ಐಪಿಎಲ್‌ 2023 | ಲಕ್ನೋ vs ಮುಂಬೈ; ಗೆದ್ದರಷ್ಟೇ ಉಳಿಗಾಲ!

Date:

Advertisements
  • ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್‌ ಪಂದ್ಯ
  • ಪ್ಲೇ ಆಫ್‌ ಹಂತಕ್ಕೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯ

ಐಪಿಎಲ್‌ 16ನೇ ಆವೃತ್ತಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ಮಂಗಳವಾರ (ಮೇ 16) ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.  

ಪ್ಲೇ ಆಫ್‌ ಹಂತಕ್ಕೇರಲು ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಲಿದೆ. ಸೋಲುವ ತಂಡ ಕ್ವಾಲಿಫೈಯರ್‌ ರೇಸ್‌ನಿಂದ ಹೊರಬೀಳಲಿದೆ.

ಲೀಗ್‌ ಹಂತದ  14 ಪಂದ್ಯಗಳ ಪೈಕಿ ಉಭಯ ತಂಡಗಳು ಈಗಾಗಲೇ 12 ಪಂದ್ಯಗಳನ್ನಾಡಿವೆ. ಮುಂಬೈ 14 ಮತ್ತು ಲಕ್ನೋ 13 ಅಂಕಗಳನ್ನು ಹೊಂದಿದೆ.

Advertisements

ಇಂದಿನ ಪಂದ್ಯದ ಫಲಿತಾಂಶ ಇತ್ತಂಡಗಳನ್ನು ಹೊರತುಪಡಿಸಿ ಆರ್‌ಸಿಬಿ ಪಾಲಿಗೂ ಮಹತ್ವದ್ದಾಗಿದೆ. ಮುಂಬೈ ವಿರುದ್ಧ ಲಕ್ನೋ ತಂಡದ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ಆರ್‌ಸಿಬಿ ಅಭಿಮಾನಿಗಳು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಹೀಗಿದೆ ಪ್ಲೇ ಆಫ್‌ ಲೆಕ್ಕಾಚಾರ

ಈ ಬಾರಿಯ ಐಪಿಎಲ್‌ ಟೂರ್ನಿಯ ಲೀಗ್‌ ಹಂತದ ಒಟ್ಟು 70 ಪಂದ್ಯಗಳಲ್ಲಿ62 ಪಂದ್ಯಗಳು ಮುಕ್ತಾಯ ಕಂಡಿದೆ. ಆದರೆ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಮಾತ್ರವೇ ಪ್ಲೇ ಆಫ್‌ ಹಂತವನ್ನು ಪ್ರವೇಶಿಸಿದೆ. ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ (ಸಿಎಸ್‌ಕೆ, ಮುಂಬೈ, ಲಕ್ನೋ, ಆರ್‌ಸಿಬಿ) ತೀವ್ರ ಪೈಪೋಟಿ ಎದುರಾಗಿದೆ.

ಸೋಮವಾರ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್‌ ತಂಡ, ಹೈದರಾಬಾದ್‌ ಪಡೆಯನ್ನು 34 ರನ್‌ಗಳ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತ್ತು. ಹೀಗಾಗಿ 18 ಅಂಕಗಳನ್ನು ಹೊಂದುವುದರ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ.

ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲಿರುವ ಚೆನ್ನೈ ಬಳಿ 15 ಅಂಕಗಳಿದ್ದು, ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲನ್ನು ಎದುರಿಸಲಿದೆ. ಕ್ವಾಲಿಫೈಯರ್‌ ಹಂತಕ್ಕೆ ತೇರ್ಗಡೆಯಾಗಲು ಧೋನಿ ಬಳಗಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X