ಐಪಿಎಲ್‌ 2023 | 4 ವರ್ಷಗಳ ಬಳಿಕ ಅದ್ಧೂರಿ ಉದ್ಘಾಟನಾ ಸಮಾರಂಭ

Date:

4 ವರ್ಷಗಳ ಬಳಿಕ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್, ಐಪಿಎಲ್‌ ಟೂರ್ನಿಯ 16ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. 10 ತಂಡಗಳ ನಡುವೆ ಸುಮಾರು ಎರಡು ತಿಂಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿವೆ.

4 ವರ್ಷಗಳ ಬಳಿಕ ಉದ್ಘಾಟನಾ ಸಮಾರಂಭ

2008ರಲ್ಲಿ ಆರಂಭವಾದ ಚುಟುಕು ಕ್ರಿಕೆಟ್‌ ಟೂರ್ನಿ ಐಪಿಎಲ್‌, ಪ್ರತಿ ವರ್ಷವೂ ಅದ್ಧೂರಿ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗುತ್ತಿತ್ತು. ಆದರೆ ಕೋವಿಡ್‌ ಕಾರಣದಿಂದಾಗಿ ಐಪಿಎಲ್‌ನಲ್ಲಿ ಹಲವು ಮಾರ್ಪಾಟುಗಳನ್ನು ಮಾಡಲಾಗಿತ್ತು. ಜೊತೆಗೆ ಉದ್ಘಾಟನಾ ಸಮಾರಂಭ ಕೈಬಿಡಲಾಗಿತ್ತು. 4 ವರ್ಷಗಳ ಬಳಿಕ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.

ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ಆರಂಭಗೊಳ್ಳಲಿದ್ದು, ಖ್ಯಾತ ಗಾಯಕ ಅರ್ಜಿತ್ ಸಿಂಗ್‌‌, ಬಾಲಿವುಡ್‌ ತಾರೆಯರಾದ ತಮನ್ಹಾ ಭಾಟಿಯಾ, ರಶ್ಮಿಕಾ ಮಂದಣ್ಣ ಸುಮಾರು ಒಂದು ಗಂಟೆಗಳ ಕಾಲ ಪ್ರದರ್ಶನ ನೀಡಲಿದ್ದು, ನೃತ್ಯದ ಮೂಲಕ ಎಲ್ಲರನ್ನು ರಂಜಿಸಲಿದ್ದಾರೆ. ಬಳಿಕ ಹಾಲಿ ಚಾಂಪಿಯನ್ಸ್‌ ಗುಜರಾತ್ ಟೈಟನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ಐಪಿಎಲ್ -2023ರ ಮೊದಲ ಹಣಾಹಣಿ ನಡೆಯಲಿದೆ.

ರೋಹಿತ್‌ ಶರ್ಮಾ ಗೈರು

ಐಪಿಎಲ್‌ ಟೂರ್ನಿಯ 16ನೇ ಆವೃತ್ತಿಯ ಆರಂಭಕ್ಕೂ ಮುನ್ನುಡಿಯಾಗಿ ಗುರುವಾರ ಐಪಿಎಲ್‌ ಟ್ರೋಫಿ ಜೊತೆ ತಂಡಗಳ ನಾಯಕರ ಫೋಟೋಶೂಟ್‌ ನಡೆಯಿತು. ಈ ವೇಳೆ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮಾ ಹೊರತುಪಡಿಸಿ ಉಳಿದ 9 ತಂಡಗಳ ನಾಯಕರು ಭಾಗವಹಿಸಿದ್ದರು. ಅನಾರೋಗ್ಯದ ಕಾರಣ ಅಹಮದಾಬಾದ್‌ಗೆ ಪ್ರಯಾಣಿಸಲು ರೋಹಿತ್‌ ನಿರಾಕರಿಸಿದ್ದರು. ಸನ್‌ರೈಸರ್ಸ್‌ ತಂಡದ ನಾಯಕ ಏಡನ್ ಮಾರ್ಕ್ರಾಮ್ ಅನುಪಸ್ಥಿತಿಯಲ್ಲಿ, ಭುವನೇಶ್ವರ್ ಕುಮಾರ್ ಫೋಟೂಶೂಟ್‌ನಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಪಾಕಿಸ್ತಾನ ವಿರುದ್ಧ ಚೊಚ್ಚಲ ಟಿ20 ಸರಣಿ ಗೆದ್ದ ಅಫ್ಘಾನಿಸ್ತಾನ

ಮೂಲ ಸ್ವರೂಪಕ್ಕೆ ಮರಳಿದ ಐಪಿಎಲ್‌

ಐಪಿಎಲ್‌ ಮತ್ತೆ ತನ್ನ ಹಳೆಯ ಮಾದರಿಗೆ ವಾಪಸಾಗಿದ್ದು, 2019ರ ಬಳಿಕ ಎಲ್ಲಾ ತಂಡಗಳು ತಮ್ಮ ತವರು ಮತ್ತು ಎದುರಾಳಿ ತಂಡಗಳ ಮೈದಾನದಲ್ಲಿ ತಲಾ 7 ಪಂದ್ಯಗಳನ್ನು ಆಡಲಿವೆ. 18 ಡಬಲ್ ಹೆಡರ್‌ ಸೇರಿದಂತೆ ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಅಹಮದಾಬಾದ್‌, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಹಾಗೂ ಧರ್ಮಶಾಲಾ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿದೆ.

ರಾಜಸ್ಥಾನ ತಂಡವು ತನ್ನ ತವರಿನ ಪಂದ್ಯಗಳನ್ನು ಜೈಪುರ, ಗುವಾಹಟಿಯಲ್ಲಿ ಆಡಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್  ತವರಿನ 5 ಪಂದ್ಯಗಳನ್ನು ಮೊಹಾಲಿಯಲ್ಲಿ ಮತ್ತು ಉಳಿದ ಎರಡು ತವರು ಪಂದ್ಯಗಳನ್ನು ಧರ್ಮಶಾಲಾದಲ್ಲಿ ಆಡಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್...