ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

Date:

Advertisements

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ.

ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

ಮೂರು ಓವರ್‌ ಬೌಲಿಂಗ್‌ನಲ್ಲಿ 3 ಬೈ ಸೇರಿದಂತೆ ಕೇವಲ 12 ರನ್‌ ಬಿಟ್ಟುಕೊಟ್ಟ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Advertisements

ಚೇಸಿಂಗ್‌ ವೇಳೆ 15ನೇ ಓವರ್‌ವರೆಗೂ ಗೆಲುವಿನತ್ತ ಮುನ್ನಡೆದಿದ್ದ ಎಸ್‌ಆರ್‌ಎಚ್‌, ಕೊನೆಯ 5 ಓವರ್‌ಗಳಲ್ಲಿ ಬ್ಯಾಟಿಂಗ್‌ನಲ್ಲಿ ತೋರಿದ ನಿರ್ಲ್ಯಕ್ಷದಿಂದಾಗಿ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಕೆಕೆಆರ್‌ 9 ವಿಕೆಟ್‌ ನಷ್ಟದಲ್ಲಿ 171 ರನ್‌ಗಳಿಸಿತ್ತು. ಸವಾಲಿನ ಮೊತ್ತ ಬೆನ್ನಟ್ಟುವ ವೇಳೆ ಹೈದರಾಬಾದ್‌ ತಂಡ 15 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್‌ ನಷ್ಟದಲ್ಲಿ 134 ರನ್‌ಗಳಿಸಿತ್ತು. ಮುಂದಿನ 30 ಎಸೆತಗಳಲ್ಲಿ 38 ರನ್‌ಗಳಿಸಬೇಕಾದ ಸಾಮನ್ಯ ಗುರಿ ಆತಿಥೇಯ ತಂಡದ ಎದುರಿಗಿತ್ತು. ಈ ವೇಳೆ ನಾಯಕ ಮಾರ್ಕಮ್‌ ಮತ್ತು ಅಬ್ದುಲ್‌ ಸಮದ್‌ ಕ್ರೀಸ್‌ನಲ್ಲಿದ್ದರು. ಹೀಗಾಗಿ ಗೆಲುವಿನ ಅವಕಾಶ ಆತಿಥೇಯ ತಂಡ ಪಾಲಿಗೆ ಇತ್ತು.

ಆದರೆ ಅಂತಿಮ 5 ಓವರ್‌ಗಳಲ್ಲಿ ಬಿಗು ಬೌಲಿಂಗ್‌ ಪ್ರದರ್ಶನ ನೀಡಿದ ಕೆಕೆಆರ್‌ ಬೌಲರ್‌ಗಳು, ಕೈ ಬಿಟ್ಟು ಹೋಗಿದ್ದ ಪಂದ್ಯವನ್ನು ಮತ್ತೆ ತಮ್ಮ ವಶಕ್ಕೆ ಪಡೆದರು. ಕೊನೆಯ 5 ಓವರ್‌ಗಳಲ್ಲಿ ಕ್ರಮವಾಗಿ 4,8,5,12 ಹಾಗೂ ಕೊನೆಯ ಓವರ್‌ನಲ್ಲಿ ಕೇವಲ ಮೂರು ರನ್‌ಗಳಿಸಲಷ್ಟೇ ಎಸ್‌ಆರ್‌ಎಚ್‌ ಬ್ಯಾಟರ್‌ಗಳಿಗೆ ಸಾಧ್ಯವಾಯಿತು.

ಅಂತಿಮ  6 ಎಸೆತಗಳಲ್ಲಿ ಎಸ್‌ಆರ್‌ಎಚ್‌ ಗೆಲುವಿಗೆ ಕೇವಲ 9 ರನ್‌ಗಳ ಅಗತ್ಯವಿತ್ತು. ಆದರೆ ಸ್ಪಿನ್ನರ್ ವರುಣ್‌ ಚಕ್ರವರ್ತಿ,  ಕೇವಲ ಮೂರು ರನ್ ಮಾತ್ರ ಬಿಟ್ಟುಕೊಡುವ ಕೊಡುವ ತಂಡಕ್ಕೆ ಗೆಲುವು ತಂದುಕೊಟ್ಟರು.   

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X