ಐಪಿಎಲ್‌ 2023 | ಧೋನಿ ಹೋರಾಟ ವ್ಯರ್ಥ; ಸಂಜು ಸ್ಯಾಮ್ಸನ್ ಪಡೆಗೆ ರೋಚಕ ಜಯ

Date:

Advertisements

ಜೋಸ್ ಬಟ್ಲರ್ ಅವರ ಅರ್ಧಶತಕ, ರವಿಚಂದ್ರನ್ ಅಶ್ವಿನ್ ಮತ್ತು ಯುಜ್ವೇಂದ್ರ ಚಾಹಲ್ ಅವರ ಎರಡು ವಿಕೆಟ್ ಗಳ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ, ಬಲಿಷ್ಠ ಚೆನ್ನೈ ತಂಡದ ವಿರುದ್ಧ 3 ರನ್‌ಗಳ ರೋಚಕ ಜಯ ಸಾಧಿಸಿದರು.

176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ಮಹೇಂದ್ರ ಸಿಂಗ್ ಧೋನಿ 17 ಎಸೆತಗಳಲ್ಲಿ 32 ಮತ್ತು ರವೀಂದ್ರ ಜಡೇಜಾ 15 ಎಸೆತಗಳಲ್ಲಿ 25 ರನ್ ಬಾರಿಸಿದರೂ ಕೊನೆಯಲ್ಲಿ ಸಂದೀಪ್ ಶರ್ಮಾ ಎಸೆದ ಉತ್ತಮ ಬೌಲಿಂಗ್‌ನಿಂದಾಗಿ ಸಂಜು ಸ್ಯಾಮ್ಸನ್ ಪಡೆ, ಕೊನೆಗೂ 3 ರನ್‌ಗಳ ರೋಚಕ ಜಯ ಗಳಿಸಲು ನೆರವಾದರು.

ನಿಗದಿತ 20 ಓವರ್‍‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್‌ಗೆ 172 ರನ್‌ ಅಷ್ಟೇ ಗಳಿಸಿತು.

Advertisements

ಬಟ್ಲರ್ ಉತ್ತಮ ಬ್ಯಾಟಿಂಗ್; ಚೆನ್ನೈಗೆ 176 ರನ್​​ ಗುರಿ ನೀಡಿದ್ದ ರಾಜಸ್ಥಾನ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐಪಿಎಲ್‌) 17ನೇ ಪಂದ್ಯದಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ 176 ರನ್‌ಗಳ ಗುರಿ ನೀಡಿದೆ ಸವಾಲಿನ ​​ ಗುರಿ ನೀಡಿತ್ತು.

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ಟಾಸ್​​ ಸೋತು ಮೊದಲು ಬ್ಯಾಟಿಂಗ್ ಮಾಡಿತ್ತು.

ರಾಯಲ್ಸ್​ ಪರವಾಗಿ ಓಪನರ್​ ಆಗಿ ಬಂದು ನಿರೀಕ್ಷೆ ಹುಟ್ಟಿಸಿದ್ದ ಜೈಸ್ವಾಲ್​ ಕೇವಲ 10 ರನ್‌ಗೆ ವಿಕೆಟ್​ ಒಪ್ಪಿಸಿದರು. ಬಳಿಕ ಕ್ರೀಸ್​ನಲ್ಲಿ ಸುಮಾರು 15 ಓವರ್‍‌ವರೆಗೂ ನಿಂತ ಜೋಸ್​ ಬಟ್ಲರ್, 36 ಎಸೆತಗಳಲ್ಲಿ 3 ಸಿಕ್ಸರ್​, 1 ಬೌಂಡರಿಯ ನೆರವಿನೊಂದಿಗೆ 52 ರನ್​ ಸಿಡಿಸಿ ಜವಾಬ್ದಾರಿಯುತ ಬ್ಯಾಟಿಂಗ್​ ಮಾಡಿದ್ದರು.

ಬಳಿಕ ಬಂದ ದೇವದತ್​ ಪಡಿಕ್ಕಲ್​ 38, ಅಶ್ವಿನ್​ 30, ಶಿಮ್ರಾನ್ ಹೆಟ್ಮಾಯರ್​ ಕೂಡ 30 ರನ್​ ಸಿಡಿಸಿದರು. ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟ್ ಆದರು. ರಾಜಸ್ಥಾನ್​​ ನಿಗದಿತ 20 ಓವರ್‍‌ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 175 ರನ್​ ಗಳಿಸಿತ್ತು.

ಚೆನ್ನೈ ಪರ ರವೀಂದ್ರ ಜಡೇಜ, ಆಕಾಶ್ ಸಿಂಗ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಮೊಯಿನ್ ಅಲಿ ಒಂದು ವಿಕೆಟ್ ಕಬಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X