ಐಪಿಎಲ್‌ 2023 | ಮುಂಬೈ vs ಆರ್‌ಸಿಬಿ; ಉಭಯ ತಂಡಗಳಿಗೂ ಗೆಲುವು ಅನಿವಾರ್ಯ!

Date:

Advertisements

ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ʻಹೈ ವೋಲ್ಟೇಜ್‌ʼ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು , ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ.

ಪ್ಲೇ ಆಫ್‌ ಹಂತದ ಆಸೆಯನ್ನು ಜೀವಂತವಾಗಿರಿಸಬೇಕಾದರೆ ಉಭಯ ತಂಡಗಳಿಗೂ ಇಂದಿನ ಪಂದ್ಯ ಅತ್ಯಂತ ಮಹತ್ವಾದ್ದಾಗಿದೆ. 

ಪ್ರಸಕ್ತ ಟೂರ್ನಿಯಲ್ಲಿ ಎರಡೂ ತಂಡಗಳು ತಲಾ 10 ಪಂದ್ಯಗಳನ್ನು ಆಡಿದ್ದು, ಅಷ್ಟೇ ಅಂಕಗಳನ್ನು ಹೊಂದಿವೆ. ಆದರೆ ಮುಂಬೈ ತಂಡಕ್ಕಿಂತಲೂ ಆರ್‌ಸಿಬಿ ಉತ್ತಮ ರನ್‌ ರೇಟ್‌ ಹೊಂದಿದೆ. ಅಂಕಪಟ್ಟಿಯಲ್ಲಿ ಸದ್ಯ ಆರ್‌ಸಿಬಿ 6 ಮತ್ತು ಮುಂಬೈ 8ನೇ ಸ್ಥಾನದಲ್ಲಿದೆ.

Advertisements

ಮುಂಬೈನ ವಾಂಖೆಡೆ ಮೈದಾನದಲ್ಲಿ ಮಂಗಳವಾರ ನಡೆಯುವ ಪಂದ್ಯದ ವಿಜೇತರು 12 ಅಂಕಗಳನ್ನು ಹೊಂದುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ. ಸೋಲು ಕಾಣುವ ತಂಡದ ಪ್ಲೇ ಆಫ್‌ ಹಾದಿ ಕಠಿಣವಾಗಲಿದೆ.

16ನೇ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಆರ್​ಸಿಬಿ, ಮುಂಬೈ ಇಂಡಿಯನ್ಸ್​ ವಿರುದ್ಧ ಆಡಿತ್ತು. ಮುಂಬೈ ಇಂಡಿಯನ್ಸ್​ ನೀಡಿದ್ದ 171 ರನ್‌ಗಳ ಗುರಿಯನ್ನು ಆರ್​ಸಿಬಿ, 16.2 ಓವರ್​ಗಳಲ್ಲಿ ಚೇಸ್‌ ಮಾಡಿತ್ತು.  

ಆರ್‌ಸಿಬಿ ಪಾಲಿಗೆ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡು ಪ್ಲೆಸಿಸ್ ಆಧಾರ ಸ್ತಂಭವಾಗಿದ್ದಾರೆ. ಇವರಿಬ್ಬರ ವಿಕೆಟ್‌ ಆರಂಭದಲ್ಲೇ ಪತನವಾದರೆ ಪಂದ್ಯದಲ್ಲಿ ಮುಂಬೈ ಕೈ ಮೇಲಾಗಲಿದೆ.

ರೋಹಿತ್​ ವೈಫಲ್ಯ: ಮುಂಬೈ ಇಂಡಿಯನ್ಸ್​ ಪಾಲಿಗೆ ನಾಯಕ ರೋಹಿತ್​ ಶರ್ಮಾ ಅವರ ಫಾರ್ಮ್‌ ಚಿಂತೆಯನ್ನುಂಟು ಮಾಡಿದೆ.  ಕಳೆದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದರೂ ಸಹ ಖಾತೆ ತೆರೆಯುವಲ್ಲಿ ವಿಫಲರಾಗಿದ್ದರು.  ಇದರೊಂದಿಗೆ ಐಪಿಎಲ್ ಚರಿತ್ರೆಯಲ್ಲೇ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ ಬ್ಯಾಟರ್‌  ಎಂಬ ಕುಖ್ಯಾತಿಗೂ ಒಳಗಾದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X