ಐಪಿಎಲ್‌ 2023 | ಈಡನ್​ ಗಾರ್ಡನ್‌ನಲ್ಲಿ ಆರ್​ಸಿಬಿ- ಕೆಕೆಆರ್​ ಮುಖಾಮುಖಿ​

Date:

Advertisements

ಐಪಿಎಲ್‌ 16ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ. ಕೋಲ್ಕತ್ತಾದ ಈಡನ್​ ಗಾರ್ಡನ್​ ಮೈದಾನದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ.

ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ತವರಿನಲ್ಲಿ ಮಣಿಸಿದ ಹುಮ್ಮಸ್ಸಿನಲ್ಲಿರುವ ಫಾಫ್ ಡು ಪ್ಲೆಸಿಸ್ ಸಾರಥ್ಯದ ಆರ್‌ಸಿಬಿ, ಕೆಕೆಆರ್ ಜೊತೆಗಿನ ಎರಡನೇ ಪಂದ್ಯದಲ್ಲೂ ಗೆಲ್ಲುವ ಫೆವರಿಟ್‌ ತಂಡವಾಗಿ ಕಣಕ್ಕಿಳಿಯಲಿದೆ.  

ಮತ್ತೊಂದೆಡೆ ತನ್ನ ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿದ್ದ ನಿತೀಶ್ ರಾಣಾ ನೇತೃತ್ವದ ಕೋಲ್ಕತಾ ನೈಟ್‌ ರೈಡರ್ಸ್, ತವರು ಅಭಿಮಾನಿಗಳ ಬೆಂಬಲದೊಂದಿಗೆ ಆರ್‌ಸಿಬಿ ವಿರುದ್ಧ ಗೆದ್ದು ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದೆ.

Advertisements

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಐಪಿಎಲ್​ನಲ್ಲಿ ಈವರೆಗೂ ಒಟ್ಟು 30 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಕೆಕೆಆರ್​ ತಂಡವು 16 ಬಾರಿ ಮತ್ತು ಆರ್‌ಸಿಬಿ 14 ಗೆಲುವು ಕಂಡಿದೆ.

ಕೆಕೆಆರ್ ಸೇರಿದ ಜೇಸನ್ ರಾಯ್

ಬೆನ್ನು ನೋವಿನ ಸಮಸ್ಯೆಯಿಂದ ಕೆಕೆಆರ್ ನಾಯಕ ಶ್ರೇಯಸ್‌ ಅಯ್ಯರ್‌ ಈ ಬಾರಿಯ ಐಪಿಎಲ್‌ ಟೂರ್ನಿಯಿಂದಲೇ ಹೊರ ನಡೆದಿದ್ದಾರೆ. ಮತ್ತೋರ್ವ ಪ್ರಮುಖ ಆಲ್‌ರೌಂಡರ್‌ ಶಕಿಬ್‌ ಅಲ್ ಹಸನ್‌ ಅವರು ಈ ಟೂರ್ನಿಗೆ ಅಲಭ್ಯರಾಗಿದ್ದಾರೆ.

ಹೀಗಾಗಿ ಶಕಿಬ್ ಬದಲಿ ಆಟಗಾರನಾಗಿ ಇಂಗ್ಲೆಂಡ್​ನ ಸ್ಫೋಟಕ ಓಪನರ್​ ಜೇಸನ್ ರಾಯ್ ಜತೆ ಕೆಕೆಆರ್ ಒಪ್ಪಂದ ಮಾಡಿಕೊಂಡಿದೆ. ಜೇಸನ್ ರಾಯ್ ಅವರನ್ನು ₹2.8 ಕೋಟಿಗೆ ಖರೀದಿಸಿದೆ.

2017ರಲ್ಲಿ ಮೊದಲ ಬಾರಿಗೆ ಐಪಿಎಲ್​ ಅಖಾಡಕ್ಕೆ ಎಂಟ್ರಿಕೊಟ್ಟಿದ ರಾಯ್, ಇದುವರೆಗೆ 13 ಪಂದ್ಯಗಳನ್ನಾಡಿದ್ದಾರೆ. 29.90 ಸರಾಸರಿಯಲ್ಲಿ ಒಟ್ಟು 329 ರನ್ ಗಳಿಸಿದ್ದಾರೆ. ಕಳೆದ ಬಾರಿ ಜೇಸನ್‌ರನ್ನು ಗುಜರಾತ್ ಟೈಟಾನ್ಸ್ ₹2 ಕೋಟಿಗೆ ಖರೀದಿಸಿತ್ತು. ಆದರೆ ಟೂರ್ನಿಯಿಂದ ರಾಯ್​ ಹಿಂದೆ ಸರಿದಿದ್ದರು.‌

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ…

ಸಂಭಾವ್ಯ ತಂಡ:

ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ಮನದೀಪ್ ಸಿಂಗ್, ರಹ್ಮಾಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಆಂಡ್ರೆ ರಸೆಲ್, ಟಿಮ್ ಸೌಥಿ, ಸುನಿಲ್ ನರೈನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಅನುಕುಲ್ ರಾಯ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಕರಣ್‌ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮುಹಮ್ಮದ್ ಸಿರಾಜ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X