ಐಪಿಎಲ್‌ 2023 | ತವರಿನಂಗಳದ ಕೊನೆಯ ಪಂದ್ಯದಲ್ಲಿ ಎಡವಿದ ಧೋನಿ ಪಡೆ

Date:

Advertisements
  • ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆ
  • ಕೆಕೆಆರ್‌ ವಿರುದ್ಧ ಚೆನ್ನೈ ತಂಡಕ್ಕೆ ಸೋಲು

ಐಪಿಎಲ್‌ 16ನೇ ಆವೃತ್ತಿಯ ಪ್ಲೇ ಆಫ್‌ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಕೆಕೆಆರ್‌ ವಿರುದ್ಧ ಸೋಲು ಕಂಡಿದೆ. ಆ ಮೂಲಕ ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆ ಹಿನ್ನಡೆ ಕಂಡಿದೆ.

ಸಿಎಸ್‌ಕೆ ಮುಂದಿಟ್ಟಿದ್ದ 145 ರನ್‌ಗಳ ಸಾಮಾನ್ಯ ಸವಾಲನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ 18.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ ಸುಲಭವಾಗಿಯೇ ಚೇಸ್‌ ಮಾಡಿತು.

15 ಅಂಕಗಳನ್ನು ಹೊಂದಿರುವ ಚೆನ್ನೈ, ಮೇ 20ರಂದು ನಡೆಯುವ ಲೀಗ್‌ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಪ್ಲೇ ಆಫ್‌ ಪ್ರವೇಶಿಸಲು ಚೆನ್ನೈ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

Advertisements

13 ಪಂದ್ಯಗಳಿಂದ ಕೆಕೆಆರ್‌ 12 ಅಂಕಗಳನ್ನು ಹೊಂದಿದ್ದು, ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಅಂತಿಮ ಪಂದ್ಯವನ್ನಾಡಲಿದೆ.

ಕೈ ಕೊಟ್ಟ ಬ್ಯಾಟಿಂಗ್‌!   

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡುವ ಧೋನಿ ನಿರ್ಧಾರ ತಂಡಕ್ಕೆ ನೆರವಾಗಲಿಲ್ಲ. ನಿಧಾನಗತಿಯಲ್ಲಿ ಬ್ಯಾಟಿಂಗ್‌ ನಡೆಸಿದ ಚೆನ್ನೈ ಮೊದಲ 10 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟದಲ್ಲಿ 68 ರನ್‌ಗಳಿಸಿತ್ತು. ನಂತರದ 10 ಓವರ್‌ಗಳಲ್ಲಿ ಗಳಿಸಿದ್ದು 76 ರನ್‌.

ಶಿವಂ ದುಬೆ ಅಜೇಯ 48 ಮತ್ತು ಆರಂಭಿಕ ಡೆವೋನ್‌ ಕಾನ್ವೆ 30 ರನ್‌ಗಳಿಸಿದ್ದು ಹೊರತು ಪಡಿಸಿದರೆ ಉಳಿದ ಬ್ಯಾಟರ್‌ಗಳು ತಂಡಕ್ಕೆ ನೆರವಾಗಲಿಲ್ಲ.

ರಾಣಾ-ರಿಂಕು ಶತಕದ ಜೊತೆಯಾಟ

ಚೇಸಿಂಗ್‌ ವೇಳೆ ಕೆಕೆರ್‌ 33 ರನ್‌ಗಳಿಸುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಜೊತೆಯಾದ ನಾಯಕ ನಿತೀಶ್‌ ರಾಣಾ ಮತ್ತು ಎಡಗೈ ಬ್ಯಾಟರ್‌ ರಿಂಕು ಸಿಂಗ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ರಿಂಕು ಸಿಂಗ್‌ 54 ರನ್‌ಗಳಿಸಿದ್ದ ವೇಳೆ ರನೌಟ್‌ಗೆ ಬಲಿಯಾದರು. ರಾಣಾ 57 ರನ್‌ಗಳಿಸಿ ಅಜೇಯರಾಗುಳಿದರು.   

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X