇ ವಿಕೆಟ್‌ ಒಪ್ಪಿಸಿದ್ದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿತು.

ಬೌಲಿಂಗ್‌ನಲ್ಲಿ ಗುಜರಾತ್‌ ಪರ ಮುಹಮ್ಮದ್‌ ಶಮಿ 3, ಜಾಶ್‌ ಲಿಟ್ಲ್‌ ಮತ್ತು ನೂರ್‌ ಅಹ್ಮದ್‌ ತಲಾ 2 ವಿಕೆಟ್‌ ಪಡೆದರು.

ಟೂರ್ನಿಯಲ್ಲಿ 8ನೇ ಪಂದ್ಯವನ್ನಾಡಿದ ಗುಜರಾತ್‌ 6ನೇ ಗೆಲುವು ಸಾಧಿಸಿದರೆ, 9ನೇ ಪಂದ್ಯವನ್ನಾಡಿದ ಕೆಕೆಆರ್‌ 6ನೇ ಸೋಲು ಕಂಡಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಜಿಟಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್‌ 7ನೇ ಸ್ಥಾನಕ್ಕೆ ಕುಸಿದಿದೆ.   

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X