ಐಪಿಎಲ್‌ 2023 | ಚೆನ್ನೈ ವಿರುದ್ಧ ಅಂತಿಮ ಎಸೆತದಲ್ಲಿ ಗೆದ್ದ ಪಂಜಾಬ್‌!

Date:

Advertisements

ಅಂತಿಮ ಎಸೆತದವರೆಗೂ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್‌ ಕಿಂಗ್ಸ್‌, 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.  

ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆದ ಐಪಿಎಲ್‌ನ 16ನೇ ಆವೃತ್ತಿಯ 41ನೇ ಪಂದ್ಯದ ಫಲಿತಾಂಶಕ್ಕಾಗಿ ಇನ್ನಿಂಗ್ಸ್‌ನ ಕೊನೆಯ ಎಸೆತದವರೆಗೂ ಕಾಯಬೇಕಾಯಿತು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್ ಡೆವೋನ್‌ ಕಾನ್ವೆ ಗಳಿಸಿದ ಅಜೇಯ 92 ರನ್‌ಗಳ ನೆರವಿನಿಂದ 4 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿತ್ತು.

Advertisements

ಚೇಸಿಂಗ್‌ ವೇಳೆ ಪಂಜಾಬ್‌ ಕಿಂಗ್ಸ್‌ 19 ಓವರ್‌ಗಳಲ್ಲಿ 192 ರನ್‌ಗಳಿಸಿತ್ತು. ಉಳಿದ 6 ಎಸೆತಗಳಲ್ಲಿ 9 ರನ್‌ಗಳಿಸಬೇಕಾದ ಸುಲಭ ಗುರಿ ಪಂಜಾಬ್‌ ಮುಂದಿತ್ತು. ಆದರೆ ಅಂತಿಮ ಓವರ್‌ ಎಸೆದ ಯುವ ವೇಗಿ ಪತಿರಾನ ಮೊದಲ 5 ಎಸೆತಗಳಲ್ಲಿ 6 ರನ್‌ ಮಾತ್ರ ಬಿಟ್ಟು ಕೊಡುವ ಮೂಲಕ ಪಂದ್ಯವನ್ನು ರೋಚಕ ಘಟ್ಟಕ್ಕೆ ಕೊಂಡೊಯ್ದರು.  

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಕೋಪದಲ್ಲಿ ಕಿರುಚಾಡಿದ ಕೂಲ್ ಕ್ಯಾಪ್ಟನ್‌ ಧೋನಿ!

ಅಂತಿಮ ಎಸೆತದಲ್ಲಿ ಪಂಜಾಬ್‌ ಗೆಲುವಿಗೆ 3 ರನ್‌ಗಳ ಅಗತ್ಯವಿತ್ತು. ಪತಿರಾನ ಎಸೆದ ಶಾರ್ಟ್‌ ಲೆಂತ್‌ ಚೆಂಡನ್ನು ಸ್ಕ್ವಾರ್‌ ಲೆಗ್‌ ಕಡೆಗೆ ಬಾರಿಸುವಲ್ಲಿ ಸ್ಟ್ರೈಕ್‌ನಲ್ಲಿದ್ದ ಸಿಖಂದರ್‌ ರಝಾ ಯಶಸ್ವಿಯಾದರು. ಬೌಂಡರಿ ಲೈನ್‌ ಬಳಿ ರವೀಂದ್ರ ಜಡೇಜಾ ಚೆಂಡನ್ನು ತಡೆದರಾದರೂ ಸಹ, ಈ ನಡುವೆ ರಝಾ-ಶಾರೂಖ್‌ ಖಾನ್‌ ಜೋಡಿ ಮೂರು ರನ್‌ಗಳ ಓಟವನ್ನು ಪೂರ್ತಿಗೊಳಿಸಿ ತಂಡಕ್ಕೆ ಸ್ಮರಣೀಯ ಗೆಲುವು ತಂದಿತ್ತರು.  

 

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X